Advertisement
ರಾಷ್ಟ್ರೀಯ

ನೂರು ದಿನದ ಆಡಳಿತ ಬಹುದೊಡ್ಡ ಬದಲಾವಣೆ ತಂದಿದೆ- ಪ್ರಧಾನಿ ಮೋದಿ

Share

ನವದೆಹಲಿ: ತನ್ನ ಆಡಳಿತದ ಎರಡನೇ ಅವಧಿಯ ಮೊದಲ ನೂರು ದಿನ ದೇಶದಲ್ಲಿ ಬಹು ದೊಡ್ಡ ಬದಲಾವಣೆಗೆ ಮತ್ತು ಅಭಿವೃದ್ಧಿಗೆ ಮುನ್ನುಡಿ ಬರೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೋದಿ ನೇತೃತ್ವದ ಎನ್​ಡಿಎ ಒಕ್ಕೂಟದ ಕೇಂದ್ರ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದು ಇಂದಿಗೆ ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ಮಾತನಾಡಿದ ಅವರು
ಈ ಬಾರಿ ಜನರು ನಮಗೆ ಅಗಾಧವಾದ ಬೆಂಬಲವನ್ನು ನೀಡಿ ಮತ್ತೆ ಅಧಿಕಾರ ನೀಡಿದ್ದಾರೆ. 100 ದಿನಗಳಲ್ಲಿ ನಾವು ಏನೇ ಮಾಡಿದ್ದರು ಅಥವಾ ಏನೇ ದೊಡ್ಡ ನಿರ್ಧಾರಗಳನ್ನು ತೆಗೆದುಕೊಂಡಿದ್ದರು ಅದು ಜನರ ಮೇಲೆ ನಂಬಿಕೆ ಇಟ್ಟು ಹಾಗೂ ಅವರ ಬೆಂಬಲದೊಂದಿಗೆ ಮಾಡಿದ್ದೇವೆ. ನಮ್ಮ ನಿರ್ಧಾರಗಳ ಹಿಂದೆ ದೇಶದ 130 ಕೋಟಿ ಜನರ ಸ್ಫೂರ್ತಿ ಇದೆ ಎಂದು ಹೇಳಿದರು.

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಹರಿಯಾಣದ ರೋಹಟಕ್​ನಲ್ಲಿ ನಡೆದ ಸಮಾವೇಶದಲ್ಲಿ ಈ ವರ್ಷದ ಮೊದಲ ಸಂಸತ್ತಿನಲ್ಲಿ ಕೈಗೊಂಡ ನಿರ್ಣಯಗಳ ಬಗ್ಗೆ ಮೋದಿ ಪ್ರಸ್ತಾಪಿಸಿದರು. ಈ ವರ್ಷ ಸಾಕಷ್ಟು ಮಸೂದೆಗಳು ಸಂಸತ್ತಿನಲ್ಲಿ ಅಂಗೀಕಾರವಾದವು. ಕಳೆದ 60 ವರ್ಷಗಳ ಸಂಸತ್ತಿನ ಕಲಾಪದಲ್ಲಿ ನಡೆಯದ ಸಾಕಷ್ಟು ಕೆಲಸಗಳು ಈ ಬಾರಿ ನಡೆದವು ಎಂದು ಮೋದಿ ಹೇಳಿದರು.

ತ್ರಿವಳಿ ತಲಾಕ್​ ಅನ್ನು ಅಪರಾಧ ಎಂದು ಪರಿಗಣಿಸಿದ್ದು, ಮಾಹಿತಿ ಹಕ್ಕು ಕಾಯ್ದೆ ತಿದ್ದುಪಡಿ ಮತ್ತು ಮೋಟಾರು ಕಾಯ್ದೆಯನ್ನು ತಿದುಪಡಿ ಮಾಡಲಾಯಿತು. ಇದರೊಂದಿಗೆ ಮಹತ್ವದ ನಿರ್ಣಯವಾದ ಸಂವಿಧಾನದ ಆರ್ಟಿಕಲ್​ 370 ಮತ್ತು 35(ಎ) ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮತ್ತು ಅಧಿಕಾರವನ್ನು ರದ್ದುಗೊಳಿಸಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್​ ಅನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡುವ ನಿರ್ಣಯವನ್ನು ತೆಗದುಕೊಳ್ಳಲಾಯಿತು ಇದು ಮಹತ್ವದ ಕೆಲಸಗಳು ಎಂದು ಅವರು ಬಣ್ಣಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

8 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

9 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

10 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

13 hours ago