ಧರ್ಮಸ್ಥಳ : ರಾಜ್ಯದಲ್ಲೇ ಇಂದು ಬರದ ಲಕ್ಷಣ ಇದೆ. ಈ ವರ್ಷ ದ.ಕ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಧರ್ಮಸ್ಥಳದಲ್ಲೂ ಈ ಸಮಸ್ಯೆ ಇದೆ. ಹೀಗೇ ಮುಂದುವರಿದರೆ ದೇವರ ಅಭಿಷೇಕಕ್ಕೂ ನೀರಿನ ಸಮಸ್ಯೆ ಕಾಡಬಹುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಆತಂಕ ವ್ಯಕ್ತಪಡಿಸಿದ್ದಾರೆ.
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೀರಿಗೆ ಬರದ ಹಿನ್ನೆಲೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾಧ್ಯಮದವರೊಂದಿಗೆ ಮಾತನಾಡಿದರು.
ಘಟ್ಟದ ಭಾಗದಿಂದ ನೀರು ಹರಿದು ಬರುವುದರಿಂದ ನೇತ್ರಾವತಿಯಲ್ಲಿ ನೀರು ಹೆಚ್ಚಿರುತ್ತದೆ. ಆದರೆ ಈ ಬಾರಿ ಮಳೆ ಸಾಕಷ್ಟಿದ್ದರೂ ನೇತ್ರಾವತಿಯಲ್ಲಿ ನೀರು ಈಗ ಬತ್ತಿದೆ. ಈಗ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಇಲ್ಲ ಎಂದಿರುವುದರಿಂದ ಕ್ಷೇತ್ರ ದರ್ಶನ ಮುಂದೂಡಿ ಎಂದು ವಿನಂತಿ ಮಾಡುತ್ತೇವೆ ಎಂದರು.
ಈಗ ಕಿಂಡಿ ಅಣೆಕಟ್ಟು ಕಟ್ಟಿದ ಕಾರಣ ತೀರ್ಥ ಮತ್ತು ಅಭಿಷೇಕಕ್ಕೆ ನೀರಿದೆ. ಈಗ ಅಲ್ಲಿ ತೀರ್ಥ ಗುಂಡಿಯಲ್ಲೂ ನೀರು ಕಡಿಮೆ ಆಗುತ್ತಿದೆ. ಈ ಹಿಂದೆಯೂ ಈ ರೀತಿ ಆಗಿದೆ, ಇಷ್ಟು ತೀವ್ರವಾಗಿ ಆಗಿಲ್ಲ ಎಂದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…