Advertisement

ನೀರಿನ ಹೊಂಡಕ್ಕೆ ಬಿದ್ದು ಮಹಿಳೆ ಸಾವು

Share

ಸುಬ್ರಹ್ಮಣ್ಯ: ಶಾಲೆಗೆ ರಜೆ ಸಿಕ್ಕಿದ ಹಿನ್ನಲೆಯಲ್ಲಿ ಮಕ್ಕಳ ಜೊತೆ ತವರಿಗೆ ಬಂದಿದ್ದ ಮಹಿಳೆ ಹೊಳೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸುಬ್ರಹ್ಮಣ್ಯದ ಅಗರಿಕಜೆಯಲ್ಲಿ ನಡೆದಿದೆ. ಮೃತ ದುರ್ದೈವಿ ಮಹಿಳೆ ಗುತ್ತಿಗಾರು ನಿವಾಸಿ ಛತ್ರಪ್ಪಾಡಿ ಕುಮಾರ ಎಂಬವರ ಪತ್ನಿ ರಾಧಾ(35) ಎಂದು ಗುರುತಿಸಲಾಗಿದೆ.
ಸುಬ್ರಹ್ಮಣ್ಯ ಅಗರಿಕಜೆ ಕುಂಞ ಅವರ ಪುತ್ರಿ ರಾಧಾಳನ್ನು ಗುತ್ತಿಗಾರಿನ ಛತ್ರಪ್ಪಾಡಿ ನಿವಾಸಿ ಕುಮಾರ ಎನ್ನುವವರಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗಳಿಗೆ ಮೂವರು ಮಕ್ಕಳಿದ್ದು ಶಾಲೆಗೆ ರಜೆ ದೊರೆತ ಕಾರಣ ದಂಪತಿಗಳು ಮಕ್ಕಳ ಜತೆ ತವರು ಮನೆಯಾದ ಅಗರಿಕಜೆಗೆ ಎ.20ರಂದು ಬಂದಿದ್ದರು.
ಮಂಗಳವಾರ ಮನೆ ಪಕ್ಕದ ಹೊಳೆಗೆ ಹೊಳೆಯಲ್ಲಿ ಕೊಚ್ಚಿ ಬರುವ ಅಡಿಕೆ ಹೆಕ್ಕಲೆಂದು ತೆರಳಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ. ಪತ್ನಿ ಬರದೆ ಇರುವುದನ್ನು ಗಮನಿಸಿದ ಗಂಡ ಹುಡುಕುತ್ತ ಹೊಳೆಯತ್ತ ತೆರಳಿದಾಗ ಮಹಿಳೆಯ ಚಪ್ಪಲಿ ನೀರಿನಲ್ಲಿ ತೇಲುತ್ತಿರುವುದು ಕಂಡುಬಂದಿದೆ. ಈ ವೇಳೆ ಮಹಿಳೆಯ ಮೃತ ದೇಹ ನೀರಿನಲ್ಲಿ ಕಂಡುಬಂದಿದೆ. ಸುಬ್ರಹ್ಮಣ್ಯ ಪೆÇಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

3 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

5 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

18 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

1 day ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago