Advertisement
ಸುದ್ದಿಗಳು

ನೆರೆಪರಿಹಾರ ನಿಧಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಿಂದ 1 ಕೋಟಿ ರೂಪಾಯಿ ನೆರವು

Share

ಸುಬ್ರಹ್ಮಣ್ಯ: ಕರ್ನಾಟಕ ರಾಜ್ಯದಲ್ಲಿ ಅತಿವೃಷ್ಠಿಗೆ ತುತ್ತಾಗಿ ಸಂತ್ರಸ್ತರಾದವರಿಗೆ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ರೂ 1 ಕೋಟಿ ಮೊತ್ತದ ಸಹಾಯವನ್ನು ನೀಡಲು ಆಡಳಿತ ಮಂಡಳಿ ನಿರ್ಣಯಿಸಿದೆ. ಮುಖ್ಯಮಂತ್ರಿಗಳ ನೆರೆ ಪರಿಹಾರ ನಿಧಿಗೆ ರೂ.1ಕೋಟಿ ನೆರೆ ಪರಿಹಾರವನ್ನು ನೀಡುವುದಾಗಿ ಆಡಳಿತ ಮಂಡಳಿಯು ನಿರ್ಧಾರ ಮಾಡಿದೆ ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕುಕ್ಕೆ ದೇವಳದ ಆಡಳಿತ ಮಂಡಳಿಯು ಈ ಬಗ್ಗೆ ತುರ್ತು ಸಭೆಯನ್ನು ಕರೆದು ಈ  ನಿರ್ಣಯ ಕೈಗೊಂಡಿತು. ಭಕ್ತಾದಿಗಳಿಂದ ಶ್ರೀ ದೇವಳಕ್ಕೆ ಬರುವ ಆದಾಯದ ಒಂದಂಶವನ್ನು ರಾಜ್ಯದ ಜನತೆಯ ಕಷ್ಟಕ್ಕೆ ವಿನಿಯೋಗಿಸಲು ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಒಮ್ಮತದ ಅಭಿಪ್ರಾಯ ಸೂಚಿಸಿದ್ದರು ಎಂದರು.
ಧನಸಹಾಯದೊಂದಿಗೆ ಶ್ರೀ ದೇವಳಕ್ಕೆ ಭಕ್ತರು ದಾನವಾಗಿ ನೀಡಿದ ಸೀರೆ, ದೋತಿ, ಪಂಚೆ, ಶಲ್ಯ, ಬೈರಾಸು, ರವಿಕೆ ಮೊದಲಾದುವುಗಳನ್ನು ಜಿಲ್ಲಾಧಿಕಾರಿಗಳ ಮತ್ತು ಸಹಾಯಕ ಆಯುಕ್ತರ ಸಹಕಾರದಿಂದ ನೆರೆ ಸಂತ್ರಸ್ಥರಿಗೆ ನೀಡಲು ತೀರ್ಮಾನಿಸಲಾಗಿದೆ. ಇದೀಗ ಶ್ರೀ ದೇವಳದಲ್ಲಿ 1050 ಪಂಚೆ, 573 ಸೀರೆ, 160 ಶಾಲು, 20 ರವಿಕೆ, 29 ಬ್ಯೆರಾಸು 29 ಇದೆ. ಇವುಗಳನ್ನು ಮಡಿಕೇರಿ, ವಿರಾಜಪೇಟೆ, ಬಂಟ್ವಾಳ, ಬೆಳ್ತಂಗಡಿ ಪರಿಸರದಲ್ಲಿ ನೆರೆಯಿಂದ ತೊಂದರೆಗೊಳಗಾದ ಜನರಿಗೆ ಶ್ರೀ ದೇವಳದ ಆಡಳಿತ ಮಂಡಳಿ ತೆರಳಿ ಅರ್ಹರಿಗೆ ನೀಡುವ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ನಿತ್ಯಾನಂದ ಮುಂಡೋಡಿ ಹೇಳಿದರು.

ಸುಬ್ರಹ್ಮಣ್ಯ ಪ್ರದೇಶದಲ್ಲೂ ದೇವಳದಿಂದ ನೆರವು:   ಸುಬ್ರಹ್ಮಣ್ಯ ಪರಿಸರ ಹಾಗೂ ಸಮೀಪದ ಕುಲ್ಕುಂದ ಇತ್ಯಾದಿ ಕಡೆಗಳಲ್ಲಿ ನೆರೆ ನೀರು ಮನೆಯೊಳಗೆ ನುಗ್ಗಿತ್ತು. ಈ ಪ್ರದೇಶದಲ್ಲಿ ಹಾನಿಗೊಳಗಾಗಿ ನೆರೆ ನೀರಿನಿಂದ ಸಂತ್ರಸ್ತಗೊಂಡ ನಿರಾಶ್ರಿತರಾದ ಜನರಿಗೆ ಶ್ರೀ ದೇವಳದಿಂದ ಊಟೋಪಹಾರ ಹಾಗೂ ವಸತಿ ವ್ಯವಸ್ಥೆಯನ್ನು ಮಾಡಲಾಗಿತ್ತು.ಅಲ್ಲದೆ ಗುಂಡ್ಯ, ಅಡ್ಡಹೊಳೆ, ಕಲ್ಮಕಾರಿನ ನಿರಾಶ್ರಿತರ ಕೇಂದ್ರಕ್ಕೆ ಬೋಜನ, ಉಪಹಾರ ವ್ಯವಸ್ಥೆ ಮಾಡಲಾಗಿದೆ ಎಂದು ನಿತ್ಯಾನಂದ ಮುಂಡೋಡಿ ಹೇಳಿದರು.

ಈ ಸಂದರ್ಭ ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್, ಆಡಳಿತ ಮಂಡಳಿ ಸದಸ್ಯರಾದ ಮಹೇಶ್‍ಕುಮಾರ್ ಕೆ.ಎಸ್ ಕರಿಕ್ಕಳ, ಕೆ. ಕೃಷ್ಣಮೂರ್ತಿ ಭಟ್, ಬಾಲಕೃಷ್ಣ ಗೌಡ ಬಳ್ಳೇರಿ, ಮಾಧವ ಡಿ, ರಾಜೀವಿ.ಆರ್.ರೈ, ಮಾಸ್ಟರ್ ಪ್ಲಾನ್ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವರಾಮ ರೈ, ಸತೀಶ್ ಕೂಜುಗೋಡು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago