Advertisement
Share
ಸವಣೂರು: ಸರ್ವೆ ಶ್ರೀ ಷಣ್ಮುಖ ಯುವಕ ಮಂಡಲದ ವತಿಯಿಂದ ಅಂತರ್ಜಲ ವೃದ್ಧಿಗೆ ಸಾರ್ವಜನಿಕರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಹಾಗೂ ತರಬೇತಿ ಕಾರ್ಯಕ್ರಮ ” ನೀರಿಂಗಿಸೋಣ ಬನ್ನಿ ” ಸ ಹಿ ಪ್ರಾ ಶಾಲೆ ಭಕ್ತಕೋಡಿಯಲ್ಲಿ ನಡೆಯಿತು.
ಪ್ರಾಥಮಿಕ ಕೃಷಿ ಪತ್ತಿನ  ಸಹಕಾರಿ ಸಂಘ  ಮಂಡೂರಿನ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಗ್ರಾಮಸ್ಥರು ಯುವಕ ಮಂಡಲದ “ನೀರಿಂಗಿಸೋಣ ಬನ್ನಿ ” ಕಾರ್ಯಕ್ರಮದೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದರಲ್ಲದೆ ಸಹಕಾರಿ ಸಂಘದಿಂದ ಸಹಕಾರದ ಭರವಸೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವಕ ಮಂಡಲದ ಗೌರವಾಧ್ಯಕ್ಷರ ಗ್ರಾಮ ಪಂ ಅಧ್ಯಕ್ಷ ಎಸ್ ಡಿ ವಸಂತ ಅಧ್ಯಕ್ಷತೆ ವಹಿಸಿ ಮಾತನಾಡಿ ಮಳೆ  ನೀರಿಂಗಿಸುವ ಹಾಗೂ ಜಲ ಮರುಪೂರಣ ಯೋಜನೆಗಳಿಗೆ ಲಭ್ಯ ಸರಕಾರಿ ಅನುದಾನಗಳ ಬಗ್ಗೆ ಮಾಹಿತಿ ನೀಡಿದರು.
ಯುವಕ ಮಂಡಲದ ಗೌರವ ಸಲಹೆಗಾರರಾದ  ವೀರಪ್ಪ ಗೌಡ ಕರಂಬಾರು, ಎಸ್ ಜಿ ಎಂ ಪ್ರೌಢಶಾಲೆಯ ಮುಖ್ಯ ಗುರುಗಳಾದ ಶ್ರೀನಿವಾಸ್ ಎಚ್ ಬಿ ಮುಖ್ಯ ಅತಿಥಿಗಳಾಗಿದ್ದರು.
ಶಿಬಿರಾರ್ಥಿಗಳಿಗೆ ಮಾಹಿತಿ ಮತ್ತು ತರಬೇತಿ  ಕಾರ್ಯಕ್ರಮ ನಡೆಸಿಕೊಟ್ಟ ಅಂತರ್ಜಲ ತಜ್ಞ, ಉಪನ್ಯಾಸಕ ಡಾ ಶ್ರೀಶಕುಮಾರ್ ,” ಮಳೆ ನೀರಿಂಗಿಸಲು ಕೈಗೊಳ್ಳಬಹುದಾದ 14 ವಿವಿಧ ವಿಧಾನಗಳ ಮಾಹಿತಿ ನೀಡಿದರು. ಅಂತರ್ಜಲ ಅಭಿವೃದ್ಧಿಗೆ ಪೂರಕವಾಗಿ ನೆಡಬಹುದಾದ ಸಸ್ಯಗಳ ಮಾಹಿತಿ ನೀಡಿದ ಅವರು ಅಕೇಶಿಯಾದಂತಹ ಪ್ರಕೃತಿಗೆ ಮಾರಕವಾದ ಗಿಡಗಳನ್ನು ನೆಡುವ ಬದಲು ಅಶ್ವತ್ಥ, ಆರ್ತಿ, ಬೇಲ, ಬಿಲ್ವ, ಹುಣಸೆ, ಕಹಿಬೇವು, ಮೊದಲಾದ  ಗಿಡಗಳನ್ನು ನೆಡುವುದರಿಂದ ಅಂತರ್ಜಲ ಅಭಿವೃದ್ಧಿ ಆಗುತ್ತದೆ ಎಂದರು. ರಾಜಸ್ಥಾನ ರಾಜ್ಯದ ಅರುವಾರಿ ಜಿಲ್ಲೆಯನ್ನು ಮಳೆ ನೀರಿಂಗಿಸುವ ಅಭಿಯಾನದ ಮೂಲಕ  ಬರಮುಕ್ತಗೊಳಿಸಿದ ಡಾ ರಾಜೇಂದ್ರ ಸಿಂಗ್ ರಂತವರ ಯಶೋಗಾಥೆಯಿಂದ ಸರ್ವೆ ಗ್ರಾಮದ ಯುವಜನರು  ಪ್ರೇರಿತರಾಗಿ ಅಂತರ್ಜಲ ವೃದ್ಧಿಗಾಗಿ ಜಲಯೋಧರಾಗಿ ಸಮರೋಪಾಧಿಯಲ್ಲಿ ದುಡಿಯಬೇಕಿದೆ ಎಂದರು.
ಯುವಕ ಮಂಡಲದ ಅಧ್ಯಕ್ಷರಾದ ಕಮಲೇಶ್ ಸರ್ವೆದೋಳಗುತ್ತು ಪ್ರಸ್ತಾವನೆಗೈದರು. ಕಾರ್ಯಕಾರಿ ಸಮಿತಿ ಸದಸ್ಯ ರಾಮಣ್ಣ ಪೂಜಾರಿ ವಿಜಯ ಬ್ಯಾಂಕ್ ಸ್ವಾಗತಿಸಿದರು, ಡಾ ಪ್ರವೀಣ್ ಸರ್ವೆದೋಳಗುತ್ತು ಅತಿಥಿಗಳನ್ನು ಗೌರವಿಸಿದರು . ವಸಂತ ಪೂಜಾರಿ ಕೈಪಂಗಳದೋಳ ವಂದಿಸಿದರು. ಮಾಜಿ ಅಧ್ಯಕ್ಷರಾದ ರಾಜೇಶ್ ಎಸ್ ಡಿ ಕಾರ್ಯಕ್ರಮ ನಿರೂಪಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

11 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

11 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 day ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 day ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 day ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago