ಸುಳ್ಯ: ನೀರು ಜಗತ್ತಿನ ಅಮೂಲ್ಯವಾದ ಸಂಪತ್ತು. ನೀರಿಲ್ಲದೆ ಭವಿಷ್ಯದ ದಿನಗಳು ಕರಾಳವಾಗಬಹುದು. ನೀರಿನ ಕೊರತೆಯನ್ನು ನಾವು ಇಂದು ಎದುರಿಸುತ್ತಿದ್ದೇವೆ. ಈ ಬಗ್ಗೆ ನಾವು ಜಾಗೃತರಾಗದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಈ ಬಗ್ಗೆ ವಿದ್ಯಾರ್ಥಿ ದೆಸೆಯಲ್ಲಿಯೇ ವಿದ್ಯಾರ್ಥಿಗಳು ಆಸಕ್ಕಿ ಬೆಳೆಸಿಕೊಳ್ಳಬೇಕು ಎಂದು ಯುವ ಕೃಷಿ ಹಾಗೂ ಜಲತಜ್ಞ ವಸಂತ್ ನಾಯಕ್ ನುಡಿದರು.
ಅವರು ಅರಂತೋಡು ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ಆರ್. ಎನ್. ಫಾರೆಸ್ಟ್ ಸ್ಕೂಲ್ ಕರಿಕೆ ಹಾಗೂ ಕಾಲೇಜಿನ ಪ್ರಕೃತಿ ಇಕೋ ಕ್ಲಬ್ ಆಶ್ರಯ ದಲ್ಲಿ ಜರುಗಿದ ‘ನೀರಿನ ಸಂರಕ್ಷಣೆಯ ಕ್ರಮಗಳು’ ಎಂಬ ವಿಷಯದಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಮಾಹಿತಿ ಉಪನ್ಯಾಸ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಎನ್.ಎಂ.ಸಿ. ಹೈಸ್ಕೂಲಿನ ಮುಖ್ಯ ಶಿಕ್ಷಕರಾದ ಆನಂದ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಆರ್. ಎನ್. ಫಾರೆಸ್ಟ್ ಸ್ಕೂಲಿನ ನಿರ್ದೇಶಕ ರಾದ ರಮಾನಾಥ್ ಬಿ.ಎಸ್ ಹಾಗೂ ನವನೀತ್ ಡಿ. ಹಿಂಗಾಣಿ ಉಪಸ್ಥಿತರಿದ್ದರು. ಸಂಸ್ಥೆಯ ಹಿಂದಿ ಶಿಕ್ಷಕರಾದ ಕಿಶೋರ್ ಕಿರ್ಲಾಯ ಕಾರ್ಯಕ್ರಮ ನಿರ್ವಹಿಸಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…