ಸುಳ್ಯ: ನೀರು ಜಗತ್ತಿನ ಅಮೂಲ್ಯವಾದ ಸಂಪತ್ತು. ನೀರಿಲ್ಲದೆ ಭವಿಷ್ಯದ ದಿನಗಳು ಕರಾಳವಾಗಬಹುದು. ನೀರಿನ ಕೊರತೆಯನ್ನು ನಾವು ಇಂದು ಎದುರಿಸುತ್ತಿದ್ದೇವೆ. ಈ ಬಗ್ಗೆ ನಾವು ಜಾಗೃತರಾಗದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಈ ಬಗ್ಗೆ ವಿದ್ಯಾರ್ಥಿ ದೆಸೆಯಲ್ಲಿಯೇ ವಿದ್ಯಾರ್ಥಿಗಳು ಆಸಕ್ಕಿ ಬೆಳೆಸಿಕೊಳ್ಳಬೇಕು ಎಂದು ಯುವ ಕೃಷಿ ಹಾಗೂ ಜಲತಜ್ಞ ವಸಂತ್ ನಾಯಕ್ ನುಡಿದರು.
ಅವರು ಅರಂತೋಡು ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ಆರ್. ಎನ್. ಫಾರೆಸ್ಟ್ ಸ್ಕೂಲ್ ಕರಿಕೆ ಹಾಗೂ ಕಾಲೇಜಿನ ಪ್ರಕೃತಿ ಇಕೋ ಕ್ಲಬ್ ಆಶ್ರಯ ದಲ್ಲಿ ಜರುಗಿದ ‘ನೀರಿನ ಸಂರಕ್ಷಣೆಯ ಕ್ರಮಗಳು’ ಎಂಬ ವಿಷಯದಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಮಾಹಿತಿ ಉಪನ್ಯಾಸ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಎನ್.ಎಂ.ಸಿ. ಹೈಸ್ಕೂಲಿನ ಮುಖ್ಯ ಶಿಕ್ಷಕರಾದ ಆನಂದ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಆರ್. ಎನ್. ಫಾರೆಸ್ಟ್ ಸ್ಕೂಲಿನ ನಿರ್ದೇಶಕ ರಾದ ರಮಾನಾಥ್ ಬಿ.ಎಸ್ ಹಾಗೂ ನವನೀತ್ ಡಿ. ಹಿಂಗಾಣಿ ಉಪಸ್ಥಿತರಿದ್ದರು. ಸಂಸ್ಥೆಯ ಹಿಂದಿ ಶಿಕ್ಷಕರಾದ ಕಿಶೋರ್ ಕಿರ್ಲಾಯ ಕಾರ್ಯಕ್ರಮ ನಿರ್ವಹಿಸಿದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…