Advertisement
ಅನುಕ್ರಮ

ನೀವು ತಿನ್ನುವ ಹಣ್ಣುಗಳ ಸುರಕ್ಷತೆಯ ಬಗ್ಗೆ ಗೊತ್ತಾ ?

Share

ಇತ್ತೀಚೆಗೆ ಕೃತಕವಾಗಿ ಹಣ್ಣುಗಳನ್ನು ಮಾಗುವಂತೆ ಮಾಡುವ ಕುರಿತಾಗಿ ಜನರಿಂದ ದೂರುಗಳು ಕೇಳಿ ಬರುತ್ತಿವೆ. ಅದರಲ್ಲೂ ಮಾವಿನಕಾಯಿಗಳನ್ನು
ರಾಸಾಯನಿಕಗಳನ್ನು ಬಳಸಿ ಹಣ್ಣುಮಾಡುವ ಪರಿಸ್ಥಿತಿಗಳು ಹೆಚ್ಚುತ್ತಿವೆ. ದೆಹಲಿಯಲ್ಲಿನ ಸ್ಥಳೀಯ ತಂಡಗಳು ನಡೆಸಿದ ಆನ್ಲೈನ್ ಸರ್ವೇಕ್ಷಣೆಯ ಪ್ರಕಾರ, ಈ ಅಂಶಗಳ ಕುರಿತಾಗಿ ಜನರಲ್ಲಿ ಇರುವ ಮಾಹಿತಿಯ ಬಗ್ಗೆ ಕಲೆ ಹಾಕಲಾಯಿತು.

ಪರಿ ವೀಕ್ಷಣೆಯಲ್ಲಿ 13 ಸಾವಿರ ವಿಶಿಷ್ಟ ನಾಗರಿಕರ ಮತಗಳು ಒಳಗೊಂಡಂತೆ 24000 ಅಭಿಪ್ರಾಯಗಳು ಬಂದವು. ಆ ಪ್ರತಿಕ್ರಿಯೆಗಳಲ್ಲಿ 78 ಶೇಕಡಾ ಜನರು ಕೃತಕವಾಗಿ ಹಣ್ಣಾಗುವಂತೆ ಮಾಡಿದ ಹಣ್ಣುಗಳನ್ನು ಗುರುತಿಸಲು ಅಸಮರ್ಥರೆಂದು ಒಪ್ಪಿಕೊಂಡರು. ಕೇವಲ 15 ಶೇಕಡ ಜನರು ಮಾತ್ರ ಇದರ ಬಗ್ಗೆ ಮಾಹಿತಿ ಹೊಂದಿದ್ದರು. 68 ಶೇಕಡಾ ಜನರು, ಕೃತಕ ಹಣ್ಣು ಮಾಡುವಿಕೆಯ ವಿಚಾರ ಬಂದಾಗ, ತರಕಾರಿ ಹಾಗೂ ಹಣ್ಣು ಮಾರಾಟಗಾರರನ್ನು ನಂಬುವುದಿಲ್ಲವೆಂದು ಹೇಳಿಕೆ ಕೊಟ್ಟರು.

ಭಾರತದ” ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ”ವು, ಕೃತಕವಾಗಿ ಹಣ್ಣು ಮಾಡುವುದಕ್ಕೆ ಬಳಸುವ ಕ್ಯಾಲ್ಸಿಯಂ ಕಾರ್ಬೈಡ್ ಹಾಗೂ ಅಸಿಟಿಲೀನ್ ಅನಿಲಗಳನ್ನು ಕಾನೂನಾತ್ಮಕವಾಗಿ ನಿಷೇಧಿಸಿದೆ. ಆದರೂ ಹಣ್ಣು ಮಾರಾಟಗಾರರು ರಾಜಾರೋಷವಾಗಿ ಈ ರಾಸಾಯನಿಕಗಳನ್ನು ,ಹಣ್ಣು ಮಾಡಲು ಬಳಸುತ್ತಿದ್ದಾರೆ. ಬಹಳಷ್ಟು ಪ್ರಸಿದ್ಧಿ ಪಡೆದ ಬ್ರಾಂಡೆಡ್ ಅಲ್ಫಾನ್ಸೋ ಮಾವಿನಹಣ್ಣುಗಳ ಪೆಟ್ಟಿಗೆಗಳಲ್ಲಿ ಕಾಗದದಲ್ಲಿ ಸುತ್ತಿರುವ ಕ್ಯಾಲ್ಸಿಯಂ ಕಾರ್ಬೈಡ್ ಅಥವಾ ಒಣ ಹುಲ್ಲುಗಳ ಅಡಿಯಲ್ಲಿ ಎಥಿಲೀನ್ ಸರ್ವೇಸಾಮಾನ್ಯವಾಗಿದೆ. ಅದರ ಮೇಲೆ ಮಾವಿನಕಾಯಿಗಳನ್ನು ಇಡಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ, 84 ಶೇಕಡ ಜನರು, ಕಲಬೆರೆಕೆ ನಿಯಂತ್ರಣ ಮಾಡುವ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ಅನುಭವಕ್ಕೆ ಬಂದ ಇಂತಹ ಕಲಬೆರಕೆಯ ಬಗ್ಗೆ ಗಿರಾಕಿಗಳಲ್ಲಿ ವಿಚಾರಿಸಿದಾಗ ಬೇರೆಬೇರೆ ರೀತಿಯ ಉತ್ತರಗಳು ಬಂದವು. ಅವುಗಳ ಅಂಕಿಅಂಶಗಳನ್ನು ಪರಿಶೀಲಿಸಿದರೆ ಬೇರೆಬೇರೆ ಗುಂಪಿನ ಆಹಾರ ಕಲಬೆರಕೆಯ ಶೇಕಡಾವಾರು ಫಲಿತಾಂಶ ಈ ರೀತಿಯಾಗಿದೆ. 30 ಶೇಕಡಾ ಜನರು ಹಣ್ಣು ಮತ್ತು ತರಕಾರಿಗಳಲ್ಲಿ, 13 ಶೇಕಡಾ ಜನರು ಹಾಲಿನಲ್ಲಿ, 29 ಶೇಕಡ ಜನ ಹಿಟ್ಟು, ಸಾಂಬಾರ ಪದಾರ್ಥಗಳು, ತುಪ್ಪ ಇತ್ಯಾದಿ ಜೀನಸು ವಸ್ತುಗಳಲ್ಲಿ ಕಲಬೆರಕೆಯನ್ನು ಕಂಡುಕೊಂಡಿದ್ದರು. 28 ಶೇಕಡಾ ಜನರು ಇದರ ಬಗ್ಗೆ ಅನಿಶ್ಚಿತ ಅಭಿಪ್ರಾಯವನ್ನು ವ್ಯಕ್ತ ಪಡಿಸಿದರು.

ಆದರೆ, ಬಳಕೆದಾರನಲ್ಲಿ ಅರಿವು ಮೂಡಿಸುವ ಮತ್ತು ಇದನ್ನು ಸರಿಪಡಿಸುವ ಕಾರ್ಯ ಪ್ರಣಾಳಿಕೆಯು ಪ್ರಥಮ ಹೆಜ್ಜೆಯಾಗಬೇಕು. ಆದರೆ ಪ್ರಾಯೋಗಿಕ ಜೀವನದಲ್ಲಿ ಈ ಪ್ರಮುಖ ಅಂಶಗಳು ಕಣ್ಮರೆಯಾಗಿವೆ. ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಮಂಡಳಿಯು ಇದನ್ನೇ ಗುರಿಯಾಗಿಟ್ಟುಕೊಂಡು, ರಾಜ್ಯಗಳ ಆಹಾರ ಇಲಾಖೆ ಹಾಗೂ ಜಿಲ್ಲಾ ಆಡಳಿತದೊಂದಿಗೆ ಸೇರಿಕೊಂಡು ಉದ್ದೇಶಿತ ಬದಲಾವಣೆ ತರುವಲ್ಲಿ ಪ್ರಯತ್ನಿಸಬೇಕಾಗಿದೆ. ಹಾಗೂ, ಹಾಗೆ ಮಾಡಬೇಕಾದಲ್ಲಿ ಸಾರ್ವಜನಿಕ ಆರೋಗ್ಯವು ಸರಕಾರಗಳ ಪ್ರಥಮ ಆದ್ಯತೆಯಾಗಬೇಕು.

ಜೊತೆಗೆ ನಾವು ಒಂದು ಕಡೆಯಲ್ಲಿ ಬಣ್ಣಗಳ ಕುರಿತಾದ ಆಕರ್ಷಣೆಯನ್ನು, ಮೋಹವನ್ನು ಕಳೆದುಕೊಳ್ಳಬೇಕು. ತಾಜಾತನದ ಬಗ್ಗೆ ಗಮನ ಹರಿಸುವ ದೃಷ್ಟಿ ಕೋನ ಬೆಳೆಸಿಕೊಳ್ಳಬೇಕು. ಆದಷ್ಟು ಕಾಯಿಗಳನ್ನು ತಂದು ಮನೆಯಲ್ಲೇ ಹಣ್ಣು ಮಾಡಿಕೊಳ್ಳುವ ಕ್ರಮವೇ ಸೂಕ್ತವೋ ಏನೋ. ನಮ್ಮ ಹಳದಿ ಮೋಹವೇ ವ್ಯಾಪಾರಿಗಳ ಬಂಡವಾಳ ಆಗದಂತೆ ಎಚ್ಚರಿಕೆವಹಿಸಬೇಕು. ಇಂದಿನ ರಾಸಾಯನಿಕ ಕ್ರಾಂತಿಯ ಹಾಗೂ ವ್ಯವಸ್ಥೆಯಲ್ಲಿನ ಭ್ರಷ್ಟತೆಯ ನಡುವೆ, ಸಂಭವಿಸಬಹುದಾದ ಅಪಾಯದಿಂದ ನಾವು ಪಾರಾಗುವ ಉಪಾಯವು, ನಾವು ಹೊಂದುವ” ಅರಿವು” ಮತ್ತು” ಅನುಷ್ಠಾನ” ಅಷ್ಟೇ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

2 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

7 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

7 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago