ನೀರಿನ ಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿ ದೆಸೆಯಲ್ಲಿಯೇ ಆಸಕ್ತಿ ಬೆಳೆಸಿಕೊಳ್ಳಬೇಕು

July 9, 2019
10:30 AM

ಸುಳ್ಯ: ನೀರು ಜಗತ್ತಿನ ಅಮೂಲ್ಯವಾದ ಸಂಪತ್ತು. ನೀರಿಲ್ಲದೆ ಭವಿಷ್ಯದ ದಿನಗಳು ಕರಾಳವಾಗಬಹುದು. ನೀರಿನ ಕೊರತೆಯನ್ನು ನಾವು ಇಂದು ಎದುರಿಸುತ್ತಿದ್ದೇವೆ. ಈ ಬಗ್ಗೆ ನಾವು ಜಾಗೃತರಾಗದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಈ ಬಗ್ಗೆ ವಿದ್ಯಾರ್ಥಿ ದೆಸೆಯಲ್ಲಿಯೇ ವಿದ್ಯಾರ್ಥಿಗಳು ಆಸಕ್ಕಿ ಬೆಳೆಸಿಕೊಳ್ಳಬೇಕು ಎಂದು ಯುವ ಕೃಷಿ ಹಾಗೂ ಜಲತಜ್ಞ ವಸಂತ್ ನಾಯಕ್ ನುಡಿದರು.
ಅವರು ಅರಂತೋಡು ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ಆರ್. ಎನ್. ಫಾರೆಸ್ಟ್ ಸ್ಕೂಲ್ ಕರಿಕೆ ಹಾಗೂ ಕಾಲೇಜಿನ ಪ್ರಕೃತಿ ಇಕೋ ಕ್ಲಬ್ ಆಶ್ರಯ ದಲ್ಲಿ ಜರುಗಿದ ‘ನೀರಿನ ಸಂರಕ್ಷಣೆಯ ಕ್ರಮಗಳು’ ಎಂಬ ವಿಷಯದಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಮಾಹಿತಿ ಉಪನ್ಯಾಸ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಎನ್.ಎಂ.ಸಿ. ಹೈಸ್ಕೂಲಿನ ಮುಖ್ಯ ಶಿಕ್ಷಕರಾದ ಆನಂದ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಆರ್. ಎನ್. ಫಾರೆಸ್ಟ್ ಸ್ಕೂಲಿನ ನಿರ್ದೇಶಕ ರಾದ ರಮಾನಾಥ್ ಬಿ.ಎಸ್ ಹಾಗೂ ನವನೀತ್ ಡಿ. ಹಿಂಗಾಣಿ ಉಪಸ್ಥಿತರಿದ್ದರು. ಸಂಸ್ಥೆಯ ಹಿಂದಿ ಶಿಕ್ಷಕರಾದ ಕಿಶೋರ್ ಕಿರ್ಲಾಯ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |
May 28, 2025
2:27 PM
by: ಸಾಯಿಶೇಖರ್ ಕರಿಕಳ
ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!
May 28, 2025
11:04 AM
by: ದ ರೂರಲ್ ಮಿರರ್.ಕಾಂ
ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ
ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |
May 27, 2025
1:31 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group