ಸುಳ್ಯ: ನೀರು ಜಗತ್ತಿನ ಅಮೂಲ್ಯವಾದ ಸಂಪತ್ತು. ನೀರಿಲ್ಲದೆ ಭವಿಷ್ಯದ ದಿನಗಳು ಕರಾಳವಾಗಬಹುದು. ನೀರಿನ ಕೊರತೆಯನ್ನು ನಾವು ಇಂದು ಎದುರಿಸುತ್ತಿದ್ದೇವೆ. ಈ ಬಗ್ಗೆ ನಾವು ಜಾಗೃತರಾಗದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಈ ಬಗ್ಗೆ ವಿದ್ಯಾರ್ಥಿ ದೆಸೆಯಲ್ಲಿಯೇ ವಿದ್ಯಾರ್ಥಿಗಳು ಆಸಕ್ಕಿ ಬೆಳೆಸಿಕೊಳ್ಳಬೇಕು ಎಂದು ಯುವ ಕೃಷಿ ಹಾಗೂ ಜಲತಜ್ಞ ವಸಂತ್ ನಾಯಕ್ ನುಡಿದರು.
ಅವರು ಅರಂತೋಡು ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ಆರ್. ಎನ್. ಫಾರೆಸ್ಟ್ ಸ್ಕೂಲ್ ಕರಿಕೆ ಹಾಗೂ ಕಾಲೇಜಿನ ಪ್ರಕೃತಿ ಇಕೋ ಕ್ಲಬ್ ಆಶ್ರಯ ದಲ್ಲಿ ಜರುಗಿದ ‘ನೀರಿನ ಸಂರಕ್ಷಣೆಯ ಕ್ರಮಗಳು’ ಎಂಬ ವಿಷಯದಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಮಾಹಿತಿ ಉಪನ್ಯಾಸ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಎನ್.ಎಂ.ಸಿ. ಹೈಸ್ಕೂಲಿನ ಮುಖ್ಯ ಶಿಕ್ಷಕರಾದ ಆನಂದ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಆರ್. ಎನ್. ಫಾರೆಸ್ಟ್ ಸ್ಕೂಲಿನ ನಿರ್ದೇಶಕ ರಾದ ರಮಾನಾಥ್ ಬಿ.ಎಸ್ ಹಾಗೂ ನವನೀತ್ ಡಿ. ಹಿಂಗಾಣಿ ಉಪಸ್ಥಿತರಿದ್ದರು. ಸಂಸ್ಥೆಯ ಹಿಂದಿ ಶಿಕ್ಷಕರಾದ ಕಿಶೋರ್ ಕಿರ್ಲಾಯ ಕಾರ್ಯಕ್ರಮ ನಿರ್ವಹಿಸಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…