Advertisement
Categories: Uncategorized

ನೀರಿಗಾಗಿ ಗ್ರಾಮಸ್ಥರೇ ಇಳಿದು ಕೆಲಸ ಮಾಡಿದರು..!

Share

ಗುತ್ತಿಗಾರು: ನೀರಿಲ್ಲ ಎಂದು ಗ್ರಾಮ ಪಂಚಾಯತ್ ಬರಬೇಕು ಎಂದು ಕಾಯಲಿಲ್ಲ. ಪಂಚಾಯತ್ ನಲ್ಲಿ ವ್ಯವಸ್ಥೆ ಏನಿದು ಎಂದು ಕೇಳಿದರು, ತಾವೇ ಕೆಲಸಕ್ಕೆ ಮುಂದಾದರು ಹೀಗೆ ಮಾದರಿಯಾದ್ದು  ಗುತ್ತಿಗಾರು ಗ್ರಾಮದ ಕಮಿಲದ ಯುವಕರು.

Advertisement
Advertisement

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದಲ್ಲಿ  ಸುಮಾರು 10 ರಿಂದ 15 ಮನೆಗಳಿಗೆ ಬೇಸಗೆಯಲ್ಲಿ  ಕುಡಿಯುವ ನೀರಿನ ವ್ಯವಸ್ಥೆ ಸರಿ ಇಲ್ಲ. ಈಗಲ್ಲ ಕಳೆದ ಕೆಲವು ವರ್ಷಗಳಿಂದ ಈ ಸಮಸ್ಯೆ ಇದೆ. ಇದಕ್ಕಾಗಿ  ಪಂಚಾಯತ್ ವತಿಯಿಂದ ಕೊಳವೆಬಾವಿ ತೋಡಲಾಗಿದೆ, ದುರದೃಷ್ಟವಶಾತ್ ಅದರಲ್ಲಿ ಸರಿಯಾಗಿ ನೀರಿಲ್ಲ. ಹೀಗಾಗಿ ಸಮೀಪದಲ್ಲೇ ಇರುವ ಹೊಳೆಗೆ ಒಪನ್ ವೆಲ್ ನಿರ್ಮಾಣ ಮಾಡಿ ಪಂಪ್ ಸಂಪರ್ಕವೂ ಆಗಿದೆ. ಎತ್ತರದಲ್ಲಿ ನೀರಿನ ಟ್ಯಾಂಕ್ ಕೂಡಾ ಇದೆ. ಆದರೆ ಹೊಳೆಯಲ್ಲೂ ನೀರಿನ ಮಟ್ಟ ಇಳಿದಿದೆ. ಹೀಗಾಗಿ ಈಗ ನೀರಿಲ್ಲ. ಕೆಲವು ಮನೆಯವರು ದೂರದಿಂದ ನೀರು ಹೊತ್ತು ತರುತ್ತಾರೆ. ಕೆಲವು ಬಾರಿ ಸಂಬಂಧಿತರ ಗಮನಕ್ಕೆ ತಂದರು. ಆದರೆ ಆಗಲಿಲ್ಲ.  ಕೆಲವು ವರ್ಷಗಳಿಂದ ಇರುವ ಈ ಸಮಸ್ಯೆಯನ್ನು ಯಾರ ಬಳಿ ಹೇಳುವುದು  ಎನ್ನುವುದು  ತಿಳಿಯದೇ ಮುಗ್ದ ಜನರು ನೀರು ಹೊರುತ್ತಲೇ ಇದ್ದರು.

Advertisement

 

Advertisement

ಹೀಗಾಗಿ ಸ್ಥಳೀಯ ಯುವಕರು ಕೆಲಸಕ್ಕೆ ಮುಂದಾದರು. ಈ ಸಂದರ್ಭ ಸ್ಥಳಿಯ ಪಂಚಾಯತ್ ಸದಸ್ಯ ರಘುವೀರ್ ಜೊತೆ ಮಾತನಾಡಿದರು. ನೀರಿನ ಸಮಸ್ಯೆ ಬಗ್ಗೆ ಮಾತನಾಡಿದರು. ತಕ್ಷಣವೇ ಗ್ರಾಮ ಪಂಚಾಯತ್ ಸಿಬಂದಿಗಳ ಜೊತೆಗೂ ಮಾತನಾಡಿ, ನಾವೇ ಕೆಲಸ ಮಾಡುತ್ತೇವೆ, ಅನುದಾನಗಳು ಇದ್ದರೆ ಕೊಡಿ, ಕೆಲಸ ಮಾಡಿಸುತ್ತೇವೆ ಎಂದರು. ಅದರ ಜೊತೆಗೇ ಕೆಲಸವೂ ಶುರು ಮಾಡಿದರು. ನಂತರ ಪಂಚಾಯತ್ ಪಿಡಿಒ ಸ್ಥಳಕ್ಕೆ ಆಗಮಿಸಿದರು. ಗ್ರಾಪಂ ಸದಸ್ಯ ರಘುವೀರ್ ಜೊತೆಗಿದ್ದರು. ಜೊತೆಗೆ ಸ್ಥಳೀಯ ಗ್ರಾಪಂ ಸದಸ್ಯ  ಜಯಪ್ರಕಾಶ್ ಮೊಗ್ರ ಅವರೂ ಬಂದರು.

 

Advertisement

 

Advertisement

ಯುವಕರ ತಂಡ ಕೆಲಸ ಮಾಡಿತು. ಅನುದಾನಗಳನ್ನು ನೀಡುವ ಭರವಸೆಯನ್ನು ಎಲ್ಲಾ ಪಂಚಾಯತ್ ಸದಸ್ಯರು ನೀಡಿದರು, ಪಿಡಿಒ ಅವರೂ ಅನುದಾನ ಒದಗಿಸುವ ಭರವಸೆ ನೀಡಿದರು.

 

Advertisement

 

Advertisement

ಒಂದು ಊರಿನ ಅಭಿವೃದ್ಧಿ ಹಾಗೂ ಜನರ ಸಮಸ್ಯೆ ನಿವಾರಣೆಗೆ ಯುವಕರೇ ರಚನಾತ್ಮಕವಾಗಿ ಕೆಲಸ ಮಾಡಿದರೆ ಹೇಗೆ ಕಾರ್ಯಗಳು ನಡೆಯುತ್ತದೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆ. ಎಲ್ಲದಕ್ಕೂ ರಾಜಕೀಯ ಬೆರೆಸುವುದು ಹಾಗೂ ಯಾರೋ ಇಂತಹ  ಒಳ್ಳೆಯ ಕಾರ್ಯದ ಮೈಲೇಜ್ ಪಡೆಯುತ್ತಾರೆ ಎಂದು ಹೇಳುತ್ತಾ ಕೂತರೆ ಕೆಲಸಗಳು ನಡೆಯದು. ಹೊಂಡ ಗುಂಡಿ ಇರುವ ರಸ್ತೆ, ನೀರಿಲ್ಲದೇ ಪರದಾಡುವ ಜನರ ಸಂಖ್ಯೆ ಹೆಚ್ಚಾದೀತು. ಊರು ಅಭಿವೃದ್ಧಿಯಾಗಲು ರಾಜಕೀಯ ರಹಿತವಾದ ಇಂತಹ ರಚನಾತ್ಮಕ ಕಾರ್ಯಗಳು ಹೆಚ್ಚು ನಡೆಯಬೇಕಾಗಿದೆ. ಇದಕ್ಕಾಗಿ ಕಮಿಲದ ಯುವಕರು ಮಾದರಿಯಾಗಿದ್ದಾರೆ.

 

Advertisement

ಕಳೆದ ಅನೇಕ ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ಇದೆ. ಸ್ಥಳೀಯ ಮುಖಂಡರು ನೀರಿನ ಸಮಸ್ಯೆ ನಿವಾರಣೆಗೆ ಪ್ರಯತ್ನ ಮಾಡಿದ್ದಾರೆ. ಆದರೆ ಈಗ ನೀರಿಲ್ಲದೆ ಎಲ್ಲೆಲ್ಲಿಂದಲೋ ತರಬೇಕಾದ ಸ್ಥಿತಿ ಇದೆ ಎಂದು ಹೇಳುತ್ತಾರೆ ಕಮಿಲದ ನಿವಾಸಿ ವಾಡ್ಯಪ್ಪ.

 

Advertisement

 

 

Advertisement

ಕಮಿಲದ ನೀರಿನ ಸಮಸ್ಯೆ ನಿವಾರಣೆಗೆ ಶಾಶ್ವತವಾದ ಪರಿಹಾರ ಬೇಕಾಗಿದೆ. ಕೊಳವೆಬಾವಿಯಲ್ಲಿ ನೀರಿಲ್ಲ. ಹೀಗಾಗಿ ಒಂದು ವ್ಯವಸ್ಥೆ ಬೇಕಾಗಿದೆ ಎಂದು ಹೇಳುತ್ತಾರೆ ಕಮಿಲದ ನಿತ್ಯಾನಂದ ಕಾಂತಿಲ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |

ಜೀವಾಮೃತದ ಫಲಿತಾಂಶದ ಬಗ್ಗೆ ಮಂಗಳೂರಿನ ಡಾ.ಮನೋಹರ ಉಪಾಧ್ಯ ಅವರು ಬರೆದಿದ್ದಾರೆ...

13 hours ago

ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |

ತಾಪಮಾನ ಏರಿಕೆಯಾಗುತ್ತಿದೆ. ಮಳೆಯಾಗುತ್ತಿಲ್ಲ. ಮುಂದೆ ಇನ್ನಷ್ಟು ತಾಪಮಾನ ಏರಿಕೆ ನಿರೀಕ್ಷೆ ಇದೆ. ಹೀಗಾಗಿ…

13 hours ago

ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ | ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ | ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ |

ಸ್ವಚ್ಛತಾ ಆಂದೋಲನಗಳು ಹಲವು ನಡೆದವು. ಸ್ವಚ್ಛತಾ ಜಾಗೃತಿಗಳು ನಡೆದವು.ಪ್ರತೀ ವಾರ ಕಸ ಹೆಕ್ಕುವ…

14 hours ago

ನಮ್ಮ ಮಕ್ಕಳಿಗಾಗಿ ಒಂದು ನೀತಿ ಕಥೆ | ಸಾಧ್ಯವಾದರೆ ಇದನ್ನು ಮಕ್ಕಳಿಗೆ ಓದಿ ಹೇಳಿ ಅಥವಾ ಓದಲು ಹೇಳಿ |

ಭಾವನಾತ್ಮಕ(Sentimental) ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ(Social media) ಹರಿದಾಡುತ್ತಿದೆ. ಅದರ ಒಳ ಅರ್ಥ…

14 hours ago

ಚಿನ್ನದ ದರದಲ್ಲಿ ಭಾರಿ ಇಳಿಕೆ | ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ..!

ಚುನಾವಣೆ(Election) ಬರುತ್ತಿದ್ದಂತೆ ಅನೇಕ ದಿನನಿತ್ಯ ವಸ್ತುಗಳ ಬೆಳೆ ಇಳಿಯೋದು(price low) ಮಾಮೂಲು. ಆದರೆ,…

14 hours ago

Karnataka Weather | 01-05-2024 | ಮುಂದುವರಿದ ಅಧಿಕ ತಾಪಮಾನ | ಮಲೆನಾಡು ತಪ್ಪಲು ಭಾಗದಲ್ಲಿ ಅನಿರೀಕ್ಷಿತ ಮಳೆ ಸಾಧ್ಯತೆ |

ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ…

17 hours ago