ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ನೆರೆಹಾವಳಿಯಿಂದ ಕೃಷಿ ಭೂಮಿಗಳು ಹಾಗೂ ಕಿಂಡಿಅಣೆಕಟ್ಟುಗಳು, ಸೇತುವೆಗಳು ಹಾನಿಯಾಗಿದ್ದು ಇವುಗಳ ದುರಸ್ತಿ ಗೆ 30 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಮತ್ತು ಸಣ್ಣ ನೀರಾವರಿ ಇಲಾಖಾ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.
ಅವರು ಶನಿವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಬಳಿಕ ಪ್ರವಾಹ ಪೀಡಿತ ಪ್ರದೇಶಗಳಾದ ಕುಕ್ಕಾವು, ಪರ್ಲಾಣಿ, ಚಾರ್ಮಾಡಿ ಅರಣೆಪಾದೆ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಅಣೆಕಟ್ಟುಗಳು, ಸೇತುವೆಗಳು ಹಾನಿಯಾಗಿದ್ದು ಮಳೆ ಕಡಿಮೆಯಾದ ತಕ್ಷಣ ಹಾನಿಯಾದ ಕಿಂಡಿಅಣೆಕಟ್ಟುಗಳ ದುರಸ್ಥಿ ಕಾರ್ಯ ಮಾಡಲಾಗುವುದು. ಅಲ್ಲದೆ ನೀರು, ಕೃಷಿ ಭೂಮಿಗೆ ಬರದ ರೀತಿಯಲ್ಲಿ ತಡೆಗೋಡೆ ನಿರ್ಮಾಣ ಮಾಡುವ ಬಗ್ಗೆ ಇಲ್ಲಿನ ಶಾಸಕರು ಈಗಾಗಲೇ ಮನವಿಮಾಡಿದ್ದು ಈ ಬಗ್ಗೆ ಇಲಾಖೆ ಗಂಭೀರವಾಗಿ ಚಿಂತಿಸಿದೆ ಎಂದರು.
ಶಾಸಕ ಹರೀಶ್ ಪೂಂಜಾ ತಾಲೂಕಿನಲ್ಲಿ ಹಾನಿಗೊಳಗಾದ ಪ್ರದೇಶದ ಬಗ್ಗೆ ಸಚಿವರಲ್ಲಿ ಮಾಹಿತಿ ನೀಡಿದರು. ಬಳಿಕ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಇದಕ್ಕೆ ಸಚಿವರು ಅನುದಾಣ ಬಿಡುಗಡೆಗೊಳಿಸುವ ಕುರಿತು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಚಾರ್ಮಾಡಿ ಗ್ರಾ.ಪಂ ಅಧ್ಯಕ್ಷೆ ಶೈಲಜಾ, ಜಿ.ಪಂ ಸದಸ್ಯೆ ಸೌಮ್ಯಲತಾ ಜಯಂತ್ ಗೌಡ, ತಾ.ಪಂ ಸದಸ್ಯ ಕೊರಗಪ್ಪ ಗೌಡ, ಸಣ್ಣ ನೀರಾವರಿ ಇಲಾಖಾ ಅಧೀನ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ, ಸಹಾಯಕ ಇಂಜಿನಿಯರ್ ಪ್ರಸನ್ನ, ರಾಕೇಶ್, ತಹಶಿಲ್ದಾರ್ ಗಣಪತಿ ಶಾಸ್ತ್ರಿ, ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಮ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ, ಜಯಕೀರ್ತಿ, ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…