Advertisement
ಸುದ್ದಿಗಳು

ನೆರೆ ಸಂತ್ರಸ್ತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಂದಾದ ಶ್ರೀರಾಮಚಂದ್ರಾಪುರ ಮಠ

Share

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂದಾರು- ಮೊಗ್ರು ಗ್ರಾಮದ ಪ್ರವಾಹ ಸಂತ್ರಸ್ತ ಮಕ್ಕಳಿಗೆ ಉಚಿತ ಶಿಕ್ಷಣ ಕಲ್ಪಿಸುವ ಮಹತ್ವದ ಯೋಜನೆಯನ್ನು ಶ್ರೀರಾಮಚಂದ್ರಾಪುರ ಮಠ  ಪ್ರಕಟಿಸಿದೆ.

ಬೆಳ್ತಂಗಡಿ ತಾಲೂಕಿನ ಬಂದಾರು- ಮೊಗ್ರು ಗ್ರಾಮಗಳ ಸಂಪರ್ಕ ಸೇತುವಾಗಿದ್ದ ತೂಗುಸೇತುವೆ ಪ್ರವಾಹಕ್ಕೆ ಕೊಚ್ಚಿಹೋದ ಹಿನ್ನೆಲೆಯಲ್ಲಿ ಈ ಗ್ರಾಮಗಳ ಹತ್ತಾರು ಮಕ್ಕಳು ಶಾಲೆಗಳಿಗೆ ತೆರಳಲು ಸಾಧ್ಯವಾಗದೇ ಶಿಕ್ಷಣದಿಂದ ವಂಚಿತರಾಗುವ ಸ್ಥಿತಿ ನಿರ್ಮಾಣವಾಗಿತ್ತು. ಸಂತ್ರಸ್ತ ಮಕ್ಕಳ ಅಸಹಾಯಕ ಸ್ಥಿತಿಗೆ ಸ್ಪಂದಿಸಿದ ಶ್ರೀಮಠ ತಕ್ಷಣದಿಂದಲೇ ಉಭಯ ಗ್ರಾಮಗಳ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಮುಂದಾಗಿದೆ.

 

ನೇತ್ರಾವತಿ ನದಿಗೆ ಮುಗೇರಡ್ಕ ಎಂಬಲ್ಲಿ ಅಡ್ಡಲಾಗಿ ಕಟ್ಟಿದ್ದ ತೂಗುಸೇತುವೆ ಈ ತಿಂಗಳ 8 ರಂದು  ಶ್ರೀಮಠದ ಅಂಗಸಂಸ್ಥೆಯಾದ ಉರುವಾಲಿನ ಶ್ರೀಭಾರತೀ ವಿದ್ಯಾಸಂಸ್ಥೆಯಲ್ಲಿ ಈ ಗ್ರಾಮಗಳ ಮಕ್ಕಳಿಗೆ ಉಚಿತವಾಗಿ ಶಿಕ್ಷಣಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಶ್ರೀಮಠದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಜಿ.ಭಟ್ ಪ್ರಕಟಿಸಿದ್ದಾರೆ.

ಈಗಾಗಲೇ ಬಾಗಲಕೋಟೆ ಜಿಲ್ಲೆಯಲ್ಲಿ ನೆರೆಯಿಂದ ಹಾನಿಗೀಡಾಗಿರುವ ಶಿವಯೋಗ ಮಂದಿರದ ಗೋವುಗಳಿಗೆ ಒಂದು ಲೋಡ್ ಮೇವನ್ನು ಶ್ರೀಮಠದ ವತಿಯಿಂದ ವಿತರಿಸಲಾಗಿದ್ದು, ಹಾನಗಲ್ ಮಠದ ಗೋಶಾಲೆಗೆ ಒಂದು ಲೋಡ್ ಮೇವು ವಿತರಿಸಲಾಗಿದೆ. ಶಿವಯೋಗ ಮಂದಿರಕ್ಕೆ ಸಿಂಧನೂರಿನಿಂದ ಎರಡು ಲೋಡ್ ಹಾಗೂ ದಾವಣಗೆರೆಯಿಂದ ಒಂದು ಲೋಡ್ ಮೇವನ್ನು ಗೋ ಪರಿವಾರ ವತಿಯಿಂದ ವಿತರಿಸಲಾಗಿದೆ.  ಶ್ರೀಮಠದ ನೂರಾರು ಕಾರ್ಯಕರ್ತರು ಪರಿಹಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶ್ರೀಮಠದ ಸೇವಾ ವಿಭಾಗದ ವತಿಯಿಂದ ಸಂತ್ರಸ್ತರಿಗೆ ಜೀವನಾವಶ್ಯಕ ಸಾಮಗ್ರಿಗಳನ್ನು ಪೂರೈಸಲಾಗಿದೆ. ಈಗಾಗಲೇ ಶ್ರೀಮಠದ ಎಲ್ಲ ಅಂಗಸಂಸ್ಥೆಗಳಲ್ಲಿ ನೆರೆ ಸಂತ್ರಸ್ತರಿಗೆ ಊಟೋಪಚಾರ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

4 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

4 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

14 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

15 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

2 days ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago