ಸುಳ್ಯ: ನೀರು ಜಗತ್ತಿನ ಅಮೂಲ್ಯವಾದ ಸಂಪತ್ತು. ನೀರಿಲ್ಲದೆ ಭವಿಷ್ಯದ ದಿನಗಳು ಕರಾಳವಾಗಬಹುದು. ನೀರಿನ ಕೊರತೆಯನ್ನು ನಾವು ಇಂದು ಎದುರಿಸುತ್ತಿದ್ದೇವೆ. ಈ ಬಗ್ಗೆ ನಾವು ಜಾಗೃತರಾಗದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ಈ ಬಗ್ಗೆ ವಿದ್ಯಾರ್ಥಿ ದೆಸೆಯಲ್ಲಿಯೇ ವಿದ್ಯಾರ್ಥಿಗಳು ಆಸಕ್ಕಿ ಬೆಳೆಸಿಕೊಳ್ಳಬೇಕು ಎಂದು ಯುವ ಕೃಷಿ ಹಾಗೂ ಜಲತಜ್ಞ ವಸಂತ್ ನಾಯಕ್ ನುಡಿದರು.
ಅವರು ಅರಂತೋಡು ನೆಹರು ಮೆಮೋರಿಯಲ್ ಪಿಯು ಕಾಲೇಜಿನಲ್ಲಿ ಆರ್. ಎನ್. ಫಾರೆಸ್ಟ್ ಸ್ಕೂಲ್ ಕರಿಕೆ ಹಾಗೂ ಕಾಲೇಜಿನ ಪ್ರಕೃತಿ ಇಕೋ ಕ್ಲಬ್ ಆಶ್ರಯ ದಲ್ಲಿ ಜರುಗಿದ ‘ನೀರಿನ ಸಂರಕ್ಷಣೆಯ ಕ್ರಮಗಳು’ ಎಂಬ ವಿಷಯದಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ವಿಶೇಷ ಮಾಹಿತಿ ಉಪನ್ಯಾಸ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಎನ್.ಎಂ.ಸಿ. ಹೈಸ್ಕೂಲಿನ ಮುಖ್ಯ ಶಿಕ್ಷಕರಾದ ಆನಂದ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಆರ್. ಎನ್. ಫಾರೆಸ್ಟ್ ಸ್ಕೂಲಿನ ನಿರ್ದೇಶಕ ರಾದ ರಮಾನಾಥ್ ಬಿ.ಎಸ್ ಹಾಗೂ ನವನೀತ್ ಡಿ. ಹಿಂಗಾಣಿ ಉಪಸ್ಥಿತರಿದ್ದರು. ಸಂಸ್ಥೆಯ ಹಿಂದಿ ಶಿಕ್ಷಕರಾದ ಕಿಶೋರ್ ಕಿರ್ಲಾಯ ಕಾರ್ಯಕ್ರಮ ನಿರ್ವಹಿಸಿದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…