Advertisement
ಅನುಕ್ರಮ

ನೀವು ತಿನ್ನುವ ಹಣ್ಣುಗಳ ಸುರಕ್ಷತೆಯ ಬಗ್ಗೆ ಗೊತ್ತಾ ?

Share

ಇತ್ತೀಚೆಗೆ ಕೃತಕವಾಗಿ ಹಣ್ಣುಗಳನ್ನು ಮಾಗುವಂತೆ ಮಾಡುವ ಕುರಿತಾಗಿ ಜನರಿಂದ ದೂರುಗಳು ಕೇಳಿ ಬರುತ್ತಿವೆ. ಅದರಲ್ಲೂ ಮಾವಿನಕಾಯಿಗಳನ್ನು
ರಾಸಾಯನಿಕಗಳನ್ನು ಬಳಸಿ ಹಣ್ಣುಮಾಡುವ ಪರಿಸ್ಥಿತಿಗಳು ಹೆಚ್ಚುತ್ತಿವೆ. ದೆಹಲಿಯಲ್ಲಿನ ಸ್ಥಳೀಯ ತಂಡಗಳು ನಡೆಸಿದ ಆನ್ಲೈನ್ ಸರ್ವೇಕ್ಷಣೆಯ ಪ್ರಕಾರ, ಈ ಅಂಶಗಳ ಕುರಿತಾಗಿ ಜನರಲ್ಲಿ ಇರುವ ಮಾಹಿತಿಯ ಬಗ್ಗೆ ಕಲೆ ಹಾಕಲಾಯಿತು.

ಪರಿ ವೀಕ್ಷಣೆಯಲ್ಲಿ 13 ಸಾವಿರ ವಿಶಿಷ್ಟ ನಾಗರಿಕರ ಮತಗಳು ಒಳಗೊಂಡಂತೆ 24000 ಅಭಿಪ್ರಾಯಗಳು ಬಂದವು. ಆ ಪ್ರತಿಕ್ರಿಯೆಗಳಲ್ಲಿ 78 ಶೇಕಡಾ ಜನರು ಕೃತಕವಾಗಿ ಹಣ್ಣಾಗುವಂತೆ ಮಾಡಿದ ಹಣ್ಣುಗಳನ್ನು ಗುರುತಿಸಲು ಅಸಮರ್ಥರೆಂದು ಒಪ್ಪಿಕೊಂಡರು. ಕೇವಲ 15 ಶೇಕಡ ಜನರು ಮಾತ್ರ ಇದರ ಬಗ್ಗೆ ಮಾಹಿತಿ ಹೊಂದಿದ್ದರು. 68 ಶೇಕಡಾ ಜನರು, ಕೃತಕ ಹಣ್ಣು ಮಾಡುವಿಕೆಯ ವಿಚಾರ ಬಂದಾಗ, ತರಕಾರಿ ಹಾಗೂ ಹಣ್ಣು ಮಾರಾಟಗಾರರನ್ನು ನಂಬುವುದಿಲ್ಲವೆಂದು ಹೇಳಿಕೆ ಕೊಟ್ಟರು.

ಭಾರತದ” ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ”ವು, ಕೃತಕವಾಗಿ ಹಣ್ಣು ಮಾಡುವುದಕ್ಕೆ ಬಳಸುವ ಕ್ಯಾಲ್ಸಿಯಂ ಕಾರ್ಬೈಡ್ ಹಾಗೂ ಅಸಿಟಿಲೀನ್ ಅನಿಲಗಳನ್ನು ಕಾನೂನಾತ್ಮಕವಾಗಿ ನಿಷೇಧಿಸಿದೆ. ಆದರೂ ಹಣ್ಣು ಮಾರಾಟಗಾರರು ರಾಜಾರೋಷವಾಗಿ ಈ ರಾಸಾಯನಿಕಗಳನ್ನು ,ಹಣ್ಣು ಮಾಡಲು ಬಳಸುತ್ತಿದ್ದಾರೆ. ಬಹಳಷ್ಟು ಪ್ರಸಿದ್ಧಿ ಪಡೆದ ಬ್ರಾಂಡೆಡ್ ಅಲ್ಫಾನ್ಸೋ ಮಾವಿನಹಣ್ಣುಗಳ ಪೆಟ್ಟಿಗೆಗಳಲ್ಲಿ ಕಾಗದದಲ್ಲಿ ಸುತ್ತಿರುವ ಕ್ಯಾಲ್ಸಿಯಂ ಕಾರ್ಬೈಡ್ ಅಥವಾ ಒಣ ಹುಲ್ಲುಗಳ ಅಡಿಯಲ್ಲಿ ಎಥಿಲೀನ್ ಸರ್ವೇಸಾಮಾನ್ಯವಾಗಿದೆ. ಅದರ ಮೇಲೆ ಮಾವಿನಕಾಯಿಗಳನ್ನು ಇಡಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, 84 ಶೇಕಡ ಜನರು, ಕಲಬೆರೆಕೆ ನಿಯಂತ್ರಣ ಮಾಡುವ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ಅನುಭವಕ್ಕೆ ಬಂದ ಇಂತಹ ಕಲಬೆರಕೆಯ ಬಗ್ಗೆ ಗಿರಾಕಿಗಳಲ್ಲಿ ವಿಚಾರಿಸಿದಾಗ ಬೇರೆಬೇರೆ ರೀತಿಯ ಉತ್ತರಗಳು ಬಂದವು. ಅವುಗಳ ಅಂಕಿಅಂಶಗಳನ್ನು ಪರಿಶೀಲಿಸಿದರೆ ಬೇರೆಬೇರೆ ಗುಂಪಿನ ಆಹಾರ ಕಲಬೆರಕೆಯ ಶೇಕಡಾವಾರು ಫಲಿತಾಂಶ ಈ ರೀತಿಯಾಗಿದೆ. 30 ಶೇಕಡಾ ಜನರು ಹಣ್ಣು ಮತ್ತು ತರಕಾರಿಗಳಲ್ಲಿ, 13 ಶೇಕಡಾ ಜನರು ಹಾಲಿನಲ್ಲಿ, 29 ಶೇಕಡ ಜನ ಹಿಟ್ಟು, ಸಾಂಬಾರ ಪದಾರ್ಥಗಳು, ತುಪ್ಪ ಇತ್ಯಾದಿ ಜೀನಸು ವಸ್ತುಗಳಲ್ಲಿ ಕಲಬೆರಕೆಯನ್ನು ಕಂಡುಕೊಂಡಿದ್ದರು. 28 ಶೇಕಡಾ ಜನರು ಇದರ ಬಗ್ಗೆ ಅನಿಶ್ಚಿತ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರು.

ಆದರೆ, ಬಳಕೆದಾರನಲ್ಲಿ ಅರಿವು ಮೂಡಿಸುವ ಮತ್ತು ಇದನ್ನು ಸರಿಪಡಿಸುವ ಕಾರ್ಯ ಪ್ರಣಾಳಿಕೆಯು ಪ್ರಥಮ ಹೆಜ್ಜೆಯಾಗಬೇಕು. ಆದರೆ ಪ್ರಾಯೋಗಿಕ ಜೀವನದಲ್ಲಿ ಈ ಪ್ರಮುಖ ಅಂಶಗಳು ಕಣ್ಮರೆಯಾಗಿವೆ. ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಮಂಡಳಿಯು ಇದನ್ನೇ ಗುರಿಯಾಗಿಟ್ಟುಕೊಂಡು, ರಾಜ್ಯಗಳ ಆಹಾರ ಇಲಾಖೆ ಹಾಗೂ ಜಿಲ್ಲಾ ಆಡಳಿತದೊಂದಿಗೆ ಸೇರಿಕೊಂಡು ಉದ್ದೇಶಿತ ಬದಲಾವಣೆ ತರುವಲ್ಲಿ ಪ್ರಯತ್ನಿಸಬೇಕಾಗಿದೆ. ಹಾಗೂ, ಹಾಗೆ ಮಾಡಬೇಕಾದಲ್ಲಿ ಸಾರ್ವಜನಿಕ ಆರೋಗ್ಯವು ಸರಕಾರಗಳ ಪ್ರಥಮ ಆದ್ಯತೆಯಾಗಬೇಕು.

ಜೊತೆಗೆ ನಾವು ಒಂದು ಕಡೆಯಲ್ಲಿ ಬಣ್ಣಗಳ ಕುರಿತಾದ ಆಕರ್ಷಣೆಯನ್ನು, ಮೋಹವನ್ನು ಕಳೆದುಕೊಳ್ಳಬೇಕು. ತಾಜಾತನದ ಬಗ್ಗೆ ಗಮನ ಹರಿಸುವ ದೃಷ್ಟಿ ಕೋನ ಬೆಳೆಸಿಕೊಳ್ಳಬೇಕು. ಆದಷ್ಟು ಕಾಯಿಗಳನ್ನು ತಂದು ಮನೆಯಲ್ಲೇ ಹಣ್ಣು ಮಾಡಿಕೊಳ್ಳುವ ಕ್ರಮವೇ ಸೂಕ್ತವೋ ಏನೋ. ನಮ್ಮ ಹಳದಿ ಮೋಹವೇ ವ್ಯಾಪಾರಿಗಳ ಬಂಡವಾಳ ಆಗದಂತೆ ಎಚ್ಚರಿಕೆವಹಿಸಬೇಕು. ಇಂದಿನ ರಾಸಾಯನಿಕ ಕ್ರಾಂತಿಯ ಹಾಗೂ ವ್ಯವಸ್ಥೆಯಲ್ಲಿನ ಭ್ರಷ್ಟತೆಯ ನಡುವೆ, ಸಂಭವಿಸಬಹುದಾದ ಅಪಾಯದಿಂದ ನಾವು ಪಾರಾಗುವ ಉಪಾಯವು, ನಾವು ಹೊಂದುವ” ಅರಿವು” ಮತ್ತು” ಅನುಷ್ಠಾನ” ಅಷ್ಟೇ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

1 hour ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

2 hours ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

2 hours ago

ಅಡಿಕೆ ಹಳದಿ ಎಲೆ, ಎಲೆ ಚುಕ್ಕಿ ರೋಗಕ್ಕೆ ತುರ್ತು ಪರಿಹಾರಕ್ಕೆ ಒತ್ತಾಯ – ಕೇಂದ್ರ ಕೃಷಿ ಸಚಿವರಿಗೆ ಸಂಸದ ಬ್ರಿಜೇಶ್ ಚೌಟ ಮನವಿ

ಅಡಿಕೆಗೆ ವ್ಯಾಪಕವಾಗಿ ಹರಡಿರುವ ಹಳದಿ ಎಲೆ ಹಾಗೂ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ…

2 hours ago

ಅಡಿಕೆ ಆಮದು ಬೆಲೆ ಹೆಚ್ಚಳಕ್ಕೆ ಒತ್ತಾಯ – ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಭೇಟಿ ಮಾಡಿದ ನಿಯೋಗ

ಅಡಿಕೆಯ ಕನಿಷ್ಠ ಆಮದು ಬೆಲೆ ಹೆಚ್ಚಳ ಹಾಗೂ ಅಕ್ರಮ ಆಮದು ತಡೆಗೆ ಕ್ರಮ…

2 hours ago

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

11 hours ago