Advertisement
MIRROR FOCUS

ನೀರ ನೆಮ್ಮದಿಯತ್ತ ಪಡ್ರೆ – ಇನ್ನೊಂದು ವಿನೂತನ ಜಾಗೃತಿ ಕಾರ್ಯಕ್ರಮ :” ಚಿಣ್ಣರೇ, ಕಟ್ಟ ನೋಡೋಣು ಬನ್ನಿ…”

Share

ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮ ನೀರ ನೆಮ್ಮದಿಯತ್ತ ಎಂಬ ಯೋಜನೆಯನ್ನು  ಕಳೆದ ವರ್ಷ ಹಮ್ಮಿಕೊಂಡಿದೆ. ಪಡ್ರೆ ಗ್ರಾಮದಲ್ಲಿ  ಜಲಸಂರಕ್ಷಣೆ ಹಾಗೂ ಜಲ ಅಭಿಯಾನ ಕಳೆದ ವರ್ಷ ಹಮ್ಮಿಕೊಂಡಿತ್ತು. ಇದಕ್ಕಾಗಿ ಪಡ್ರೆಯ ಹೊಳೆಯಲ್ಲಿ ಹೊಳೆಯ ಆಸುಪಾಸಿನ ಜನರೆಲ್ಲಾ ಹೊಳೆ ನಡಿಗೆ ಮೂಲಕ ಅಧ್ಯಯನ ಮಾಡಿ ಎಲ್ಲಿ , ಹೇಗೆ ಕಟ್ಟ ಕಟ್ಟಬೇಕು, ಜಲಸಂರಕ್ಷಣೆ ಮಾಡಬೇಕು ಎಂದು ಯೋಜನೆ ಹಾಕಿಕೊಂಡಿದ್ದರು. ಈ ವರ್ಷ ಅದರ ಅನುಷ್ಠಾನ. ಈ ಅನುಷ್ಠಾನ ಕಾರ್ಯಕ್ರಮವೂ ಸಮಾಜದ ಇತರ ಕಡೆಗಳಲ್ಲಿ  ಪ್ರೇರಣೆಯಾಗಬೇಕು ಎಂಬ ಉದ್ದೇಶದಿಂದ ಇನ್ನೊಂದು ವಿನೂತನ ಜಾಗೃತಿ ಅಭಿಯಾನ “ಚಿಣ್ಣರೇ, ಕಟ್ಟ ನೋಡೋಣು ಬನ್ನಿ…”

Advertisement
Advertisement

Advertisement

ಮುಂದಿನ ಒಂದು ತಿಂಗಳು ತೋಡುಗಳಿಗೆ ಕಟ್ಟ ಕಟ್ಟುವ ಸಮಯ. ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮ ಈ ವರ್ಷ ಈ ಋತುವಿನಲ್ಲಿ ಹೊಸದೊಂದು ಕಾರ್ಯಕ್ರಮ ಹಾಕಿಕೊಂಡಿದೆ. ಅದುವೇ ಎಳೆ ಪೀಳಿಗೆಗೆ ಕಟ್ಟದ ಬಗ್ಗೆ ಕಂಡರಿವು ಮೂಡಿಸುವ ಯೋಜನೆ.

ಡಿ.1 ರಿಂದ  ಪಡ್ರೆಯಲ್ಲಿ  ’ನೀರ ನೆಮ್ಮದಿಯತ್ತ ಪಡ್ರೆ’ ( ನೀನೆಪ) ತಂಡ ’ಕಟ್ಟ ಕಟ್ಟುವ ಹಬ್ಬ’ ಆಚರಿಸಲು ತೊಡಗುತ್ತದೆ. ಡಿಸೆಂಬರ್ ಕೊನೆಯ ವರೆಗೆ ಇಲ್ಲಿ ಸುಮಾರು ಎರಡು- ಮೂರು ಡಜನ್ ಕಟ್ಟಗಳ ನಿರ್ಮಾಣವಾಗಲಿದೆ. ಈ ಸಂದರ್ಭದಲ್ಲಿ ಊರ – ಪರವೂರವರಗೆ ಮತ್ತು ಸುತ್ತುಮುತ್ತಲಿನ ಶಾಲೆಯ ಎಳೆಯರಿಗೆ ಈ ತಂತ್ರಜ್ಞಾನದ ತಿಳಿವಳಿಕೆ ಹಂಚುವುದನ್ನೇ ಈ ತಂಡ ಹಬ್ಬದ ಉದ್ದೇಶವಾಗಿಟ್ಟುಕೊಂಡಿದೆ.

Advertisement

ನೆರೆಯ ಕೇರಳ – ಕರ್ನಾಟಕದ ಶಾಲಾ ಕಾಲೇಜಿನ ಅಧ್ಯಾಪಕರು ನೀನೆಪದ ’ಕಟ್ಟ ದರ್ಶನ’ದ ಸಂಯೋಜಕರನ್ನು ಸಂಪರ್ಕಿಸಿ ದಿನ ಗೊತ್ತು ಮಾಡಿಕೊಂಡು ಪಡ್ರೆಗೆ ಭೇಟಿ ನೀಡಬಹುದು. ಕಟ್ಟ ನಿರ್ಮಾಣದ ರೀತಿ, ಅದರ ಮಹತ್ವಗಳ ಬಗ್ಗೆ ಅಲ್ಲಲ್ಲಿನ ಕೃಷಿಕ ಸಂಪನ್ಮೂಲ ವ್ಯಕ್ತಿಗಳು ತಿಳಿಸಿಕೊಡುತ್ತಾರೆ.

Advertisement

ಈ ಅವಕಾಶವನ್ನು ಸುತ್ತಲಿನ ಶಾಲಾ-ಕಾಲೇಜುಗಳ ಪರಿಸರ ಕ್ಲಬ್ಬು, ಎನ್ನೆಸ್ಸೆಸ್ ಇತ್ಯಾದಿ ಘಟಕಗಳ ಪ್ರತಿನಿಧಿಗಳು, ಕೃಷಿಕರ ಗುಂಪುಗಳು ಬಳಸಿಕೊಳ್ಳಬಹುದು. ಆಸಕ್ತರು ’ಕಟ್ಟ ದರ್ಶನ’ದ ಸಂಯೋಜಕ ಶ್ರೀಹರಿ ಆರ್  ಅವರನ್ನು (94950 66261) ಸಂಪರ್ಕಿಸಬಹುದು.

Advertisement

 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

3 hours ago

ಗೇರುಹಣ್ಣಿನ ಮೌಲ್ಯವರ್ಧನೆ : ಕೇರಳ ಕೃಷಿ ವಿವಿ ಸಾಧನೆ

ಬಹುತೇಕ ಕೊಳೆತು ಮಣ್ಣುಪಾಲಾಗುವ ಗೇರುಹಣ್ಣಿಗೂ(Cashew fruit)  ಮೌಲ್ಯವಿದೆ. ಆದರೆ ಮೌಲ್ಯವರ್ಧನೆ(Value addition) ಮಾಡಿದಾಗ ಮಾತ್ರ!…

4 hours ago

ನಿಮಗೆ ಗೊತ್ತೇ ???? ಬಿದಿರಿನ ಬಗೆಗಿನ ಕೆಲವು ಆಸಕ್ತಿದಾಯಕ ಸಂಗತಿಗಳು

ಬಿದಿರು(Bamboo) ನಾನಾರಿಗಲ್ಲದವಳು ಎಂಬ ಸಂತ ಶಿಶುನಾಳ ಶರೀಪರ(Shishunala Sharifa) ಹಾಡನ್ನು ನೀವು ಕೇಳಿರುತ್ತೀರಿ.…

4 hours ago

ಮೊಬೈಲ್ ಫೋನ್ ಅನ್ನು ನಿಮ್ಮ ದಿಂಬಿನ ಪಕ್ಕದಲ್ಲಿ ಇಟ್ಟುಕೊಂಡು ಮಲಗತ್ತೀರಾ..? ಈ ಸಮಸ್ಯೆಗಳನ್ನು ಎದುರಿಸಲು ಸಿದ್ಧರಾಗಿ…..!

ಇಂದು ಮೊಬೈಲ್ ಫೋನ್(Mobile Phone) ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಫೋನ್ ಅನ್ನು…

5 hours ago

ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ : ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ : ಗ್ರಾಹಕರಿಗೆ ಜೋರಾದ ಖಾರದ ಅನುಭವ

ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ…

5 hours ago

Karnataka Weather |11-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

8 hours ago