Advertisement
ಸುದ್ದಿಗಳು

ನೆರೆ ಸಂತ್ರಸ್ತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಂದಾದ ಶ್ರೀರಾಮಚಂದ್ರಾಪುರ ಮಠ

Share

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂದಾರು- ಮೊಗ್ರು ಗ್ರಾಮದ ಪ್ರವಾಹ ಸಂತ್ರಸ್ತ ಮಕ್ಕಳಿಗೆ ಉಚಿತ ಶಿಕ್ಷಣ ಕಲ್ಪಿಸುವ ಮಹತ್ವದ ಯೋಜನೆಯನ್ನು ಶ್ರೀರಾಮಚಂದ್ರಾಪುರ ಮಠ  ಪ್ರಕಟಿಸಿದೆ.

ಬೆಳ್ತಂಗಡಿ ತಾಲೂಕಿನ ಬಂದಾರು- ಮೊಗ್ರು ಗ್ರಾಮಗಳ ಸಂಪರ್ಕ ಸೇತುವಾಗಿದ್ದ ತೂಗುಸೇತುವೆ ಪ್ರವಾಹಕ್ಕೆ ಕೊಚ್ಚಿಹೋದ ಹಿನ್ನೆಲೆಯಲ್ಲಿ ಈ ಗ್ರಾಮಗಳ ಹತ್ತಾರು ಮಕ್ಕಳು ಶಾಲೆಗಳಿಗೆ ತೆರಳಲು ಸಾಧ್ಯವಾಗದೇ ಶಿಕ್ಷಣದಿಂದ ವಂಚಿತರಾಗುವ ಸ್ಥಿತಿ ನಿರ್ಮಾಣವಾಗಿತ್ತು. ಸಂತ್ರಸ್ತ ಮಕ್ಕಳ ಅಸಹಾಯಕ ಸ್ಥಿತಿಗೆ ಸ್ಪಂದಿಸಿದ ಶ್ರೀಮಠ ತಕ್ಷಣದಿಂದಲೇ ಉಭಯ ಗ್ರಾಮಗಳ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಂದಾಗಿದೆ.

 

ನೇತ್ರಾವತಿ ನದಿಗೆ ಮುಗೇರಡ್ಕ ಎಂಬಲ್ಲಿ ಅಡ್ಡಲಾಗಿ ಕಟ್ಟಿದ್ದ ತೂಗುಸೇತುವೆ ಈ ತಿಂಗಳ 8 ರಂದು  ಶ್ರೀಮಠದ ಅಂಗಸಂಸ್ಥೆಯಾದ ಉರುವಾಲಿನ ಶ್ರೀಭಾರತೀ ವಿದ್ಯಾಸಂಸ್ಥೆಯಲ್ಲಿ ಈ ಗ್ರಾಮಗಳ ಮಕ್ಕಳಿಗೆ ಉಚಿತವಾಗಿ ಶಿಕ್ಷಣಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಶ್ರೀಮಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಜಿ.ಭಟ್ ಪ್ರಕಟಿಸಿದ್ದಾರೆ.

ಈಗಾಗಲೇ ಬಾಗಲಕೋಟೆ ಜಿಲ್ಲೆಯಲ್ಲಿ ನೆರೆಯಿಂದ ಹಾನಿಗೀಡಾಗಿರುವ ಶಿವಯೋಗ ಮಂದಿರದ ಗೋವುಗಳಿಗೆ ಒಂದು ಲೋಡ್ ಮೇವನ್ನು ಶ್ರೀಮಠದ ವತಿಯಿಂದ ವಿತರಿಸಲಾಗಿದ್ದು, ಹಾನಗಲ್ ಮಠದ ಗೋಶಾಲೆಗೆ ಒಂದು ಲೋಡ್ ಮೇವು ವಿತರಿಸಲಾಗಿದೆ. ಶಿವಯೋಗ ಮಂದಿರಕ್ಕೆ ಸಿಂಧನೂರಿನಿಂದ ಎರಡು ಲೋಡ್ ಹಾಗೂ ದಾವಣಗೆರೆಯಿಂದ ಒಂದು ಲೋಡ್ ಮೇವನ್ನು ಗೋ ಪರಿವಾರ ವತಿಯಿಂದ ವಿತರಿಸಲಾಗಿದೆ.  ಶ್ರೀಮಠದ ನೂರಾರು ಕಾರ್ಯಕರ್ತರು ಪರಿಹಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶ್ರೀಮಠದ ಸೇವಾ ವಿಭಾಗದ ವತಿಯಿಂದ ಸಂತ್ರಸ್ತರಿಗೆ ಜೀವನಾವಶ್ಯಕ ಸಾಮಗ್ರಿಗಳನ್ನು ಪೂರೈಸಲಾಗಿದೆ. ಈಗಾಗಲೇ ಶ್ರೀಮಠದ ಎಲ್ಲ ಅಂಗಸಂಸ್ಥೆಗಳಲ್ಲಿ ನೆರೆ ಸಂತ್ರಸ್ತರಿಗೆ ಊಟೋಪಚಾರ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

1 hour ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

5 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

23 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago