Advertisement
ಸುದ್ದಿಗಳು

ನೆರೆಪೀಡಿತರನ್ನು ಮರೆತು ಮೋದಿಯಿಂದ ವಿದೇಶದಲ್ಲಿ ರಾಜಕೀಯ ಶೋ- ರಮಾನಾಥ ರೈ ಟೀಕೆ

Share

ಸುಳ್ಯ:ರಾಜ್ಯದ ನೆರೆಪೀಡಿತರನ್ನು ಮರೆತು ಪ್ರಧಾನಮಂತ್ರಿ ನರೇಂದ್ರ ಮೋದಿ ವಿದೇಶದಲ್ಲಿ ರಾಜಕೀಯ ಶೋ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಟೀಕಿಸಿದ್ದಾರೆ.

ಅಕ್ಟೋಬರ್ ಎರಡರಂದು ಕಾಂಗ್ರೆಸ್ ವತಿಯಿಂದ ಮಂಗಳೂರಿನಲ್ಲಿ ನಡೆಯಲಿರುವ
ಗಾಂಧಿನಡಿಗೆ ಕುರಿತು ಚರ್ಚಿಸಲು ಸುಳ್ಯದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಸಾಮಾನ್ಯವಾಗಿ ಯಾವುದೇ ರಾಜ್ಯದಲ್ಲಿ ಪ್ರವಾಹ ಉಂಟಾದರೂ ಪ್ರಧಾನಮಂತ್ರಿಯಾದವರು ವೈಮಾನಿಕ ಸಮೀಕ್ಷೆ ನಡೆಸಿ ಪರಿಹಾರವನ್ನು ಘೋಷಣೆ ಮಾಡುತ್ತಾರೆ. ಆದರೆ ಕರ್ನಾಟಕ ರಾಜ್ಯ ತೀವ್ರತರಹದ ಪ್ರವಾಹಕ್ಕೆ ತುತ್ತಾಗಿ ಜನ ತತ್ತರಿಸಿದರೂ ಪ್ರಧಾನಿಗಳು ಈ ಕಡೆ ತಿರುಗಿ ನೋಡಲಿಲ್ಲ. ಪರಿಹಾರವನ್ನೂ ನೀಡಿಲ್ಲ. ಬದಲಾಗಿ ಅವರು ವಿದೇಶದಲ್ಲಿ ರಾಜಕೀಯ ಶೋ ನಡೆಸುವುದರಲ್ಲಿ ತಲ್ಲೀನರಾಗಿದ್ದಾರೆ ಎಂದು ಟೀಕಿಸಿದರು. ದೇಶ ಕಂಡು ಕೇಳರಿಯದ ರೀತಿಯಲ್ಲಿ ಆರ್ಥಿಕ ದುಸ್ಥಿತಿಯನ್ನು ಎದುರಿಸುತ್ತಿದೆ. ಜನರ ಜೀವನಾಡಿಯಾಗಿದ್ದ ಬಿಎಸ್ಎನ್ಎಲ್ ಸಂಪೂರ್ಣ ನಾಶದತ್ತ ಸಾಗಿದೆ. ಸರಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಅಭಿವೃದ್ಧಿಗೆ ಶ್ರಮಿಸದ ಕೇಂದ್ರ ಸರಕಾರ ಖಾಸಗೀ ಮೊಬೈಲ್ ಕಂಪೆನಿಗಳ ಬೆಳವಣಿಗೆಗೆ ಪರೋಕ್ಷ ಸಹಾಯ ಮಾಡಿದೆ ಎಂದು ಆರೋಪಿಸಿದರು.

ದ.ಕ.ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್‌.ಮಹಮ್ಮದ್, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ಮುಖಂಡರಾದ ಕಾವು ಹೇಮನಾಥ ಶೆಟ್ಟಿ, ಧನಂಜಯ ಅಡ್ಪಂಗಾಯ, ಭರತ್ ಮುಂಡೋಡಿ, ಎಂ.ವೆಂಕಪ್ಪ ಗೌಡ, ದಿವ್ಯಪ್ರಭಾ ಚಿಲ್ತಡ್ಕ, ಡಾ.ಬಿ.ರಘು, ರಾಜೀವಿ ರೈ, ಎಸ್.ಸಂಶುದ್ದೀನ್, ಚಂದ್ರಶೇಖರ ಕಾಮತ್, ಪಿ.ಸಿ.ಜಯರಾಮ, ಮಹಮ್ಮದ್ ಆಲಿ, ವಿಜಯಕುಮಾರ್ ರೈ, ಕಳಂಜ ವಿಶ್ವನಾಥ ರೈ, ಪಿ.ಎಸ್.ಗಂಗಾಧರ, ಅಶೋಕ್ ನೆಕ್ರಾಜೆ, ತೀರ್ಥರಾಮ ಜಾಲ್ಸೂರು, ಕೆ.ಎಂ.ಮುಸ್ತಪಾ, ಅನುಸೂಯ, ಲೀಲಾ ಮನಮೋಹನ್, ಲಕ್ಷ್ಮಿ ಸುಬ್ರಹ್ಮಣ್ಯ, ಬೀರಾಮೊಯ್ದೀನ್, ಸಿದ್ದಿಕ್ ಸುಳ್ಯ, ಶಾಫಿ ಕುತ್ತಮೊಟ್ಟೆ, ಭವಾನಿಶಂಕರ ಕಲ್ಮಡ್ಕ, ಲಕ್ಷ್ಮಣ ಶೆಣೈ, ಸುಧೀರ್ ರೈ ಮೇನಾಲ, ಪ್ರವೀಣಾ ಮರುವಂಜ, ಶ್ರೀಲತಾ ಪ್ರಸನ್ನ, ಸುಜಯಾ ಕೃಷ್ಣ, ಅನಿಲ್ ರೈ, ಸಚಿನ್ ರಾಜ್ ಶೆಟ್ಟಿ, ಶ್ರೀಹರಿ ಕುಕ್ಕುಡೇಲು, ನಂದರಾಜ ಸಂಕೇಶ, ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

40 minutes ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

12 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

16 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

17 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

19 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

20 hours ago