ಮಡಿಕೇರಿ :ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ನೀರು ಮತ್ತು ನೈರ್ಮಲ್ಯ ಕುರಿತ ಸಂಚಾರಿ ವಾಹನದ ಮೂಲಕ ಜಾಗೃತಿ ಕಲಾಜಾಥ ಕಾರ್ಯಕ್ರಮಕ್ಕೆ ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು ಚಾಲನೆ ನೀಡಿದರು.
ನೀರು ಮತ್ತು ನೈರ್ಮಲ್ಯ ಕುರಿತು ಜಿಲ್ಲೆಯ 25 ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ 15 ದಿನಗಳ ಕಾಲ ಕಲಾಜಾಥ ಏರ್ಪಡಿಸಲಾಗಿದ್ದು, ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಮತ್ತು ನೀರಿನ ಸಂರಕ್ಷಣೆ ಕುರಿತು ಬೀದಿ ನಾಟಕ ಹಾಗೂ ಸಾಕ್ಷ್ಯ ಚಿತ್ರಗಳ ಮೂಲಕ ಮಾಹಿತಿ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.
ಕೊಡಗು ಈಗಾಗಲೇ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯಾಗಿ ಘೋಷಿಸಲ್ಪಟ್ಟಿದ್ದು, ಮುಂದಿನ ಹಂತದಲ್ಲಿ ಘನ, ದ್ರವ ತ್ಯಾಜ್ಯ ನಿರ್ವಹಣೆ ಮತ್ತು ನೀರಿನ ಸಂರಕ್ಷಣೆ ಕುರಿತು ಜನ ಜಾಗೃತಿ ಮೂಡಿಸಲಾಗುತ್ತದೆ ಎಂದು ಅವರು ಹೇಳಿದರು.
ಹಸಿ ಕಸ ಮತ್ತು ಒಣ ಕಸ ಬೇರ್ಪಡಿಸಿ ಕಾಂಪೋಸ್ಟೀಕರಣ ಮಾಡಬೇಕಿದೆ. ಒಣ ಕಸವನ್ನು ಸಂಗ್ರಹಿಸಿ ಮರು ಬಳಕೆ ಮಾಡಬಹುದಾಗಿದೆ ಎಂದರು. ಸ್ವಚ್ಛ ಭಾರತ ಮಿಷನ್ ಅಭಿಯಾನದ ಸಮಾಲೋಚಕರಾದ ಪೆಮ್ಮಯ್ಯ ಅವರು ಮಾತನಾಡಿ ಗೋಡೆ ಬರಹ ಬರೆಸುವುದು, ಸ್ವಚ್ಛತಾ ಕಾರ್ಯಕ್ರಮ, ಸ್ವಚ್ಛಮೇವ ಜಯತೆ, ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ, ಶಾಲೆಗಳಲ್ಲಿ ಮಕ್ಕಳಿಗೆ ಸ್ವಚ್ಛತಾ ಅಭಿಯಾನ ಬಗ್ಗೆ ಕಾರ್ಯಕ್ರಮ, ಘನ, ದ್ರವ ತ್ಯಾಜ್ಯ ನಿರ್ವಹಣೆ ಹಾಗೂ ಸಂಗ್ರಹಣೆ, ಮತ್ತಿತರ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದರು.
ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ.ಅನಂತಶಯನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಮೋಹನ್, ವಾರ್ತಾಧಿಕಾರಿ ಚಿನ್ನಸ್ವಾಮಿ, ಸ್ವಚ್ಛ ಭಾರತ್ ಮಿಷನ್ ಸಮಾಲೋಚಕರಾದ ವಾಸುದೇವ್, ಕಲಾವಿದ ಈ ರಾಜು ಮತ್ತು ತಂಡದವರು ಹಾಜರಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…