ಎಲಿಮಲೆ: ನೆಲ್ಲೂರು ಕೆಮ್ರಾಜೆ ಪ್ರಾ.ಕೃ.ಪ.ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿತ್ಯಾನಂದ ಮಾಪಲಕಜೆ ಸೇವೆಯಿಂದ ನಿವೃತ್ತ ರಾದರು.
ಸಹಕಾರಿ ಸಂಘದ ಮೊಳಹಳ್ಳಿ ಶಿವರಾವ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಸಂಘದ ಅಧ್ಯಕ್ಷ ವಿಷ್ಣು ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಸಂಘದಲ್ಲಿ ನಿತ್ಯಾನಂದ ನಾಯಕ್ ಅವರ ಸೇವೆಯನ್ನು ಶ್ಲಾಘಿಸಿ ನಿವೃತ್ತ ಜೀವನಕ್ಕೆ ಶುಭಹಾರೈಸಿದರು.
ನಿತ್ಯಾನಂದ ನಾಯಕ್ ಹಿರಿಯ ಸಹೋದ್ಯೋಗಿಗಳಾಗಿದ್ದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎ.ವಿ.ಶ್ರೀನಿವಾಸ ರಾವ್ ಮತ್ತು ಸುಬ್ರಹ್ಮಣ್ಯ ಭಟ್ ಅವರುಗಳು ನಿತ್ಯಾನಂದ ನಾಯಕ್ ಅವರೊಂದಿಗಿನ ತಮ್ಮ ಸೇವಾವಧಿಯ ನೆನಪುಗಳನ್ನು ಮೆಲುಕು ಹಾಕಿದರು.
ನಿರ್ದೇಶಕ ಹಾಗೂ ಮಾಜಿ ಅಧ್ಯಕ್ಷ ಉಮೇಶ ಪ್ರಭು ಅವರು ನಿತ್ಯಾನಂದ ನಾಯಕ್ ಅವರು ಸಂಘದಲ್ಲಿ ಸಲ್ಲಿಸಿದ ಸೇವೆಯನ್ನು ಶ್ಲಾಘಿಸಿದರು. ಸೇವಾನಿವೃತ್ತ ನಿತ್ಯಾನಂದ ನಾಯಕ್ ಅವರು ತಮ್ಮ ಸೇವಾವಧಿಯಲ್ಲಿ ಸಹಕರಿಸಿದ ಎಲ್ಲರನ್ನೂ ನೆನಪಿಸಿಕೊಂಡು ಕೃತಜ್ಞತೆ ಸಲ್ಲಿಸಿದರು.
ಸಂಘದ ನಿಯೋಜಿತ ಮುಖ್ಯಕಾರ್ಯನಿರ್ವಹಣಾಧಿಕಾರಿ ಯು.ಜಗನ್ನಾಥ ಶೆಟ್ಟಿ ಅವರು ಕಾರ್ಯ ಕ್ರಮ ನಿರೂಪಿಸಿದರು. ಸಂಘದ ಉಪಾಧ್ಯಕ್ಷ ಮಹೇಶ ಗಟ್ಟಿಗಾರು ವಂದನಾರ್ಪಣೆಗೈದರು.
ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…