ಎಲಿಮಲೆ : ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಷ್ಣು ಭಟ್ ಬಿ ಆಯ್ಕೆಯಾಗಿದ್ದಾರೆ. 6 – 4 ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ವಿಷ್ಣು ಭಟ್ ಮರುಆಯ್ಕೆಯಾಗಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆ ಬಳಿಕ ನಡೆದ ಬೆಳವಣಿಗೆಯಲ್ಲಿ ತಾಲೂಕಿನಿಂದ ಮತದಾನ ಮಾಡಿದ ಎಲ್ಲಾ 17 ಮಂದಿ ರಾಜೀನಾಮೆ ನೀಡುವಂತೆ ಬಿಜೆಪಿ ಹಾಗೂ ಸಂಘಪರಿವಾರ ಸೂಚನೆ ನೀಡಿತ್ತು. ಇದಕ್ಕೂ ಮೊದಲು ಕಾನತ್ತೂರುವರೆಗೂ ಈ ಪ್ರಕರಣ ಹೋಗಿತ್ತು. ಅದಾದ ನಂತರ ರಾಜೀನಾಮೆ ಪ್ರಕ್ರಿಯೆ ನಡೆದರೂ ಕೆಲವು ಕಡೆ ರಾಜೀನಾಮೆ ಪ್ರಕ್ರಿಯೆ ನಡೆದಿರಲಿಲ್ಲ. ನೆಲ್ಲೂರು ಕೆಮ್ರಾಜೆಯಲ್ಲಿ ಪಕ್ಷದ ಹಾಗೂ ಸಂಘಪರಿವಾರದ ಸೂಚನೆ ಮೇರೆಗೆ ಅಧ್ಯಕ್ಷರಾಗಿದ್ದ ವಿಷ್ಣು ಭಟ್ ರಾಜೀನಾಮೆ ನೀಡಿದ್ದರು. ಹೀಗಾಗಿ ತೆರವಾಗಿದ್ದ ಈ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು.
ಶುಕ್ರವಾರ ನಡೆದ ಚುನಾವಣೆಯಲ್ಲಿ ಸಹಕಾರಿ ಸಂಘದ ನಿರ್ದೇಶಕರುಗಳಾದ ವಿಷ್ಣು ಭಟ್ ಹಾಗೂ ಸವಿನ್ ಕೊಡಪ್ಪಾಲ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದರು. ಹೀಗಾಗಿ ಚುನಾವಣೆ ನಡೆಯಿತು. ವಿಷ್ಣು ಭಟ್ ಅವರ ಪರ 6 ಮತಗಳು ಹಾಗೂ ಸವಿನ್ ಕೊಡಪ್ಪಾಲ ಪರ 4 ಮತಗಳು ಬಂದವು. ಹೀಗಾಗಿ ವಿಷ್ಣು ಭಟ್ ಅವರು ಸಂಘದ ಅಧ್ಯಕ್ಷರಾಗಿ ಆಯ್ಕೆಯಾದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…