ಸುಬ್ರಹ್ಮಣ್ಯ: ಶಾಲೆಗೆ ರಜೆ ಸಿಕ್ಕಿದ ಹಿನ್ನಲೆಯಲ್ಲಿ ಮಕ್ಕಳ ಜೊತೆ ತವರಿಗೆ ಬಂದಿದ್ದ ಮಹಿಳೆ ಹೊಳೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸುಬ್ರಹ್ಮಣ್ಯದ ಅಗರಿಕಜೆಯಲ್ಲಿ ನಡೆದಿದೆ. ಮೃತ ದುರ್ದೈವಿ ಮಹಿಳೆ ಗುತ್ತಿಗಾರು ನಿವಾಸಿ ಛತ್ರಪ್ಪಾಡಿ ಕುಮಾರ ಎಂಬವರ ಪತ್ನಿ ರಾಧಾ(35) ಎಂದು ಗುರುತಿಸಲಾಗಿದೆ.
ಸುಬ್ರಹ್ಮಣ್ಯ ಅಗರಿಕಜೆ ಕುಂಞ ಅವರ ಪುತ್ರಿ ರಾಧಾಳನ್ನು ಗುತ್ತಿಗಾರಿನ ಛತ್ರಪ್ಪಾಡಿ ನಿವಾಸಿ ಕುಮಾರ ಎನ್ನುವವರಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗಳಿಗೆ ಮೂವರು ಮಕ್ಕಳಿದ್ದು ಶಾಲೆಗೆ ರಜೆ ದೊರೆತ ಕಾರಣ ದಂಪತಿಗಳು ಮಕ್ಕಳ ಜತೆ ತವರು ಮನೆಯಾದ ಅಗರಿಕಜೆಗೆ ಎ.20ರಂದು ಬಂದಿದ್ದರು.
ಮಂಗಳವಾರ ಮನೆ ಪಕ್ಕದ ಹೊಳೆಗೆ ಹೊಳೆಯಲ್ಲಿ ಕೊಚ್ಚಿ ಬರುವ ಅಡಿಕೆ ಹೆಕ್ಕಲೆಂದು ತೆರಳಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ. ಪತ್ನಿ ಬರದೆ ಇರುವುದನ್ನು ಗಮನಿಸಿದ ಗಂಡ ಹುಡುಕುತ್ತ ಹೊಳೆಯತ್ತ ತೆರಳಿದಾಗ ಮಹಿಳೆಯ ಚಪ್ಪಲಿ ನೀರಿನಲ್ಲಿ ತೇಲುತ್ತಿರುವುದು ಕಂಡುಬಂದಿದೆ. ಈ ವೇಳೆ ಮಹಿಳೆಯ ಮೃತ ದೇಹ ನೀರಿನಲ್ಲಿ ಕಂಡುಬಂದಿದೆ. ಸುಬ್ರಹ್ಮಣ್ಯ ಪೆÇಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…