Advertisement
MIRROR FOCUS

ನೀರ ನೆಮ್ಮದಿಯತ್ತ ಪಡ್ರೆ – ಇನ್ನೊಂದು ವಿನೂತನ ಜಾಗೃತಿ ಕಾರ್ಯಕ್ರಮ :” ಚಿಣ್ಣರೇ, ಕಟ್ಟ ನೋಡೋಣು ಬನ್ನಿ…”

Share

ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮ ನೀರ ನೆಮ್ಮದಿಯತ್ತ ಎಂಬ ಯೋಜನೆಯನ್ನು  ಕಳೆದ ವರ್ಷ ಹಮ್ಮಿಕೊಂಡಿದೆ. ಪಡ್ರೆ ಗ್ರಾಮದಲ್ಲಿ  ಜಲಸಂರಕ್ಷಣೆ ಹಾಗೂ ಜಲ ಅಭಿಯಾನ ಕಳೆದ ವರ್ಷ ಹಮ್ಮಿಕೊಂಡಿತ್ತು. ಇದಕ್ಕಾಗಿ ಪಡ್ರೆಯ ಹೊಳೆಯಲ್ಲಿ ಹೊಳೆಯ ಆಸುಪಾಸಿನ ಜನರೆಲ್ಲಾ ಹೊಳೆ ನಡಿಗೆ ಮೂಲಕ ಅಧ್ಯಯನ ಮಾಡಿ ಎಲ್ಲಿ , ಹೇಗೆ ಕಟ್ಟ ಕಟ್ಟಬೇಕು, ಜಲಸಂರಕ್ಷಣೆ ಮಾಡಬೇಕು ಎಂದು ಯೋಜನೆ ಹಾಕಿಕೊಂಡಿದ್ದರು. ಈ ವರ್ಷ ಅದರ ಅನುಷ್ಠಾನ. ಈ ಅನುಷ್ಠಾನ ಕಾರ್ಯಕ್ರಮವೂ ಸಮಾಜದ ಇತರ ಕಡೆಗಳಲ್ಲಿ  ಪ್ರೇರಣೆಯಾಗಬೇಕು ಎಂಬ ಉದ್ದೇಶದಿಂದ ಇನ್ನೊಂದು ವಿನೂತನ ಜಾಗೃತಿ ಅಭಿಯಾನ “ಚಿಣ್ಣರೇ, ಕಟ್ಟ ನೋಡೋಣು ಬನ್ನಿ…”

Advertisement

ಮುಂದಿನ ಒಂದು ತಿಂಗಳು ತೋಡುಗಳಿಗೆ ಕಟ್ಟ ಕಟ್ಟುವ ಸಮಯ. ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮ ಈ ವರ್ಷ ಈ ಋತುವಿನಲ್ಲಿ ಹೊಸದೊಂದು ಕಾರ್ಯಕ್ರಮ ಹಾಕಿಕೊಂಡಿದೆ. ಅದುವೇ ಎಳೆ ಪೀಳಿಗೆಗೆ ಕಟ್ಟದ ಬಗ್ಗೆ ಕಂಡರಿವು ಮೂಡಿಸುವ ಯೋಜನೆ.

ಡಿ.1 ರಿಂದ  ಪಡ್ರೆಯಲ್ಲಿ  ’ನೀರ ನೆಮ್ಮದಿಯತ್ತ ಪಡ್ರೆ’ ( ನೀನೆಪ) ತಂಡ ’ಕಟ್ಟ ಕಟ್ಟುವ ಹಬ್ಬ’ ಆಚರಿಸಲು ತೊಡಗುತ್ತದೆ. ಡಿಸೆಂಬರ್ ಕೊನೆಯ ವರೆಗೆ ಇಲ್ಲಿ ಸುಮಾರು ಎರಡು- ಮೂರು ಡಜನ್ ಕಟ್ಟಗಳ ನಿರ್ಮಾಣವಾಗಲಿದೆ. ಈ ಸಂದರ್ಭದಲ್ಲಿ ಊರ – ಪರವೂರವರಗೆ ಮತ್ತು ಸುತ್ತುಮುತ್ತಲಿನ ಶಾಲೆಯ ಎಳೆಯರಿಗೆ ಈ ತಂತ್ರಜ್ಞಾನದ ತಿಳಿವಳಿಕೆ ಹಂಚುವುದನ್ನೇ ಈ ತಂಡ ಹಬ್ಬದ ಉದ್ದೇಶವಾಗಿಟ್ಟುಕೊಂಡಿದೆ.

ನೆರೆಯ ಕೇರಳ – ಕರ್ನಾಟಕದ ಶಾಲಾ ಕಾಲೇಜಿನ ಅಧ್ಯಾಪಕರು ನೀನೆಪದ ’ಕಟ್ಟ ದರ್ಶನ’ದ ಸಂಯೋಜಕರನ್ನು ಸಂಪರ್ಕಿಸಿ ದಿನ ಗೊತ್ತು ಮಾಡಿಕೊಂಡು ಪಡ್ರೆಗೆ ಭೇಟಿ ನೀಡಬಹುದು. ಕಟ್ಟ ನಿರ್ಮಾಣದ ರೀತಿ, ಅದರ ಮಹತ್ವಗಳ ಬಗ್ಗೆ ಅಲ್ಲಲ್ಲಿನ ಕೃಷಿಕ ಸಂಪನ್ಮೂಲ ವ್ಯಕ್ತಿಗಳು ತಿಳಿಸಿಕೊಡುತ್ತಾರೆ.

ಈ ಅವಕಾಶವನ್ನು ಸುತ್ತಲಿನ ಶಾಲಾ-ಕಾಲೇಜುಗಳ ಪರಿಸರ ಕ್ಲಬ್ಬು, ಎನ್ನೆಸ್ಸೆಸ್ ಇತ್ಯಾದಿ ಘಟಕಗಳ ಪ್ರತಿನಿಧಿಗಳು, ಕೃಷಿಕರ ಗುಂಪುಗಳು ಬಳಸಿಕೊಳ್ಳಬಹುದು. ಆಸಕ್ತರು ’ಕಟ್ಟ ದರ್ಶನ’ದ ಸಂಯೋಜಕ ಶ್ರೀಹರಿ ಆರ್  ಅವರನ್ನು (94950 66261) ಸಂಪರ್ಕಿಸಬಹುದು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

7 hours ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

13 hours ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

23 hours ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

24 hours ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

2 days ago