ಧರ್ಮಸ್ಥಳ : ರಾಜ್ಯದಲ್ಲೇ ಇಂದು ಬರದ ಲಕ್ಷಣ ಇದೆ. ಈ ವರ್ಷ ದ.ಕ ಜಿಲ್ಲೆಯಲ್ಲಿ ಭಾರೀ ನೀರಿನ ಸಮಸ್ಯೆಯಾಗಿದೆ. ಧರ್ಮಸ್ಥಳದಲ್ಲೂ ಈ ಸಮಸ್ಯೆ ಇದೆ. ಹೀಗೇ ಮುಂದುವರಿದರೆ ದೇವರ ಅಭಿಷೇಕಕ್ಕೂ ನೀರಿನ ಸಮಸ್ಯೆ ಕಾಡಬಹುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಆತಂಕ ವ್ಯಕ್ತಪಡಿಸಿದ್ದಾರೆ.
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನೀರಿಗೆ ಬರದ ಹಿನ್ನೆಲೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾಧ್ಯಮದವರೊಂದಿಗೆ ಮಾತನಾಡಿದರು.
ಘಟ್ಟದ ಭಾಗದಿಂದ ನೀರು ಹರಿದು ಬರುವುದರಿಂದ ನೇತ್ರಾವತಿಯಲ್ಲಿ ನೀರು ಹೆಚ್ಚಿರುತ್ತದೆ. ಆದರೆ ಈ ಬಾರಿ ಮಳೆ ಸಾಕಷ್ಟಿದ್ದರೂ ನೇತ್ರಾವತಿಯಲ್ಲಿ ನೀರು ಈಗ ಬತ್ತಿದೆ. ಈಗ ಹವಾಮಾನ ಇಲಾಖೆ ಇನ್ನೂ ಹತ್ತು ದಿನ ಮಳೆ ಇಲ್ಲ ಎಂದಿರುವುದರಿಂದ ಕ್ಷೇತ್ರ ದರ್ಶನ ಮುಂದೂಡಿ ಎಂದು ವಿನಂತಿ ಮಾಡುತ್ತೇವೆ ಎಂದರು.
ಈಗ ಕಿಂಡಿ ಅಣೆಕಟ್ಟು ಕಟ್ಟಿದ ಕಾರಣ ತೀರ್ಥ ಮತ್ತು ಅಭಿಷೇಕಕ್ಕೆ ನೀರಿದೆ. ಈಗ ಅಲ್ಲಿ ತೀರ್ಥ ಗುಂಡಿಯಲ್ಲೂ ನೀರು ಕಡಿಮೆ ಆಗುತ್ತಿದೆ. ಈ ಹಿಂದೆಯೂ ಈ ರೀತಿ ಆಗಿದೆ, ಇಷ್ಟು ತೀವ್ರವಾಗಿ ಆಗಿಲ್ಲ ಎಂದರು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…