MIRROR FOCUS

ನೀರ ನೆಮ್ಮದಿಯತ್ತ ಪಡ್ರೆ – ಇನ್ನೊಂದು ವಿನೂತನ ಜಾಗೃತಿ ಕಾರ್ಯಕ್ರಮ :” ಚಿಣ್ಣರೇ, ಕಟ್ಟ ನೋಡೋಣು ಬನ್ನಿ…”

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮ ನೀರ ನೆಮ್ಮದಿಯತ್ತ ಎಂಬ ಯೋಜನೆಯನ್ನು  ಕಳೆದ ವರ್ಷ ಹಮ್ಮಿಕೊಂಡಿದೆ. ಪಡ್ರೆ ಗ್ರಾಮದಲ್ಲಿ  ಜಲಸಂರಕ್ಷಣೆ ಹಾಗೂ ಜಲ ಅಭಿಯಾನ ಕಳೆದ ವರ್ಷ ಹಮ್ಮಿಕೊಂಡಿತ್ತು. ಇದಕ್ಕಾಗಿ ಪಡ್ರೆಯ ಹೊಳೆಯಲ್ಲಿ ಹೊಳೆಯ ಆಸುಪಾಸಿನ ಜನರೆಲ್ಲಾ ಹೊಳೆ ನಡಿಗೆ ಮೂಲಕ ಅಧ್ಯಯನ ಮಾಡಿ ಎಲ್ಲಿ , ಹೇಗೆ ಕಟ್ಟ ಕಟ್ಟಬೇಕು, ಜಲಸಂರಕ್ಷಣೆ ಮಾಡಬೇಕು ಎಂದು ಯೋಜನೆ ಹಾಕಿಕೊಂಡಿದ್ದರು. ಈ ವರ್ಷ ಅದರ ಅನುಷ್ಠಾನ. ಈ ಅನುಷ್ಠಾನ ಕಾರ್ಯಕ್ರಮವೂ ಸಮಾಜದ ಇತರ ಕಡೆಗಳಲ್ಲಿ  ಪ್ರೇರಣೆಯಾಗಬೇಕು ಎಂಬ ಉದ್ದೇಶದಿಂದ ಇನ್ನೊಂದು ವಿನೂತನ ಜಾಗೃತಿ ಅಭಿಯಾನ “ಚಿಣ್ಣರೇ, ಕಟ್ಟ ನೋಡೋಣು ಬನ್ನಿ…”

Advertisement

ಮುಂದಿನ ಒಂದು ತಿಂಗಳು ತೋಡುಗಳಿಗೆ ಕಟ್ಟ ಕಟ್ಟುವ ಸಮಯ. ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮ ಈ ವರ್ಷ ಈ ಋತುವಿನಲ್ಲಿ ಹೊಸದೊಂದು ಕಾರ್ಯಕ್ರಮ ಹಾಕಿಕೊಂಡಿದೆ. ಅದುವೇ ಎಳೆ ಪೀಳಿಗೆಗೆ ಕಟ್ಟದ ಬಗ್ಗೆ ಕಂಡರಿವು ಮೂಡಿಸುವ ಯೋಜನೆ.

ಡಿ.1 ರಿಂದ  ಪಡ್ರೆಯಲ್ಲಿ  ’ನೀರ ನೆಮ್ಮದಿಯತ್ತ ಪಡ್ರೆ’ ( ನೀನೆಪ) ತಂಡ ’ಕಟ್ಟ ಕಟ್ಟುವ ಹಬ್ಬ’ ಆಚರಿಸಲು ತೊಡಗುತ್ತದೆ. ಡಿಸೆಂಬರ್ ಕೊನೆಯ ವರೆಗೆ ಇಲ್ಲಿ ಸುಮಾರು ಎರಡು- ಮೂರು ಡಜನ್ ಕಟ್ಟಗಳ ನಿರ್ಮಾಣವಾಗಲಿದೆ. ಈ ಸಂದರ್ಭದಲ್ಲಿ ಊರ – ಪರವೂರವರಗೆ ಮತ್ತು ಸುತ್ತುಮುತ್ತಲಿನ ಶಾಲೆಯ ಎಳೆಯರಿಗೆ ಈ ತಂತ್ರಜ್ಞಾನದ ತಿಳಿವಳಿಕೆ ಹಂಚುವುದನ್ನೇ ಈ ತಂಡ ಹಬ್ಬದ ಉದ್ದೇಶವಾಗಿಟ್ಟುಕೊಂಡಿದೆ.

Advertisement

Advertisement

ನೆರೆಯ ಕೇರಳ – ಕರ್ನಾಟಕದ ಶಾಲಾ ಕಾಲೇಜಿನ ಅಧ್ಯಾಪಕರು ನೀನೆಪದ ’ಕಟ್ಟ ದರ್ಶನ’ದ ಸಂಯೋಜಕರನ್ನು ಸಂಪರ್ಕಿಸಿ ದಿನ ಗೊತ್ತು ಮಾಡಿಕೊಂಡು ಪಡ್ರೆಗೆ ಭೇಟಿ ನೀಡಬಹುದು. ಕಟ್ಟ ನಿರ್ಮಾಣದ ರೀತಿ, ಅದರ ಮಹತ್ವಗಳ ಬಗ್ಗೆ ಅಲ್ಲಲ್ಲಿನ ಕೃಷಿಕ ಸಂಪನ್ಮೂಲ ವ್ಯಕ್ತಿಗಳು ತಿಳಿಸಿಕೊಡುತ್ತಾರೆ.

ಈ ಅವಕಾಶವನ್ನು ಸುತ್ತಲಿನ ಶಾಲಾ-ಕಾಲೇಜುಗಳ ಪರಿಸರ ಕ್ಲಬ್ಬು, ಎನ್ನೆಸ್ಸೆಸ್ ಇತ್ಯಾದಿ ಘಟಕಗಳ ಪ್ರತಿನಿಧಿಗಳು, ಕೃಷಿಕರ ಗುಂಪುಗಳು ಬಳಸಿಕೊಳ್ಳಬಹುದು. ಆಸಕ್ತರು ’ಕಟ್ಟ ದರ್ಶನ’ದ ಸಂಯೋಜಕ ಶ್ರೀಹರಿ ಆರ್  ಅವರನ್ನು (94950 66261) ಸಂಪರ್ಕಿಸಬಹುದು.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

3 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

5 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

1 day ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago

ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |

ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…

2 days ago

ಹೊಸರುಚಿ | ಹಲಸಿನ ಹಣ್ಣಿನ ಹಲ್ವ

ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 1 ಕಪ್. ಜಾರ್…

2 days ago