ನೀರಿನ ಕೊರತೆ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದೇನು ….?

May 18, 2019
6:22 PM

ಧರ್ಮಸ್ಥಳ : ರಾಜ್ಯದಲ್ಲೇ ಇಂದು ಬರದ ಲಕ್ಷಣ ಇದೆ. ಈ ವರ್ಷ ದ.ಕ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಧರ್ಮಸ್ಥಳದಲ್ಲೂ ಈ ಸಮಸ್ಯೆ ಇದೆ. ಹೀಗೇ ಮುಂದುವರಿದರೆ ದೇವರ ಅಭಿಷೇಕಕ್ಕೂ ನೀರಿನ ಸಮಸ್ಯೆ ಕಾಡಬಹುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಆತಂಕ ವ್ಯಕ್ತಪಡಿಸಿದ್ದಾರೆ.

 

 

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೀರಿಗೆ  ಬರದ ಹಿನ್ನೆಲೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾಧ್ಯಮದವರೊಂದಿಗೆ ಮಾತನಾಡಿದರು.

ಘಟ್ಟದ ಭಾಗದಿಂದ ನೀರು ಹರಿದು ಬರುವುದರಿಂದ ನೇತ್ರಾವತಿಯಲ್ಲಿ ನೀರು‌ ಹೆಚ್ಚಿರುತ್ತದೆ.  ಆದರೆ ಈ ಬಾರಿ ಮಳೆ ಸಾಕಷ್ಟಿದ್ದರೂ ನೇತ್ರಾವತಿಯಲ್ಲಿ  ನೀರು ಈಗ ಬತ್ತಿದೆ. ಈಗ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಇಲ್ಲ ಎಂದಿರುವುದರಿಂದ ಕ್ಷೇತ್ರ ದರ್ಶನ ಮುಂದೂಡಿ ಎಂದು ವಿನಂತಿ ಮಾಡುತ್ತೇವೆ ಎಂದರು.

ಈಗ ಕಿಂಡಿ ಅಣೆಕಟ್ಟು ಕಟ್ಟಿದ ಕಾರಣ ತೀರ್ಥ ಮತ್ತು ಅಭಿಷೇಕಕ್ಕೆ ನೀರಿದೆ. ಈಗ ಅಲ್ಲಿ ತೀರ್ಥ ಗುಂಡಿಯಲ್ಲೂ ನೀರು ಕಡಿಮೆ ಆಗುತ್ತಿದೆ. ಈ ಹಿಂದೆಯೂ ಈ ರೀತಿ ಆಗಿದೆ, ಇಷ್ಟು ತೀವ್ರವಾಗಿ ಆಗಿಲ್ಲ ಎಂದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ
August 12, 2026
8:24 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ
August 12, 2026
8:03 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror