ಸುಳ್ಯ: ನೀರು ಜಗತ್ತಿನ ಅಮೂಲ್ಯವಾದ ಸಂಪತ್ತು. ನೀರಿಲ್ಲದೆ ಭವಿಷ್ಯದ ದಿನಗಳು ಕರಾಳವಾಗಬಹುದು. ನೀರಿನ ಕೊರತೆಯನ್ನು ನಾವು ಇಂದು ಎದುರಿಸುತ್ತಿದ್ದೇವೆ. ಈ ಬಗ್ಗೆ ನಾವು ಜಾಗೃತರಾಗದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಈ ಬಗ್ಗೆ ವಿದ್ಯಾರ್ಥಿ ದೆಸೆಯಲ್ಲಿಯೇ ವಿದ್ಯಾರ್ಥಿಗಳು ಆಸಕ್ಕಿ ಬೆಳೆಸಿಕೊಳ್ಳಬೇಕು ಎಂದು ಯುವ ಕೃಷಿ ಹಾಗೂ ಜಲತಜ್ಞ ವಸಂತ್ ನಾಯಕ್ ನುಡಿದರು.
ಅವರು ಅರಂತೋಡು ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ಆರ್. ಎನ್. ಫಾರೆಸ್ಟ್ ಸ್ಕೂಲ್ ಕರಿಕೆ ಹಾಗೂ ಕಾಲೇಜಿನ ಪ್ರಕೃತಿ ಇಕೋ ಕ್ಲಬ್ ಆಶ್ರಯ ದಲ್ಲಿ ಜರುಗಿದ ‘ನೀರಿನ ಸಂರಕ್ಷಣೆಯ ಕ್ರಮಗಳು’ ಎಂಬ ವಿಷಯದಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಮಾಹಿತಿ ಉಪನ್ಯಾಸ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಎನ್.ಎಂ.ಸಿ. ಹೈಸ್ಕೂಲಿನ ಮುಖ್ಯ ಶಿಕ್ಷಕರಾದ ಆನಂದ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಆರ್. ಎನ್. ಫಾರೆಸ್ಟ್ ಸ್ಕೂಲಿನ ನಿರ್ದೇಶಕ ರಾದ ರಮಾನಾಥ್ ಬಿ.ಎಸ್ ಹಾಗೂ ನವನೀತ್ ಡಿ. ಹಿಂಗಾಣಿ ಉಪಸ್ಥಿತರಿದ್ದರು. ಸಂಸ್ಥೆಯ ಹಿಂದಿ ಶಿಕ್ಷಕರಾದ ಕಿಶೋರ್ ಕಿರ್ಲಾಯ ಕಾರ್ಯಕ್ರಮ ನಿರ್ವಹಿಸಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…