ಸುಬ್ರಹ್ಮಣ್ಯ: ಶಾಲೆಗೆ ರಜೆ ಸಿಕ್ಕಿದ ಹಿನ್ನಲೆಯಲ್ಲಿ ಮಕ್ಕಳ ಜೊತೆ ತವರಿಗೆ ಬಂದಿದ್ದ ಮಹಿಳೆ ಹೊಳೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸುಬ್ರಹ್ಮಣ್ಯದ ಅಗರಿಕಜೆಯಲ್ಲಿ ನಡೆದಿದೆ. ಮೃತ ದುರ್ದೈವಿ ಮಹಿಳೆ ಗುತ್ತಿಗಾರು ನಿವಾಸಿ ಛತ್ರಪ್ಪಾಡಿ ಕುಮಾರ ಎಂಬವರ ಪತ್ನಿ ರಾಧಾ(35) ಎಂದು ಗುರುತಿಸಲಾಗಿದೆ.
ಸುಬ್ರಹ್ಮಣ್ಯ ಅಗರಿಕಜೆ ಕುಂಞ ಅವರ ಪುತ್ರಿ ರಾಧಾಳನ್ನು ಗುತ್ತಿಗಾರಿನ ಛತ್ರಪ್ಪಾಡಿ ನಿವಾಸಿ ಕುಮಾರ ಎನ್ನುವವರಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗಳಿಗೆ ಮೂವರು ಮಕ್ಕಳಿದ್ದು ಶಾಲೆಗೆ ರಜೆ ದೊರೆತ ಕಾರಣ ದಂಪತಿಗಳು ಮಕ್ಕಳ ಜತೆ ತವರು ಮನೆಯಾದ ಅಗರಿಕಜೆಗೆ ಎ.20ರಂದು ಬಂದಿದ್ದರು.
ಮಂಗಳವಾರ ಮನೆ ಪಕ್ಕದ ಹೊಳೆಗೆ ಹೊಳೆಯಲ್ಲಿ ಕೊಚ್ಚಿ ಬರುವ ಅಡಿಕೆ ಹೆಕ್ಕಲೆಂದು ತೆರಳಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ. ಪತ್ನಿ ಬರದೆ ಇರುವುದನ್ನು ಗಮನಿಸಿದ ಗಂಡ ಹುಡುಕುತ್ತ ಹೊಳೆಯತ್ತ ತೆರಳಿದಾಗ ಮಹಿಳೆಯ ಚಪ್ಪಲಿ ನೀರಿನಲ್ಲಿ ತೇಲುತ್ತಿರುವುದು ಕಂಡುಬಂದಿದೆ. ಈ ವೇಳೆ ಮಹಿಳೆಯ ಮೃತ ದೇಹ ನೀರಿನಲ್ಲಿ ಕಂಡುಬಂದಿದೆ. ಸುಬ್ರಹ್ಮಣ್ಯ ಪೆÇಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.
ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…
ಬಾಲ್ಯದಲ್ಲಿ ಕಠೋರನಂತೆ ಕಾಣುವ ಅಪ್ಪನ ನಿಜವಾದ ಪ್ರೀತಿ ಮತ್ತು ತ್ಯಾಗ ನಮ್ಮ ಬದುಕಿನ…
ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…
ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…