ಸುಬ್ರಹ್ಮಣ್ಯ: ಶಾಲೆಗೆ ರಜೆ ಸಿಕ್ಕಿದ ಹಿನ್ನಲೆಯಲ್ಲಿ ಮಕ್ಕಳ ಜೊತೆ ತವರಿಗೆ ಬಂದಿದ್ದ ಮಹಿಳೆ ಹೊಳೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸುಬ್ರಹ್ಮಣ್ಯದ ಅಗರಿಕಜೆಯಲ್ಲಿ ನಡೆದಿದೆ. ಮೃತ ದುರ್ದೈವಿ ಮಹಿಳೆ ಗುತ್ತಿಗಾರು ನಿವಾಸಿ ಛತ್ರಪ್ಪಾಡಿ ಕುಮಾರ ಎಂಬವರ ಪತ್ನಿ ರಾಧಾ(35) ಎಂದು ಗುರುತಿಸಲಾಗಿದೆ.
ಸುಬ್ರಹ್ಮಣ್ಯ ಅಗರಿಕಜೆ ಕುಂಞ ಅವರ ಪುತ್ರಿ ರಾಧಾಳನ್ನು ಗುತ್ತಿಗಾರಿನ ಛತ್ರಪ್ಪಾಡಿ ನಿವಾಸಿ ಕುಮಾರ ಎನ್ನುವವರಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗಳಿಗೆ ಮೂವರು ಮಕ್ಕಳಿದ್ದು ಶಾಲೆಗೆ ರಜೆ ದೊರೆತ ಕಾರಣ ದಂಪತಿಗಳು ಮಕ್ಕಳ ಜತೆ ತವರು ಮನೆಯಾದ ಅಗರಿಕಜೆಗೆ ಎ.20ರಂದು ಬಂದಿದ್ದರು.
ಮಂಗಳವಾರ ಮನೆ ಪಕ್ಕದ ಹೊಳೆಗೆ ಹೊಳೆಯಲ್ಲಿ ಕೊಚ್ಚಿ ಬರುವ ಅಡಿಕೆ ಹೆಕ್ಕಲೆಂದು ತೆರಳಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ. ಪತ್ನಿ ಬರದೆ ಇರುವುದನ್ನು ಗಮನಿಸಿದ ಗಂಡ ಹುಡುಕುತ್ತ ಹೊಳೆಯತ್ತ ತೆರಳಿದಾಗ ಮಹಿಳೆಯ ಚಪ್ಪಲಿ ನೀರಿನಲ್ಲಿ ತೇಲುತ್ತಿರುವುದು ಕಂಡುಬಂದಿದೆ. ಈ ವೇಳೆ ಮಹಿಳೆಯ ಮೃತ ದೇಹ ನೀರಿನಲ್ಲಿ ಕಂಡುಬಂದಿದೆ. ಸುಬ್ರಹ್ಮಣ್ಯ ಪೆÇಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…