ವಿಶೇಷ ವರದಿಗಳು

ನೆಟ್ಟಾರಿನಲ್ಲಿ ಉಪಯೋಗವಿಲ್ಲದೆ ಪಾಳುಬಿದ್ದಿದೆ ಬಸ್‍ನಿಲ್ದಾಣ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ : ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ನೆಟ್ಟಾರು ಬಸ್‍ನಿಲ್ದಾಣ ಉಪಯೋಗವಿಲ್ಲದೆ ಪಾಳು ಬಿದ್ದಿದ್ದು, ಕುಸಿಯುವ ಭೀತಿಯೂ ಇದೆ.
ಬಸ್ ನಿಲ್ದಾಣದ ಛಾವಣಿಯ ಪಕ್ಕಾಸು ಮುರಿದಿದ್ದು, ಹೆಂಚು ಹಾರಿ ಹೋಗಿದೆ. ಬಸ್ ನಿಲ್ದಾಣದ ಸುತ್ತಮುತ್ತ ಬೃಹತ್ ಪೊದೆಗಳು ಬೆಳೆದು ನಿಂತಿದ್ದು, ನಿಲ್ದಾಣವನ್ನು ಗುರುತಿಸುವುದೇ ಕಷ್ಟಸಾಧ್ಯವಾಗಿದೆ.

Advertisement

ಪುತ್ತೂರಿನಿಂದ ಬೆಳ್ಳಾರೆಗೆ ಹಾಗು ಪೆರ್ಲಂಪಾಡಿಯಿಂದ ಬೆಳ್ಳಾರೆಗೆ ಸಂಪರ್ಕಿಸುವ ನೆಟ್ಟಾರು ಜಂಕ್ಷನಿನಲ್ಲಿ ಇರುವ ಈ ಬಸ್‍ನಿಲ್ದಾಣ ಹಲವು ವರ್ಷಗಳಿಂದ ಪಾಳು ಬಿದ್ದ ಸ್ಥಿತಿಯಲ್ಲಿದ್ದರೂ ದುರಸ್ಥಿಗೊಳಿಸದಿರುವುದರಿಂದ ಪ್ರಯಾಣಿಕರು ರಸ್ತೆ ಬದಿಯಲ್ಲಿ ಬಸ್‍ಗಾಗಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪೆರ್ಲಂಪಾಡಿ ಹಾಗು ಮಾಡಾವು ಮೂಲಕವಾಗಿ ಪುತ್ತೂರಿಗೆ ಸಂಪರ್ಕ ಕಲ್ಪಿಸುವಲ್ಲಿ ನೆಟ್ಟಾರು ಪ್ರಮುಖ ಜಂಕ್ಷನ್ ಆಗಿದ್ದು, ದಿನಂಪ್ರತಿ ನೂರಾರು ಬಸ್‍ಗಳು ಸಂಚರಿಸುತ್ತವೆ. ಆದರೆ ಈಗಿರುವ ಬಸ್‍ನಿಲ್ದಾಣ ಯಾವ ಕಡೆಯಿಂದ ಬಸ್ ಬಂದರೂ ಉಪಯೋಗವಿಲ್ಲ ಎಂಬಂತಾಗಿದೆ. ಬಸ್ ನಿಲ್ದಾಣ ಒಂದು ಕಡೆಯಾದರೆ ಬಸ್ ನಿಲ್ಲುವುದೇ ಬೇರೆಯೇ ಕಡೆ. ಆದುದರಿಂದ ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರು ರಸ್ತೆ ಬದಿಯಲ್ಲಿಯೋ ಅಥವ ಸ್ಥಳಿಯ ಅಂಗಡಿಗಳ ಜಗಲಿಯಲ್ಲಿಯೋ ಬಸ್‍ಗಾಗಿ ಕಾಯುವುದು ಅನಿವಾರ್ಯವಾಗಿದೆ. ಬಸ್ ನಿಲ್ದಾಣವನ್ನು ಸರಿಯಾದೆಡೆಗೆ ಸ್ಥಳಾಂತರಿಸಿ ಅನುಕೂಲ ಮಾಡಿಕೊಡಲು ಸಾರ್ವಜನಿಕರು ಹಲವು ಬಾರಿ ಆಗ್ರಹಿಸಿದರೂ ಇದುವರೆಗೂ ಪ್ರಯೋಜನವಾಗಿಲ್ಲ.ಪ್ರಯಾಣಿಕರ ಬಸ್ ತಂಗುದಾಣ ಇದೀಗ ಕುಡುಕ್ಕರು ಹಾಗು ಭಿಕ್ಷುಕರ ಆಶ್ರಯ ತಾಣವಾಗಿದೆ.

ಅಂಚೆ ಕಚೇರಿಗೂ ಕಾದಿದೆ ಅಪಾಯ:
ಬಸ್ ನಿಲ್ದಾಣದ ಪಕ್ಕದಲ್ಲಿ ಮಣಿಕ್ಕಾರ ಅಂಚೆ ಕಛೇರಿ ಕಾರ್ಯಾಚರಿಸುತ್ತಿದ್ದು, ಬಸ್ ನಿಲ್ದಾಣದ ಛಾವಣಿ ಕುಸಿತದಲ್ಲಿ ಅಂಚೆ ಕಛೇರಿಗೂ ಅಪಾಯ ತಪ್ಪಿದ್ದಲ್ಲ. ಪ್ರಯಾಣಿಕರ ವಿಶ್ರಾಂತಿ ಕೊಠಡಿಯ ಛಾವಣಿ ಮೂಲಕ ನೀರು ಸೋರುತ್ತಿದೆ. ಛಾವಣಿ ಕುಸಿದು ಬಿದ್ದಲ್ಲಿ ಅಂಚೆ ಕಛೇರಿಯ ಕಡತಗಳಿಗೂ ಹಾನಿಯಾಗುವ ಅಪಾಯವಿದೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

40 minutes ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

53 minutes ago

ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…

1 hour ago

ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…

1 hour ago

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

11 hours ago

ಸ್ವಾತಂತ್ರ್ಯಕ್ಕಾಗಿ ಮದುವೆ

ಕುಟುಂಬ ಎಂಬುದು ಸಮಾಜದ ಆಧಾರ ಸ್ಥಂಭ. ಮದುವೆ ಎಂಬುದು ಈ ಸ್ಥಂಭದ ತಳಪಾಯ.…

11 hours ago