Advertisement
ಸುದ್ದಿಗಳು

ನೆರೆಪರಿಹಾರ ನಿಧಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ 1 ಕೋಟಿ ರೂಪಾಯಿ ನೆರವು

Share

ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯದಲ್ಲಿ ಅತಿವೃಷ್ಠಿಗೆ ತುತ್ತಾಗಿ ಸಂತ್ರಸ್ತರಾದವರಿಗೆ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ರೂ 1 ಕೋಟಿ ಮೊತ್ತದ ಸಹಾಯವನ್ನು ನೀಡಲು ಆಡಳಿತ ಮಂಡಳಿ ನಿರ್ಣಯಿಸಿದೆ. ಮುಖ್ಯಮಂತ್ರಿಗಳ ನೆರೆ ಪರಿಹಾರ ನಿಧಿಗೆ ರೂ.1ಕೋಟಿ ನೆರೆ ಪರಿಹಾರವನ್ನು ನೀಡುವುದಾಗಿ ಆಡಳಿತ ಮಂಡಳಿಯು ನಿರ್ಧಾರ ಮಾಡಿದೆ ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕುಕ್ಕೆ ದೇವಳದ ಆಡಳಿತ ಮಂಡಳಿಯು ಈ ಬಗ್ಗೆ ತುರ್ತು ಸಭೆಯನ್ನು ಕರೆದು ಈ  ನಿರ್ಣಯ ಕೈಗೊಂಡಿತು. ಭಕ್ತಾದಿಗಳಿಂದ ಶ್ರೀ ದೇವಳಕ್ಕೆ ಬರುವ ಆದಾಯದ ಒಂದಂಶವನ್ನು ರಾಜ್ಯದ ಜನತೆಯ ಕಷ್ಟಕ್ಕೆ ವಿನಿಯೋಗಿಸಲು ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಒಮ್ಮತದ ಅಭಿಪ್ರಾಯ ಸೂಚಿಸಿದ್ದರು ಎಂದರು.
ಧನಸಹಾಯದೊಂದಿಗೆ ಶ್ರೀ ದೇವಳಕ್ಕೆ ಭಕ್ತರು ದಾನವಾಗಿ ನೀಡಿದ ಸೀರೆ, ದೋತಿ, ಪಂಚೆ, ಶಲ್ಯ, ಬೈರಾಸು, ರವಿಕೆ ಮೊದಲಾದುವುಗಳನ್ನು ಜಿಲ್ಲಾಧಿಕಾರಿಗಳ ಮತ್ತು ಸಹಾಯಕ ಆಯುಕ್ತರ ಸಹಕಾರದಿಂದ ನೆರೆ ಸಂತ್ರಸ್ಥರಿಗೆ ನೀಡಲು ತೀರ್ಮಾನಿಸಲಾಗಿದೆ. ಇದೀಗ ಶ್ರೀ ದೇವಳದಲ್ಲಿ 1050 ಪಂಚೆ, 573 ಸೀರೆ, 160 ಶಾಲು, 20 ರವಿಕೆ, 29 ಬ್ಯೆರಾಸು 29 ಇದೆ. ಇವುಗಳನ್ನು ಮಡಿಕೇರಿ, ವಿರಾಜಪೇಟೆ, ಬಂಟ್ವಾಳ, ಬೆಳ್ತಂಗಡಿ ಪರಿಸರದಲ್ಲಿ ನೆರೆಯಿಂದ ತೊಂದರೆಗೊಳಗಾದ ಜನರಿಗೆ ಶ್ರೀ ದೇವಳದ ಆಡಳಿತ ಮಂಡಳಿ ತೆರಳಿ ಅರ್ಹರಿಗೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ನಿತ್ಯಾನಂದ ಮುಂಡೋಡಿ ಹೇಳಿದರು.

ಸುಬ್ರಹ್ಮಣ್ಯ ಪ್ರದೇಶದಲ್ಲೂ ದೇವಳದಿಂದ ನೆರವು:   ಸುಬ್ರಹ್ಮಣ್ಯ ಪರಿಸರ ಹಾಗೂ ಸಮೀಪದ ಕುಲ್ಕುಂದ ಇತ್ಯಾದಿ ಕಡೆಗಳಲ್ಲಿ ನೆರೆ ನೀರು ಮನೆಯೊಳಗೆ ನುಗ್ಗಿತ್ತು. ಈ ಪ್ರದೇಶದಲ್ಲಿ ಹಾನಿಗೊಳಗಾಗಿ ನೆರೆ ನೀರಿನಿಂದ ಸಂತ್ರಸ್ತಗೊಂಡ ನಿರಾಶ್ರಿತರಾದ ಜನರಿಗೆ ಶ್ರೀ ದೇವಳದಿಂದ ಊಟೋಪಹಾರ ಹಾಗೂ ವಸತಿ ವ್ಯವಸ್ಥೆಯನ್ನು ಮಾಡಲಾಗಿತ್ತು.ಅಲ್ಲದೆ ಗುಂಡ್ಯ, ಅಡ್ಡಹೊಳೆ, ಕಲ್ಮಕಾರಿನ ನಿರಾಶ್ರಿತರ ಕೇಂದ್ರಕ್ಕೆ ಬೋಜನ, ಉಪಹಾರ ವ್ಯವಸ್ಥೆ ಮಾಡಲಾಗಿದೆ ಎಂದು ನಿತ್ಯಾನಂದ ಮುಂಡೋಡಿ ಹೇಳಿದರು.

ಈ ಸಂದರ್ಭ ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್, ಆಡಳಿತ ಮಂಡಳಿ ಸದಸ್ಯರಾದ ಮಹೇಶ್‍ಕುಮಾರ್ ಕೆ.ಎಸ್ ಕರಿಕ್ಕಳ, ಕೆ. ಕೃಷ್ಣಮೂರ್ತಿ ಭಟ್, ಬಾಲಕೃಷ್ಣ ಗೌಡ ಬಳ್ಳೇರಿ, ಮಾಧವ ಡಿ, ರಾಜೀವಿ.ಆರ್.ರೈ, ಮಾಸ್ಟರ್ ಪ್ಲಾನ್ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವರಾಮ ರೈ, ಸತೀಶ್ ಕೂಜುಗೋಡು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

5 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

5 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago