Advertisement
Categories: Uncategorized

ನೀರಿಗಾಗಿ ಗ್ರಾಮಸ್ಥರೇ ಇಳಿದು ಕೆಲಸ ಮಾಡಿದರು..!

Share

ಗುತ್ತಿಗಾರು: ನೀರಿಲ್ಲ ಎಂದು ಗ್ರಾಮ ಪಂಚಾಯತ್ ಬರಬೇಕು ಎಂದು ಕಾಯಲಿಲ್ಲ. ಪಂಚಾಯತ್ ನಲ್ಲಿ ವ್ಯವಸ್ಥೆ ಏನಿದು ಎಂದು ಕೇಳಿದರು, ತಾವೇ ಕೆಲಸಕ್ಕೆ ಮುಂದಾದರು ಹೀಗೆ ಮಾದರಿಯಾದ್ದು  ಗುತ್ತಿಗಾರು ಗ್ರಾಮದ ಕಮಿಲದ ಯುವಕರು.

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದಲ್ಲಿ  ಸುಮಾರು 10 ರಿಂದ 15 ಮನೆಗಳಿಗೆ ಬೇಸಗೆಯಲ್ಲಿ  ಕುಡಿಯುವ ನೀರಿನ ವ್ಯವಸ್ಥೆ ಸರಿ ಇಲ್ಲ. ಈಗಲ್ಲ ಕಳೆದ ಕೆಲವು ವರ್ಷಗಳಿಂದ ಈ ಸಮಸ್ಯೆ ಇದೆ. ಇದಕ್ಕಾಗಿ  ಪಂಚಾಯತ್ ವತಿಯಿಂದ ಕೊಳವೆಬಾವಿ ತೋಡಲಾಗಿದೆ, ದುರದೃಷ್ಟವಶಾತ್ ಅದರಲ್ಲಿ ಸರಿಯಾಗಿ ನೀರಿಲ್ಲ. ಹೀಗಾಗಿ ಸಮೀಪದಲ್ಲೇ ಇರುವ ಹೊಳೆಗೆ ಒಪನ್ ವೆಲ್ ನಿರ್ಮಾಣ ಮಾಡಿ ಪಂಪ್ ಸಂಪರ್ಕವೂ ಆಗಿದೆ. ಎತ್ತರದಲ್ಲಿ ನೀರಿನ ಟ್ಯಾಂಕ್ ಕೂಡಾ ಇದೆ. ಆದರೆ ಹೊಳೆಯಲ್ಲೂ ನೀರಿನ ಮಟ್ಟ ಇಳಿದಿದೆ. ಹೀಗಾಗಿ ಈಗ ನೀರಿಲ್ಲ. ಕೆಲವು ಮನೆಯವರು ದೂರದಿಂದ ನೀರು ಹೊತ್ತು ತರುತ್ತಾರೆ. ಕೆಲವು ಬಾರಿ ಸಂಬಂಧಿತರ ಗಮನಕ್ಕೆ ತಂದರು. ಆದರೆ ಆಗಲಿಲ್ಲ.  ಕೆಲವು ವರ್ಷಗಳಿಂದ ಇರುವ ಈ ಸಮಸ್ಯೆಯನ್ನು ಯಾರ ಬಳಿ ಹೇಳುವುದು  ಎನ್ನುವುದು  ತಿಳಿಯದೇ ಮುಗ್ದ ಜನರು ನೀರು ಹೊರುತ್ತಲೇ ಇದ್ದರು.

 

ಹೀಗಾಗಿ ಸ್ಥಳೀಯ ಯುವಕರು ಕೆಲಸಕ್ಕೆ ಮುಂದಾದರು. ಈ ಸಂದರ್ಭ ಸ್ಥಳಿಯ ಪಂಚಾಯತ್ ಸದಸ್ಯ ರಘುವೀರ್ ಜೊತೆ ಮಾತನಾಡಿದರು. ನೀರಿನ ಸಮಸ್ಯೆ ಬಗ್ಗೆ ಮಾತನಾಡಿದರು. ತಕ್ಷಣವೇ ಗ್ರಾಮ ಪಂಚಾಯತ್ ಸಿಬಂದಿಗಳ ಜೊತೆಗೂ ಮಾತನಾಡಿ, ನಾವೇ ಕೆಲಸ ಮಾಡುತ್ತೇವೆ, ಅನುದಾನಗಳು ಇದ್ದರೆ ಕೊಡಿ, ಕೆಲಸ ಮಾಡಿಸುತ್ತೇವೆ ಎಂದರು. ಅದರ ಜೊತೆಗೇ ಕೆಲಸವೂ ಶುರು ಮಾಡಿದರು. ನಂತರ ಪಂಚಾಯತ್ ಪಿಡಿಒ ಸ್ಥಳಕ್ಕೆ ಆಗಮಿಸಿದರು. ಗ್ರಾಪಂ ಸದಸ್ಯ ರಘುವೀರ್ ಜೊತೆಗಿದ್ದರು. ಜೊತೆಗೆ ಸ್ಥಳೀಯ ಗ್ರಾಪಂ ಸದಸ್ಯ  ಜಯಪ್ರಕಾಶ್ ಮೊಗ್ರ ಅವರೂ ಬಂದರು.

 

 

ಯುವಕರ ತಂಡ ಕೆಲಸ ಮಾಡಿತು. ಅನುದಾನಗಳನ್ನು ನೀಡುವ ಭರವಸೆಯನ್ನು ಎಲ್ಲಾ ಪಂಚಾಯತ್ ಸದಸ್ಯರು ನೀಡಿದರು, ಪಿಡಿಒ ಅವರೂ ಅನುದಾನ ಒದಗಿಸುವ ಭರವಸೆ ನೀಡಿದರು.

 

 

ಒಂದು ಊರಿನ ಅಭಿವೃದ್ಧಿ ಹಾಗೂ ಜನರ ಸಮಸ್ಯೆ ನಿವಾರಣೆಗೆ ಯುವಕರೇ ರಚನಾತ್ಮಕವಾಗಿ ಕೆಲಸ ಮಾಡಿದರೆ ಹೇಗೆ ಕಾರ್ಯಗಳು ನಡೆಯುತ್ತದೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆ. ಎಲ್ಲದಕ್ಕೂ ರಾಜಕೀಯ ಬೆರೆಸುವುದು ಹಾಗೂ ಯಾರೋ ಇಂತಹ  ಒಳ್ಳೆಯ ಕಾರ್ಯದ ಮೈಲೇಜ್ ಪಡೆಯುತ್ತಾರೆ ಎಂದು ಹೇಳುತ್ತಾ ಕೂತರೆ ಕೆಲಸಗಳು ನಡೆಯದು. ಹೊಂಡ ಗುಂಡಿ ಇರುವ ರಸ್ತೆ, ನೀರಿಲ್ಲದೇ ಪರದಾಡುವ ಜನರ ಸಂಖ್ಯೆ ಹೆಚ್ಚಾದೀತು. ಊರು ಅಭಿವೃದ್ಧಿಯಾಗಲು ರಾಜಕೀಯ ರಹಿತವಾದ ಇಂತಹ ರಚನಾತ್ಮಕ ಕಾರ್ಯಗಳು ಹೆಚ್ಚು ನಡೆಯಬೇಕಾಗಿದೆ. ಇದಕ್ಕಾಗಿ ಕಮಿಲದ ಯುವಕರು ಮಾದರಿಯಾಗಿದ್ದಾರೆ.

 

ಕಳೆದ ಅನೇಕ ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಇದೆ. ಸ್ಥಳೀಯ ಮುಖಂಡರು ನೀರಿನ ಸಮಸ್ಯೆ ನಿವಾರಣೆಗೆ ಪ್ರಯತ್ನ ಮಾಡಿದ್ದಾರೆ. ಆದರೆ ಈಗ ನೀರಿಲ್ಲದೆ ಎಲ್ಲೆಲ್ಲಿಂದಲೋ ತರಬೇಕಾದ ಸ್ಥಿತಿ ಇದೆ ಎಂದು ಹೇಳುತ್ತಾರೆ ಕಮಿಲದ ನಿವಾಸಿ ವಾಡ್ಯಪ್ಪ.

 

 

 

ಕಮಿಲದ ನೀರಿನ ಸಮಸ್ಯೆ ನಿವಾರಣೆಗೆ ಶಾಶ್ವತವಾದ ಪರಿಹಾರ ಬೇಕಾಗಿದೆ. ಕೊಳವೆಬಾವಿಯಲ್ಲಿ ನೀರಿಲ್ಲ. ಹೀಗಾಗಿ ಒಂದು ವ್ಯವಸ್ಥೆ ಬೇಕಾಗಿದೆ ಎಂದು ಹೇಳುತ್ತಾರೆ ಕಮಿಲದ ನಿತ್ಯಾನಂದ ಕಾಂತಿಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

6 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

7 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

2 days ago