ಧರ್ಮಸ್ಥಳ : ರಾಜ್ಯದಲ್ಲೇ ಇಂದು ಬರದ ಲಕ್ಷಣ ಇದೆ. ಈ ವರ್ಷ ದ.ಕ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಧರ್ಮಸ್ಥಳದಲ್ಲೂ ಈ ಸಮಸ್ಯೆ ಇದೆ. ಹೀಗೇ ಮುಂದುವರಿದರೆ ದೇವರ ಅಭಿಷೇಕಕ್ಕೂ ನೀರಿನ ಸಮಸ್ಯೆ ಕಾಡಬಹುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಆತಂಕ ವ್ಯಕ್ತಪಡಿಸಿದ್ದಾರೆ.
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೀರಿಗೆ ಬರದ ಹಿನ್ನೆಲೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾಧ್ಯಮದವರೊಂದಿಗೆ ಮಾತನಾಡಿದರು.
ಘಟ್ಟದ ಭಾಗದಿಂದ ನೀರು ಹರಿದು ಬರುವುದರಿಂದ ನೇತ್ರಾವತಿಯಲ್ಲಿ ನೀರು ಹೆಚ್ಚಿರುತ್ತದೆ. ಆದರೆ ಈ ಬಾರಿ ಮಳೆ ಸಾಕಷ್ಟಿದ್ದರೂ ನೇತ್ರಾವತಿಯಲ್ಲಿ ನೀರು ಈಗ ಬತ್ತಿದೆ. ಈಗ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಇಲ್ಲ ಎಂದಿರುವುದರಿಂದ ಕ್ಷೇತ್ರ ದರ್ಶನ ಮುಂದೂಡಿ ಎಂದು ವಿನಂತಿ ಮಾಡುತ್ತೇವೆ ಎಂದರು.
ಈಗ ಕಿಂಡಿ ಅಣೆಕಟ್ಟು ಕಟ್ಟಿದ ಕಾರಣ ತೀರ್ಥ ಮತ್ತು ಅಭಿಷೇಕಕ್ಕೆ ನೀರಿದೆ. ಈಗ ಅಲ್ಲಿ ತೀರ್ಥ ಗುಂಡಿಯಲ್ಲೂ ನೀರು ಕಡಿಮೆ ಆಗುತ್ತಿದೆ. ಈ ಹಿಂದೆಯೂ ಈ ರೀತಿ ಆಗಿದೆ, ಇಷ್ಟು ತೀವ್ರವಾಗಿ ಆಗಿಲ್ಲ ಎಂದರು.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…