Advertisement
ಜಿಲ್ಲೆ

ನೆತ್ತರೆ ಕೆರೆ ಒಡಲು ಬತ್ತಿದೆ : ಐತಿಹ್ಯದ ಹಿನ್ನೆಲೆಯ ಕೆರೆಯಲ್ಲಿ ನೀರು ಬರಿದಾಯಿತು…!

Share

ಕಡಬ: ಅನೇಕ ವರ್ಷಗಳ ಬಳಿಕ ನೆತ್ತರ ಕೆರೆಯ ಒಡಲು ಬರಿದಾಗಿದೆ. ನೆತ್ತರ್ ಕೆರೆಯಲ್ಲಿ ನೀರು ಕಡಿಮೆಯಾಗಿರುವುದು ಬಲ್ಲವರಿಲ್ಲ. ಆದರೆ ಈ ಭಾರಿ ಕಡಿಮೆಯಾಗಿರುವುದು ಬರದ ಛಾಯೆಯನ್ನು ತೊರಿಸುತ್ತದೆ. ಕೆರೆಯಲ್ಲಿ ನೀರು ಬತ್ತಿರುವುದರಿಂದ ಕೆರೆಯ ಕೆಳಗಿನ ಭಾಗದಲ್ಲಿನ ಕೆರೆ, ಕೊಳವೆಬಾವಿಯಲ್ಲಿ ನೀರು ಬತ್ತಿ ಹೋಗಿ ಕೃಷಿ ತೋಟಗಳು ಕರಟಿಹೋಗಿವೆ, ಕುಡಿಯಲು ನೀರಿಲ್ಲದಂತಾಗಿದೆ ಎಂದು ಸ್ಥಳೀಯರಾದ ಸೋಮನಾಥ ಗೌಡ ಹೇಳುತ್ತಿರುವುದು  ಈ ಬಾರಿಯ ಬರದ ಛಾಯೆ ಮುಖ.

ಕಡಬ ತಾಲೂಕು ಕೊಯಿಲ ಗ್ರಾಮದ ಪಶುಸಂಗೋಪಾನ ಇಲಾಖಾ ಜಾಗದಲ್ಲಿ ನಿರ್ಮಾಣವಾಗುತ್ತಿರುವ ಪಶುವೈದ್ಯಕೀಯ ಕಾಲೇಜಿಗೆ ಒಳಪಟ್ಟ ಜಾಗದಲ್ಲಿರುವ ನೆತ್ತರ್ ಕೆರೆಯ ತಳಕಾಣುತ್ತಿದೆ. ವರ್ಷ ಪೂರ್ತಿ ಜೀವಜಲ ತುಂಬಿರುತ್ತಿದ್ದ ಈ ಕೆರೆಯಲ್ಲಿ ಈ ಭಾರಿ ಬಿಸಿಲಿನ ತಾಪಕ್ಕೆ ನೀರು ಬತ್ತಿ ಹೋಗಿ ಬರದ ಬೀಕರತೆ ತೋರಿಸುತ್ತಿದೆ.  ಬರಪೂರ ನೀರಿನ ಸೆಲೆಯಿರುವ ಐತಿಹ್ಯ ಉಳ್ಳ ಈ ಕೆರೆಯಲ್ಲಿ ಇದುವರೆಗೆ ನೀರು ಬತ್ತಿಲ್ಲ ಎಂಬುದು ಈ ಭಾಗದ ಹಿರಿಯರ ಅಭಿಪ್ರಾಯ.  ಈ ಬಾರಿ ನೀರು ಬತ್ತಿ ಹೋಗಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಕೆಲ ದಿನಗಳಲ್ಲಿ ಮಳೆ ಬಾರದಿದ್ದಲ್ಲಿ ನೀರಿನ ಬವಣೆ ತಾರಕ್ಕೆ ಏರಲಿದೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ.
ಮಳೆಗಾಲದಲ್ಲಿ ಮಾತ್ರ ನೀರು ಶೇಖರಣೆಯಾಗುತ್ತಿದ್ದ ಜಾಗವನ್ನು ಪಶುಸಂಗೋಪಾನ ಇಲಾಖಾ ವತಿಯಿಂದ ಸರಿ ಸುಮಾರು 1995 ರಲ್ಲಿ ಮಾನವ ಶ್ರಮದಿಂದ ಕೆರೆಯಾಗಿ ನಿರ್ಮಿಸಲಾಗಿತ್ತು. ಬಳಿಕ 2010 ರ ಸುಮಾರಿಗೆ ಪುನರ್ ನಿರ್ಮಾಣಗೊಳಿಸಲಾಗಿತ್ತು. ಈ ಕೆರೆಯಿರುವ ಜಾಗ ಪ್ರಸಕ್ತ ನಿರ್ಮಾಣವಾಗುತ್ತಿರುವ ಪಶುವೈದ್ಯಕೀಯ ಕಾಲೇಜು ಸುಪರ್ದಿಗೆ ಹಸ್ತಾಂತರವರೆಗೂ ಸಂವರ್ದನ ಕೇಂದ್ರದ ಉಪಯೋಗದಲ್ಲಿತ್ತು. ಈ ನೀರನ್ನು ಸಂವರ್ದನಾ ಕೇಂದ್ರದ ದನಗಳ ಆಹಾರಕ್ಕಾಗಿ ಬೆಳೆಯುತ್ತಿದ್ದ ಹುಲ್ಲುಗಾವಲಿಗೆ ಉಪಯೋಗಿಸಲಾಗುತ್ತಿತ್ತು. ಇದೀಗ ಕೆರೆಗೆ ಅಳವಡಿಸಿದ್ದ ಮೋಟರ್ ಪಂಪ್ ನ್ನು ಇಲಾಖೆ ತೆರವುಗೊಳಿಸಲಾಗಿದೆ.

ಈ ಕೆರೆಗೂ ಪಕ್ಕದ ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನಕ್ಕೂ ಸಂಬಂದವಿದೆ. ಈ ಕೆರೆ ನಿರ್ಮಾಣಕ್ಕೂ ಮುನ್ನವೇ ಇಲ್ಲಿ ಬೃಹದಕಾರದ ಕೆರೆಯಿತ್ತು. ಕಾಲನ ನಂತರ ಮಣ್ಣಿನಿಂದ ಕೆರೆ ಮುಚ್ಚಿ ಹೋಯಿತು. ಆದರೂ ವರ್ಷ ಪೂರ್ತಿ ಈ ಜಾಗದಲ್ಲಿ ನೀರಿನ ತೇವವಿತ್ತು. ಹಿರಿಯರು ಕೆರೆ ನಿರ್ಮಿಸುವ ಸಂದರ್ಭ ಶಿವನ ಮೂರ್ತಿ ಸಿಕ್ಕಿತ್ತು. ಕೆರೆ ನಿರ್ಮಾಣಕ್ಕೆ ಬಳಸುವ ಹಾರೆ ಈ ಶಿವನ ಮೂರ್ತಿಗೆ ತಾಗಿ ರಕ್ತ ಚೆಲ್ಲಿತ್ತು. ಆದ್ದರಿಂದ ಈ ಕೆರೆಗೆ ನೆತ್ತೆರ್ (ತುಳುವಿನಲ್ಲಿ ರಕ್ತಕ್ಕೆ ನೆತ್ತೆರ್ ಎನ್ನುತ್ತಾರೆ) ಕೆರೆಯೆಂದಾಯಿತು ಎನ್ನುವ ಹಿನ್ನೆಲೆಯ ಐತಿಹ್ಯವನ್ನು ಹಿರಿಯರು ಬಿಚ್ಚಿಡುತ್ತಾರೆ.

ಕೆರೆಯ ನೀರು ಆರಿರುವುದು  ಸ್ಥಳೀಯರಿಗೆ ಇನ್ನಷ್ಟು ಆತಂಖ ಮೂಡಿಸಿದೆ,  ಕೆರೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಕೊಳವೆ ಬಾವಿ ಹೆಚ್ಚಾಗಿದೆ ಹೀಗಾಗಿ ಕೆರೆಯಲ್ಲಿ ನೀರಿನ ಒರತೆಯೂ ಕಡಿಮೆಯಾಗಿದೆ. ಮುಂದೇನು ಎಂಬ ಯೋಚನೆ ಶುರುವಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

7 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

8 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

12 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

13 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

23 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

23 hours ago