ಧರ್ಮಸ್ಥಳ : ರಾಜ್ಯದಲ್ಲೇ ಇಂದು ಬರದ ಲಕ್ಷಣ ಇದೆ. ಈ ವರ್ಷ ದ.ಕ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಧರ್ಮಸ್ಥಳದಲ್ಲೂ ಈ ಸಮಸ್ಯೆ ಇದೆ. ಹೀಗೇ ಮುಂದುವರಿದರೆ ದೇವರ ಅಭಿಷೇಕಕ್ಕೂ ನೀರಿನ ಸಮಸ್ಯೆ ಕಾಡಬಹುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಆತಂಕ ವ್ಯಕ್ತಪಡಿಸಿದ್ದಾರೆ.
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೀರಿಗೆ ಬರದ ಹಿನ್ನೆಲೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾಧ್ಯಮದವರೊಂದಿಗೆ ಮಾತನಾಡಿದರು.
ಘಟ್ಟದ ಭಾಗದಿಂದ ನೀರು ಹರಿದು ಬರುವುದರಿಂದ ನೇತ್ರಾವತಿಯಲ್ಲಿ ನೀರು ಹೆಚ್ಚಿರುತ್ತದೆ. ಆದರೆ ಈ ಬಾರಿ ಮಳೆ ಸಾಕಷ್ಟಿದ್ದರೂ ನೇತ್ರಾವತಿಯಲ್ಲಿ ನೀರು ಈಗ ಬತ್ತಿದೆ. ಈಗ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಇಲ್ಲ ಎಂದಿರುವುದರಿಂದ ಕ್ಷೇತ್ರ ದರ್ಶನ ಮುಂದೂಡಿ ಎಂದು ವಿನಂತಿ ಮಾಡುತ್ತೇವೆ ಎಂದರು.
ಈಗ ಕಿಂಡಿ ಅಣೆಕಟ್ಟು ಕಟ್ಟಿದ ಕಾರಣ ತೀರ್ಥ ಮತ್ತು ಅಭಿಷೇಕಕ್ಕೆ ನೀರಿದೆ. ಈಗ ಅಲ್ಲಿ ತೀರ್ಥ ಗುಂಡಿಯಲ್ಲೂ ನೀರು ಕಡಿಮೆ ಆಗುತ್ತಿದೆ. ಈ ಹಿಂದೆಯೂ ಈ ರೀತಿ ಆಗಿದೆ, ಇಷ್ಟು ತೀವ್ರವಾಗಿ ಆಗಿಲ್ಲ ಎಂದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…