Advertisement
MIRROR FOCUS

ನೀರ ನೆಮ್ಮದಿಯತ್ತ ಪಡ್ರೆ – ಇನ್ನೊಂದು ವಿನೂತನ ಜಾಗೃತಿ ಕಾರ್ಯಕ್ರಮ :” ಚಿಣ್ಣರೇ, ಕಟ್ಟ ನೋಡೋಣು ಬನ್ನಿ…”

Share

ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮ ನೀರ ನೆಮ್ಮದಿಯತ್ತ ಎಂಬ ಯೋಜನೆಯನ್ನು  ಕಳೆದ ವರ್ಷ ಹಮ್ಮಿಕೊಂಡಿದೆ. ಪಡ್ರೆ ಗ್ರಾಮದಲ್ಲಿ  ಜಲಸಂರಕ್ಷಣೆ ಹಾಗೂ ಜಲ ಅಭಿಯಾನ ಕಳೆದ ವರ್ಷ ಹಮ್ಮಿಕೊಂಡಿತ್ತು. ಇದಕ್ಕಾಗಿ ಪಡ್ರೆಯ ಹೊಳೆಯಲ್ಲಿ ಹೊಳೆಯ ಆಸುಪಾಸಿನ ಜನರೆಲ್ಲಾ ಹೊಳೆ ನಡಿಗೆ ಮೂಲಕ ಅಧ್ಯಯನ ಮಾಡಿ ಎಲ್ಲಿ , ಹೇಗೆ ಕಟ್ಟ ಕಟ್ಟಬೇಕು, ಜಲಸಂರಕ್ಷಣೆ ಮಾಡಬೇಕು ಎಂದು ಯೋಜನೆ ಹಾಕಿಕೊಂಡಿದ್ದರು. ಈ ವರ್ಷ ಅದರ ಅನುಷ್ಠಾನ. ಈ ಅನುಷ್ಠಾನ ಕಾರ್ಯಕ್ರಮವೂ ಸಮಾಜದ ಇತರ ಕಡೆಗಳಲ್ಲಿ  ಪ್ರೇರಣೆಯಾಗಬೇಕು ಎಂಬ ಉದ್ದೇಶದಿಂದ ಇನ್ನೊಂದು ವಿನೂತನ ಜಾಗೃತಿ ಅಭಿಯಾನ “ಚಿಣ್ಣರೇ, ಕಟ್ಟ ನೋಡೋಣು ಬನ್ನಿ…”

Advertisement

ಮುಂದಿನ ಒಂದು ತಿಂಗಳು ತೋಡುಗಳಿಗೆ ಕಟ್ಟ ಕಟ್ಟುವ ಸಮಯ. ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮ ಈ ವರ್ಷ ಈ ಋತುವಿನಲ್ಲಿ ಹೊಸದೊಂದು ಕಾರ್ಯಕ್ರಮ ಹಾಕಿಕೊಂಡಿದೆ. ಅದುವೇ ಎಳೆ ಪೀಳಿಗೆಗೆ ಕಟ್ಟದ ಬಗ್ಗೆ ಕಂಡರಿವು ಮೂಡಿಸುವ ಯೋಜನೆ.

ಡಿ.1 ರಿಂದ  ಪಡ್ರೆಯಲ್ಲಿ  ’ನೀರ ನೆಮ್ಮದಿಯತ್ತ ಪಡ್ರೆ’ ( ನೀನೆಪ) ತಂಡ ’ಕಟ್ಟ ಕಟ್ಟುವ ಹಬ್ಬ’ ಆಚರಿಸಲು ತೊಡಗುತ್ತದೆ. ಡಿಸೆಂಬರ್ ಕೊನೆಯ ವರೆಗೆ ಇಲ್ಲಿ ಸುಮಾರು ಎರಡು- ಮೂರು ಡಜನ್ ಕಟ್ಟಗಳ ನಿರ್ಮಾಣವಾಗಲಿದೆ. ಈ ಸಂದರ್ಭದಲ್ಲಿ ಊರ – ಪರವೂರವರಗೆ ಮತ್ತು ಸುತ್ತುಮುತ್ತಲಿನ ಶಾಲೆಯ ಎಳೆಯರಿಗೆ ಈ ತಂತ್ರಜ್ಞಾನದ ತಿಳಿವಳಿಕೆ ಹಂಚುವುದನ್ನೇ ಈ ತಂಡ ಹಬ್ಬದ ಉದ್ದೇಶವಾಗಿಟ್ಟುಕೊಂಡಿದೆ.

Advertisement

ನೆರೆಯ ಕೇರಳ – ಕರ್ನಾಟಕದ ಶಾಲಾ ಕಾಲೇಜಿನ ಅಧ್ಯಾಪಕರು ನೀನೆಪದ ’ಕಟ್ಟ ದರ್ಶನ’ದ ಸಂಯೋಜಕರನ್ನು ಸಂಪರ್ಕಿಸಿ ದಿನ ಗೊತ್ತು ಮಾಡಿಕೊಂಡು ಪಡ್ರೆಗೆ ಭೇಟಿ ನೀಡಬಹುದು. ಕಟ್ಟ ನಿರ್ಮಾಣದ ರೀತಿ, ಅದರ ಮಹತ್ವಗಳ ಬಗ್ಗೆ ಅಲ್ಲಲ್ಲಿನ ಕೃಷಿಕ ಸಂಪನ್ಮೂಲ ವ್ಯಕ್ತಿಗಳು ತಿಳಿಸಿಕೊಡುತ್ತಾರೆ.

Advertisement

ಈ ಅವಕಾಶವನ್ನು ಸುತ್ತಲಿನ ಶಾಲಾ-ಕಾಲೇಜುಗಳ ಪರಿಸರ ಕ್ಲಬ್ಬು, ಎನ್ನೆಸ್ಸೆಸ್ ಇತ್ಯಾದಿ ಘಟಕಗಳ ಪ್ರತಿನಿಧಿಗಳು, ಕೃಷಿಕರ ಗುಂಪುಗಳು ಬಳಸಿಕೊಳ್ಳಬಹುದು. ಆಸಕ್ತರು ’ಕಟ್ಟ ದರ್ಶನ’ದ ಸಂಯೋಜಕ ಶ್ರೀಹರಿ ಆರ್  ಅವರನ್ನು (94950 66261) ಸಂಪರ್ಕಿಸಬಹುದು.

Advertisement

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

2 days ago