ಎಲಿಮಲೆ: ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿತ್ಯಾನಂದ ಮಾಪಲಕಜೆ ಸೇವೆಯಿಂದ ನಿವೃತ್ತ ರಾದರು.
ಸಹಕಾರಿ ಸಂಘದ ಮೊಳಹಳ್ಳಿ ಶಿವರಾವ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಸಂಘದ ಅಧ್ಯಕ್ಷ ವಿಷ್ಣು ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸಂಘದಲ್ಲಿ ನಿತ್ಯಾನಂದ ನಾಯಕ್ ಅವರ ಸೇವೆಯನ್ನು ಶ್ಲಾಘಿಸಿ ನಿವೃತ್ತ ಜೀವನಕ್ಕೆ ಶುಭಹಾರೈಸಿದರು.
ನಿತ್ಯಾನಂದ ನಾಯಕ್ ಹಿರಿಯ ಸಹೋದ್ಯೋಗಿಗಳಾಗಿದ್ದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎ.ವಿ.ಶ್ರೀನಿವಾಸ ರಾವ್ ಮತ್ತು ಸುಬ್ರಹ್ಮಣ್ಯ ಭಟ್ ಅವರುಗಳು ನಿತ್ಯಾನಂದ ನಾಯಕ್ ಅವರೊಂದಿಗಿನ ತಮ್ಮ ಸೇವಾವಧಿಯ ನೆನಪುಗಳನ್ನು ಮೆಲುಕು ಹಾಕಿದರು.
ನಿರ್ದೇಶಕ ಹಾಗೂ ಮಾಜಿ ಅಧ್ಯಕ್ಷ ಉಮೇಶ ಪ್ರಭು ಅವರು ನಿತ್ಯಾನಂದ ನಾಯಕ್ ಅವರು ಸಂಘದಲ್ಲಿ ಸಲ್ಲಿಸಿದ ಸೇವೆಯನ್ನು ಶ್ಲಾಘಿಸಿದರು. ಸೇವಾನಿವೃತ್ತ ನಿತ್ಯಾನಂದ ನಾಯಕ್ ಅವರು ತಮ್ಮ ಸೇವಾವಧಿಯಲ್ಲಿ ಸಹಕರಿಸಿದ ಎಲ್ಲರನ್ನೂ ನೆನಪಿಸಿಕೊಂಡು ಕೃತಜ್ಞತೆ ಸಲ್ಲಿಸಿದರು.
ಸಂಘದ ನಿಯೋಜಿತ ಮುಖ್ಯಕಾರ್ಯನಿರ್ವಹಣಾಧಿಕಾರಿ ಯು.ಜಗನ್ನಾಥ ಶೆಟ್ಟಿ ಅವರು ಕಾರ್ಯ ಕ್ರಮ ನಿರೂಪಿಸಿದರು. ಸಂಘದ ಉಪಾಧ್ಯಕ್ಷ ಮಹೇಶ ಗಟ್ಟಿಗಾರು ವಂದನಾರ್ಪಣೆಗೈದರು.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…