Advertisement
ಸುದ್ದಿಗಳು

ನೆರೆ ಹಾನಿ ಪ್ರದೇಶಕ್ಕೆ 30 ಕೋಟಿ ಬಿಡುಗಡೆ

Share

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ನೆರೆಹಾವಳಿಯಿಂದ ಕೃಷಿ ಭೂಮಿಗಳು ಹಾಗೂ ಕಿಂಡಿಅಣೆಕಟ್ಟುಗಳು, ಸೇತುವೆಗಳು ಹಾನಿಯಾಗಿದ್ದು ಇವುಗಳ ದುರಸ್ತಿ ಗೆ 30 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು  ಸಣ್ಣ ನೀರಾವರಿ ಇಲಾಖಾ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.

ಅವರು ಶನಿವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಬಳಿಕ ಪ್ರವಾಹ ಪೀಡಿತ ಪ್ರದೇಶಗಳಾದ ಕುಕ್ಕಾವು, ಪರ್ಲಾಣಿ, ಚಾರ್ಮಾಡಿ ಅರಣೆಪಾದೆ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.  ಅಣೆಕಟ್ಟುಗಳು, ಸೇತುವೆಗಳು ಹಾನಿಯಾಗಿದ್ದು ಮಳೆ ಕಡಿಮೆಯಾದ ತಕ್ಷಣ ಹಾನಿಯಾದ ಕಿಂಡಿಅಣೆಕಟ್ಟುಗಳ ದುರಸ್ಥಿ ಕಾರ್ಯ ಮಾಡಲಾಗುವುದು. ಅಲ್ಲದೆ ನೀರು, ಕೃಷಿ ಭೂಮಿಗೆ ಬರದ ರೀತಿಯಲ್ಲಿ ತಡೆಗೋಡೆ ನಿರ್ಮಾಣ ಮಾಡುವ ಬಗ್ಗೆ ಇಲ್ಲಿನ ಶಾಸಕರು ಈಗಾಗಲೇ ಮನವಿಮಾಡಿದ್ದು ಈ ಬಗ್ಗೆ ಇಲಾಖೆ ಗಂಭೀರವಾಗಿ ಚಿಂತಿಸಿದೆ ಎಂದರು.

ಶಾಸಕ ಹರೀಶ್ ಪೂಂಜಾ ತಾಲೂಕಿನಲ್ಲಿ ಹಾನಿಗೊಳಗಾದ ಪ್ರದೇಶದ ಬಗ್ಗೆ ಸಚಿವರಲ್ಲಿ ಮಾಹಿತಿ ನೀಡಿದರು. ಬಳಿಕ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದಕ್ಕೆ ಸಚಿವರು ಅನುದಾಣ ಬಿಡುಗಡೆಗೊಳಿಸುವ ಕುರಿತು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಚಾರ್ಮಾಡಿ ಗ್ರಾ.ಪಂ ಅಧ್ಯಕ್ಷೆ ಶೈಲಜಾ, ಜಿ.ಪಂ ಸದಸ್ಯೆ ಸೌಮ್ಯಲತಾ ಜಯಂತ್ ಗೌಡ, ತಾ.ಪಂ ಸದಸ್ಯ ಕೊರಗಪ್ಪ ಗೌಡ, ಸಣ್ಣ ನೀರಾವರಿ ಇಲಾಖಾ ಅಧೀನ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ, ಸಹಾಯಕ ಇಂಜಿನಿಯರ್ ಪ್ರಸನ್ನ, ರಾಕೇಶ್, ತಹಶಿಲ್ದಾರ್ ಗಣಪತಿ ಶಾಸ್ತ್ರಿ, ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಮ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಜಯಕೀರ್ತಿ, ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

5 minutes ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

15 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

16 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

21 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

2 days ago