Advertisement
ರಾಷ್ಟ್ರೀಯ

ನೂರು ದಿನದ ಆಡಳಿತ ಬಹುದೊಡ್ಡ ಬದಲಾವಣೆ ತಂದಿದೆ- ಪ್ರಧಾನಿ ಮೋದಿ

Share

ನವದೆಹಲಿ: ತನ್ನ ಆಡಳಿತದ ಎರಡನೇ ಅವಧಿಯ ಮೊದಲ ನೂರು ದಿನ ದೇಶದಲ್ಲಿ ಬಹು ದೊಡ್ಡ ಬದಲಾವಣೆಗೆ ಮತ್ತು ಅಭಿವೃದ್ಧಿಗೆ ಮುನ್ನುಡಿ ಬರೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೋದಿ ನೇತೃತ್ವದ ಎನ್​ಡಿಎ ಒಕ್ಕೂಟದ ಕೇಂದ್ರ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದು ಇಂದಿಗೆ ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ಮಾತನಾಡಿದ ಅವರು
ಈ ಬಾರಿ ಜನರು ನಮಗೆ ಅಗಾಧವಾದ ಬೆಂಬಲವನ್ನು ನೀಡಿ ಮತ್ತೆ ಅಧಿಕಾರ ನೀಡಿದ್ದಾರೆ. 100 ದಿನಗಳಲ್ಲಿ ನಾವು ಏನೇ ಮಾಡಿದ್ದರು ಅಥವಾ ಏನೇ ದೊಡ್ಡ ನಿರ್ಧಾರಗಳನ್ನು ತೆಗೆದುಕೊಂಡಿದ್ದರು ಅದು ಜನರ ಮೇಲೆ ನಂಬಿಕೆ ಇಟ್ಟು ಹಾಗೂ ಅವರ ಬೆಂಬಲದೊಂದಿಗೆ ಮಾಡಿದ್ದೇವೆ. ನಮ್ಮ ನಿರ್ಧಾರಗಳ ಹಿಂದೆ ದೇಶದ 130 ಕೋಟಿ ಜನರ ಸ್ಫೂರ್ತಿ ಇದೆ ಎಂದು ಹೇಳಿದರು.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹರಿಯಾಣದ ರೋಹಟಕ್​ನಲ್ಲಿ ನಡೆದ ಸಮಾವೇಶದಲ್ಲಿ ಈ ವರ್ಷದ ಮೊದಲ ಸಂಸತ್ತಿನಲ್ಲಿ ಕೈಗೊಂಡ ನಿರ್ಣಯಗಳ ಬಗ್ಗೆ ಮೋದಿ ಪ್ರಸ್ತಾಪಿಸಿದರು. ಈ ವರ್ಷ ಸಾಕಷ್ಟು ಮಸೂದೆಗಳು ಸಂಸತ್ತಿನಲ್ಲಿ ಅಂಗೀಕಾರವಾದವು. ಕಳೆದ 60 ವರ್ಷಗಳ ಸಂಸತ್ತಿನ ಕಲಾಪದಲ್ಲಿ ನಡೆಯದ ಸಾಕಷ್ಟು ಕೆಲಸಗಳು ಈ ಬಾರಿ ನಡೆದವು ಎಂದು ಮೋದಿ ಹೇಳಿದರು.

ತ್ರಿವಳಿ ತಲಾಕ್​ ಅನ್ನು ಅಪರಾಧ ಎಂದು ಪರಿಗಣಿಸಿದ್ದು, ಮಾಹಿತಿ ಹಕ್ಕು ಕಾಯ್ದೆ ತಿದ್ದುಪಡಿ ಮತ್ತು ಮೋಟಾರು ಕಾಯ್ದೆಯನ್ನು ತಿದುಪಡಿ ಮಾಡಲಾಯಿತು. ಇದರೊಂದಿಗೆ ಮಹತ್ವದ ನಿರ್ಣಯವಾದ ಸಂವಿಧಾನದ ಆರ್ಟಿಕಲ್​ 370 ಮತ್ತು 35(ಎ) ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮತ್ತು ಅಧಿಕಾರವನ್ನು ರದ್ದುಗೊಳಿಸಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್​ ಅನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡುವ ನಿರ್ಣಯವನ್ನು ತೆಗದುಕೊಳ್ಳಲಾಯಿತು ಇದು ಮಹತ್ವದ ಕೆಲಸಗಳು ಎಂದು ಅವರು ಬಣ್ಣಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…

6 hours ago

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ

ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…

7 hours ago

ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆ – ದೇಶದ ಕೃಷಿಯ ಹೃದಯಭಾಗದಲ್ಲಿ ಮೋಡಗಳೇ ಇಲ್ಲ..!

ದೇಶದಲ್ಲಿ ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆಯಾಗಿದ್ದು, ಪ್ರಮುಖ ಕೃಷಿ ಪ್ರದೇಶಗಳಲ್ಲಿ ಮೋಡಗಳ…

7 hours ago

ಕೇರಳ ಬಜೆಟ್‌ನಲ್ಲಿ ರಬ್ಬರ್‌ ಬೆಳೆಗಾರರಿಗೆ ಬಂಪರ್‌ ಸಿಹಿ ಸುದ್ದಿ- ಬೆಂಬಲ ಬೆಲೆ ₹250ಕ್ಕೆ ಏರಿಕೆ

ಕೇರಳ ಸರ್ಕಾರ ರಬ್ಬರ್‌ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ…

13 hours ago

ಮೂರು ವರ್ಷಗಳಲ್ಲಿ 28 ಲಕ್ಷಕ್ಕೂ ಅಧಿಕ ಮರ ಕಡಿಯಲು ಅನುಮತಿ…! ಪರಿಸರದ ಮೇಲೆ ಹೆಚ್ಚುತ್ತಿರುವ ಒತ್ತಡ

ಮೂರು ವರ್ಷಗಳಲ್ಲಿ ದೇಶದ ಅರಣ್ಯ ಪ್ರದೇಶಗಳಲ್ಲಿ 28 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು…

22 hours ago