ಸುಬ್ರಹ್ಮಣ್ಯ: ಶಾಲೆಗೆ ರಜೆ ಸಿಕ್ಕಿದ ಹಿನ್ನಲೆಯಲ್ಲಿ ಮಕ್ಕಳ ಜೊತೆ ತವರಿಗೆ ಬಂದಿದ್ದ ಮಹಿಳೆ ಹೊಳೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸುಬ್ರಹ್ಮಣ್ಯದ ಅಗರಿಕಜೆಯಲ್ಲಿ ನಡೆದಿದೆ. ಮೃತ ದುರ್ದೈವಿ ಮಹಿಳೆ ಗುತ್ತಿಗಾರು ನಿವಾಸಿ ಛತ್ರಪ್ಪಾಡಿ ಕುಮಾರ ಎಂಬವರ ಪತ್ನಿ ರಾಧಾ(35) ಎಂದು ಗುರುತಿಸಲಾಗಿದೆ.
ಸುಬ್ರಹ್ಮಣ್ಯ ಅಗರಿಕಜೆ ಕುಂಞ ಅವರ ಪುತ್ರಿ ರಾಧಾಳನ್ನು ಗುತ್ತಿಗಾರಿನ ಛತ್ರಪ್ಪಾಡಿ ನಿವಾಸಿ ಕುಮಾರ ಎನ್ನುವವರಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗಳಿಗೆ ಮೂವರು ಮಕ್ಕಳಿದ್ದು ಶಾಲೆಗೆ ರಜೆ ದೊರೆತ ಕಾರಣ ದಂಪತಿಗಳು ಮಕ್ಕಳ ಜತೆ ತವರು ಮನೆಯಾದ ಅಗರಿಕಜೆಗೆ ಎ.20ರಂದು ಬಂದಿದ್ದರು.
ಮಂಗಳವಾರ ಮನೆ ಪಕ್ಕದ ಹೊಳೆಗೆ ಹೊಳೆಯಲ್ಲಿ ಕೊಚ್ಚಿ ಬರುವ ಅಡಿಕೆ ಹೆಕ್ಕಲೆಂದು ತೆರಳಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ. ಪತ್ನಿ ಬರದೆ ಇರುವುದನ್ನು ಗಮನಿಸಿದ ಗಂಡ ಹುಡುಕುತ್ತ ಹೊಳೆಯತ್ತ ತೆರಳಿದಾಗ ಮಹಿಳೆಯ ಚಪ್ಪಲಿ ನೀರಿನಲ್ಲಿ ತೇಲುತ್ತಿರುವುದು ಕಂಡುಬಂದಿದೆ. ಈ ವೇಳೆ ಮಹಿಳೆಯ ಮೃತ ದೇಹ ನೀರಿನಲ್ಲಿ ಕಂಡುಬಂದಿದೆ. ಸುಬ್ರಹ್ಮಣ್ಯ ಪೆÇಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…