ಎಲಿಮಲೆ : ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಷ್ಣು ಭಟ್ ಬಿ ಆಯ್ಕೆಯಾಗಿದ್ದಾರೆ. 6 – 4 ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ವಿಷ್ಣು ಭಟ್ ಮರುಆಯ್ಕೆಯಾಗಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆ ಬಳಿಕ ನಡೆದ ಬೆಳವಣಿಗೆಯಲ್ಲಿ ತಾಲೂಕಿನಿಂದ ಮತದಾನ ಮಾಡಿದ ಎಲ್ಲಾ 17 ಮಂದಿ ರಾಜೀನಾಮೆ ನೀಡುವಂತೆ ಬಿಜೆಪಿ ಹಾಗೂ ಸಂಘಪರಿವಾರ ಸೂಚನೆ ನೀಡಿತ್ತು. ಇದಕ್ಕೂ ಮೊದಲು ಕಾನತ್ತೂರುವರೆಗೂ ಈ ಪ್ರಕರಣ ಹೋಗಿತ್ತು. ಅದಾದ ನಂತರ ರಾಜೀನಾಮೆ ಪ್ರಕ್ರಿಯೆ ನಡೆದರೂ ಕೆಲವು ಕಡೆ ರಾಜೀನಾಮೆ ಪ್ರಕ್ರಿಯೆ ನಡೆದಿರಲಿಲ್ಲ. ನೆಲ್ಲೂರು ಕೆಮ್ರಾಜೆಯಲ್ಲಿ ಪಕ್ಷದ ಹಾಗೂ ಸಂಘಪರಿವಾರದ ಸೂಚನೆ ಮೇರೆಗೆ ಅಧ್ಯಕ್ಷರಾಗಿದ್ದ ವಿಷ್ಣು ಭಟ್ ರಾಜೀನಾಮೆ ನೀಡಿದ್ದರು. ಹೀಗಾಗಿ ತೆರವಾಗಿದ್ದ ಈ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು.
ಶುಕ್ರವಾರ ನಡೆದ ಚುನಾವಣೆಯಲ್ಲಿ ಸಹಕಾರಿ ಸಂಘದ ನಿರ್ದೇಶಕರುಗಳಾದ ವಿಷ್ಣು ಭಟ್ ಹಾಗೂ ಸವಿನ್ ಕೊಡಪ್ಪಾಲ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದರು. ಹೀಗಾಗಿ ಚುನಾವಣೆ ನಡೆಯಿತು. ವಿಷ್ಣು ಭಟ್ ಅವರ ಪರ 6 ಮತಗಳು ಹಾಗೂ ಸವಿನ್ ಕೊಡಪ್ಪಾಲ ಪರ 4 ಮತಗಳು ಬಂದವು. ಹೀಗಾಗಿ ವಿಷ್ಣು ಭಟ್ ಅವರು ಸಂಘದ ಅಧ್ಯಕ್ಷರಾಗಿ ಆಯ್ಕೆಯಾದರು.
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…
ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗಿನಲ್ಲಿ…