Advertisement
ವಿಶೇಷ ವರದಿಗಳು

ನೆಟ್ ವರ್ಕ್ ಸಮಸ್ಯೆಗೆ ಸ್ಥಳಾಂತರವಾದ ಅಂಚೆ ಕಚೇರಿ..!

Share

ಬೆಳ್ಳಾರೆ: ಗ್ರಾಮೀಣ ಬ್ಯಾಂಕ್ ಅಂಚೆ ಕಚೇರಿ. ಇದೀಗ ನೆಟ್ ವರ್ಕ್ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಸ್ಥಳಾಂತರವಾಗುತ್ತದೆ ಎಂದಾದರೆ ಗ್ರಾಮೀಣ ಭಾಗದ ಅಭಿವೃದ್ಧಿ ಹೇಗೆ ಮತ್ತು ಯಾವಾಗ ?

ಇತ್ತೀಚೆಗೆ ಅಂಚೆ ಕಚೇರಿಯೂ ಡಿಜಿಟಲ್ ಇಂಡಿಯಾ ವ್ಯಾಪ್ತಿಗೆ ಬಂದಿದೆ. ಎಲ್ಲಾ ವ್ಯವಹಾರವೂ ಡಿಜಿಟಲ್ ಆಗುತ್ತಿದೆ. ಪಾಸ್ ಪುಸ್ತಕ ಎಂಟ್ರಿಯಿಂದ ತೊಡಗಿ ಹಣ ಡಿಪೊಸಿಟ್ ಮಾಡಲು ಹಾಗೂ ಹಣ ಡ್ರಾ ಮಾಡಲು ಈಗ ನೆಟ್ ವರ್ಕ್ ಬೇಕೇ ಬೇಕು. ಇದಕ್ಕಾಗಿ ಅಂಚೆ ಕಚೇರಿಗೆ ಬಿಎಸ್ ಎನ್ ಎಲ್ ಹಾಗೂ ಇತರ ನೆಟ್ ವರ್ಕ್ ಬಳಸಿಕೊಂಡು ಇಂಟರ್ನೆಟ್ ಬಳಕೆ ಮಾಡಲು ಸೂಚನೆ ಇದೆ. ಯಾವುದೇ ನೆಟ್ ವರ್ಕ್ ಸರಿಯಾಗಿ ಸಿಗದ ಕಡೆ ಅಂಚೆ ಕಚೇರಿಯೇ ಸ್ಥಳಾಂತರವಾಗುತ್ತದೆ…!. ಹೇಗಿದೆ ವ್ಯವಸ್ಥೆ..!. ಹಿಂದೆಲ್ಲಾ ಹೇಳುತ್ತಿದ್ದರು ಮನೆ ಕಟ್ಟುವಾಗ ಈಗ ಮೊಬೈಲ್ ಸಿಗ್ನಲ್, 3ಜಿ, 4ಜಿ ಸಿಗುವಲ್ಲೇ ಕಟ್ಟಬೇಕೆಂದು. ಈಗ ಅಂಚೆ ಕಚೇರಿಯೂ ಅದೇ ಹಾದಿಯಲ್ಲಿ ಸಾಗಿದೆ. ಇದಕ್ಕೆ ಇಲಾಖೆ ವ್ಯವಸ್ಥೆ ದೂರು ಪ್ರಯೋಜನ ಇಲ್ಲ ನೆಟ್ ವರ್ಕ್ ಹೇಗೆ ನೀಡಬೇಕು ಹಾಗೂ  ನೀಡಬಹುದು  ಎಂಬುದರ ಬಗ್ಗೆ ಯೋಚನೆ ನಡೆಯಬೇಕಿತ್ತು. ಇದಕ್ಕೆ ಉದಾಹರಣೆಯಾಗಿದೆ ಮುಕ್ಕೂರು ಅಂಚೆ ಕಚೇರಿ.

ಸುಮಾರು ಐವತ್ತು ವರ್ಷಗಳಿಗಿಂತ ಅಧಿಕ ಕಾಲದಿಂದ ಪೆರುವಾಜೆ ಗ್ರಾಮದ ಮುಕ್ಕೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಂಚೆ ಕಚೇರಿಯನ್ನು ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಪೆರುವಾಜೆ ಗ್ರಾ.ಪಂ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಇದರಿಂದ ಅಂಚೆ ಕಚೇರಿಯಲ್ಲಿ ವ್ಯವಹಾರ ಹೊಂದಿದ ನೂರಾರು ಗ್ರಾಹಕರಿಗೆ ತೊಂದರೆಯಾಗಿದೆ. ಮೇ22ರ ನಂತರ ಅಂಚೆ ಕಚೇರಿಯ ವ್ಯವಹಾರಕ್ಕೆಂದು ಬಂದವರಿಗೆ  ಬಾಗಿಲಿಗೆ ಅಂಟಿಸಿದ ಸ್ಥಳಾಂತರ ಮಾಹಿತಿಯ ನೋಟಿಸ್ ಕಂಡು ವಿಷಯ ಗೊತ್ತಾಗಿದೆ. ಸ್ಥಳಾಂತರಿಸುವ ಬಗ್ಗೆ ಯಾವುದೇ ಮಾಹಿತಿ ಗ್ರಾಹಕರ ಗಮನಕ್ಕೆ ಬಂದಿಲ್ಲ. ಜನರಿಗೆ ಅನುಕೂಲಕರವಾಗಿದ್ದ ಅಂಚೆ ಕಚೇರಿಯನ್ನು ದಿಢೀರ್ ವರ್ಗಾಯಿಸಿದ್ದನ್ನು ಖಂಡಿಸಿ ಮುಕ್ಕೂರಿನ ಭಾಗದ ಜನತೆ ಹೋರಾಟಕ್ಕೆ ಸಿದ್ದತೆ ನಡೆಸುತ್ತಿದೆ.

ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದ ಕಟ್ಟಡ ಶಿಥಿಲವಾಗಿದ್ದು, ನೆಟ್ವರ್ಕ್ ಸಮಸ್ಯೆ ಇರುವುದರಿಂದ ಸ್ಥಳಾಂತರ ಅನಿವಾರ್ಯವಾಗಿದೆ ಎಂದು ಅಂಚೆ ಕಚೇರಿ ಮೂಲಗಳು ತಿಳಿಸಿದೆ.  ಪ್ರಮುಖವಾಗಿ ಕೇಂದ್ರ ಸರ್ಕಾರ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಜಾರಿ ಮಾಡಿದ್ದು, ಇದರ ಮೂಲಕ ಶಾಲಾ ಮಕ್ಕಳಿಗೆ ಸ್ಕಾಲರ್‍ಶಿಪ್ ನೀಡಬೇಕಿದೆ. ಮಕ್ಕಳ ಅಕೌಂಟ್ ಮೊಬೈಲ್ ಮೂಲಕವೇ ಆಗಬೇಕಿದೆ. ಮುಕ್ಕೂರಿನಲ್ಲಿ ನೆಟ್ವರ್ಕ್ ಸಮಸ್ಯೆ ತೀವ್ರ ಇರುವುದರಿಂದ ಕಚೇರಿಯನ್ನು ಸ್ಥಳಾಂತರಿಸಲೇಬೇಕಿದೆ ಎಂಬುದು ಅಂಚೆ ಇಲಾಖೆಯ ಮಾತು.

ಒಂದೇ ಸರಕಾರದ  ಎರಡು ಇಲಾಖೆಗಳು ಇವೆ. ಅದೇ ಸರಕಾರದ ಸಂಸದರು, ಶಾಸಕರು ಇದ್ದಾರೆ. ಎಲ್ಲರೂ ಮಾತನಾಡಿದರೆ ಏಕೆ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ.  ಬಿ ಎಸ್ ಎನ್ ಎಲ್ ಕೇಂದ್ರ ಸರಕಾರದ್ದು ಅಂಚೆ ಕಚೇರಿಯೂ ಕೇಂದ್ರ ಸರಕಾರದ್ದು ಸಂಸದರೂ ಆಡಳಿತ ಪಕ್ಷದವರೇ ಆಗಿದ್ದಾರೆ. ಹೀಗಾಗಿ ಪ್ರಯತ್ನ ಮಾಡಿದರೆ ಸಮಸ್ಯೆಗೆ ಮುಕ್ತಿ ಸಿಗಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…

2 hours ago

ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ

ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…

2 hours ago

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

10 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

19 hours ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

1 day ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

2 days ago