ಎಲಿಮಲೆ: ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿತ್ಯಾನಂದ ಮಾಪಲಕಜೆ ಸೇವೆಯಿಂದ ನಿವೃತ್ತ ರಾದರು.
ಸಹಕಾರಿ ಸಂಘದ ಮೊಳಹಳ್ಳಿ ಶಿವರಾವ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಸಂಘದ ಅಧ್ಯಕ್ಷ ವಿಷ್ಣು ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸಂಘದಲ್ಲಿ ನಿತ್ಯಾನಂದ ನಾಯಕ್ ಅವರ ಸೇವೆಯನ್ನು ಶ್ಲಾಘಿಸಿ ನಿವೃತ್ತ ಜೀವನಕ್ಕೆ ಶುಭಹಾರೈಸಿದರು.
ನಿತ್ಯಾನಂದ ನಾಯಕ್ ಹಿರಿಯ ಸಹೋದ್ಯೋಗಿಗಳಾಗಿದ್ದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎ.ವಿ.ಶ್ರೀನಿವಾಸ ರಾವ್ ಮತ್ತು ಸುಬ್ರಹ್ಮಣ್ಯ ಭಟ್ ಅವರುಗಳು ನಿತ್ಯಾನಂದ ನಾಯಕ್ ಅವರೊಂದಿಗಿನ ತಮ್ಮ ಸೇವಾವಧಿಯ ನೆನಪುಗಳನ್ನು ಮೆಲುಕು ಹಾಕಿದರು.
ನಿರ್ದೇಶಕ ಹಾಗೂ ಮಾಜಿ ಅಧ್ಯಕ್ಷ ಉಮೇಶ ಪ್ರಭು ಅವರು ನಿತ್ಯಾನಂದ ನಾಯಕ್ ಅವರು ಸಂಘದಲ್ಲಿ ಸಲ್ಲಿಸಿದ ಸೇವೆಯನ್ನು ಶ್ಲಾಘಿಸಿದರು. ಸೇವಾನಿವೃತ್ತ ನಿತ್ಯಾನಂದ ನಾಯಕ್ ಅವರು ತಮ್ಮ ಸೇವಾವಧಿಯಲ್ಲಿ ಸಹಕರಿಸಿದ ಎಲ್ಲರನ್ನೂ ನೆನಪಿಸಿಕೊಂಡು ಕೃತಜ್ಞತೆ ಸಲ್ಲಿಸಿದರು.
ಸಂಘದ ನಿಯೋಜಿತ ಮುಖ್ಯಕಾರ್ಯನಿರ್ವಹಣಾಧಿಕಾರಿ ಯು.ಜಗನ್ನಾಥ ಶೆಟ್ಟಿ ಅವರು ಕಾರ್ಯ ಕ್ರಮ ನಿರೂಪಿಸಿದರು. ಸಂಘದ ಉಪಾಧ್ಯಕ್ಷ ಮಹೇಶ ಗಟ್ಟಿಗಾರು ವಂದನಾರ್ಪಣೆಗೈದರು.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…