ಮಡಿಕೇರಿ :ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನೀರು ಮತ್ತು ನೈರ್ಮಲ್ಯ ಕುರಿತ ಸಂಚಾರಿ ವಾಹನದ ಮೂಲಕ ಜಾಗೃತಿ ಕಲಾಜಾಥ ಕಾರ್ಯಕ್ರಮಕ್ಕೆ ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು ಚಾಲನೆ ನೀಡಿದರು.
ನೀರು ಮತ್ತು ನೈರ್ಮಲ್ಯ ಕುರಿತು ಜಿಲ್ಲೆಯ 25 ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ 15 ದಿನಗಳ ಕಾಲ ಕಲಾಜಾಥ ಏರ್ಪಡಿಸಲಾಗಿದ್ದು, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಮತ್ತು ನೀರಿನ ಸಂರಕ್ಷಣೆ ಕುರಿತು ಬೀದಿ ನಾಟಕ ಹಾಗೂ ಸಾಕ್ಷ್ಯ ಚಿತ್ರಗಳ ಮೂಲಕ ಮಾಹಿತಿ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಕೊಡಗು ಈಗಾಗಲೇ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯಾಗಿ ಘೋಷಿಸಲ್ಪಟ್ಟಿದ್ದು, ಮುಂದಿನ ಹಂತದಲ್ಲಿ ಘನ, ದ್ರವ ತ್ಯಾಜ್ಯ ನಿರ್ವಹಣೆ ಮತ್ತು ನೀರಿನ ಸಂರಕ್ಷಣೆ ಕುರಿತು ಜನ ಜಾಗೃತಿ ಮೂಡಿಸಲಾಗುತ್ತದೆ ಎಂದು ಅವರು ಹೇಳಿದರು.
ಹಸಿ ಕಸ ಮತ್ತು ಒಣ ಕಸ ಬೇರ್ಪಡಿಸಿ ಕಾಂಪೋಸ್ಟೀಕರಣ ಮಾಡಬೇಕಿದೆ. ಒಣ ಕಸವನ್ನು ಸಂಗ್ರಹಿಸಿ ಮರು ಬಳಕೆ ಮಾಡಬಹುದಾಗಿದೆ ಎಂದರು. ಸ್ವಚ್ಛ ಭಾರತ ಮಿಷನ್ ಅಭಿಯಾನದ ಸಮಾಲೋಚಕರಾದ ಪೆಮ್ಮಯ್ಯ ಅವರು ಮಾತನಾಡಿ ಗೋಡೆ ಬರಹ ಬರೆಸುವುದು, ಸ್ವಚ್ಛತಾ ಕಾರ್ಯಕ್ರಮ, ಸ್ವಚ್ಛಮೇವ ಜಯತೆ, ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ, ಶಾಲೆಗಳಲ್ಲಿ ಮಕ್ಕಳಿಗೆ ಸ್ವಚ್ಛತಾ ಅಭಿಯಾನ ಬಗ್ಗೆ ಕಾರ್ಯಕ್ರಮ, ಘನ, ದ್ರವ ತ್ಯಾಜ್ಯ ನಿರ್ವಹಣೆ ಹಾಗೂ ಸಂಗ್ರಹಣೆ, ಮತ್ತಿತರ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದರು.
ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ.ಅನಂತಶಯನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಮೋಹನ್, ವಾರ್ತಾಧಿಕಾರಿ ಚಿನ್ನಸ್ವಾಮಿ, ಸ್ವಚ್ಛ ಭಾರತ್ ಮಿಷನ್ ಸಮಾಲೋಚಕರಾದ ವಾಸುದೇವ್, ಕಲಾವಿದ ಈ ರಾಜು ಮತ್ತು ತಂಡದವರು ಹಾಜರಿದ್ದರು.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…