Advertisement
ಸುದ್ದಿಗಳು

ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷತೆಗೆ ಚುನಾವಣೆ : ವಿಷ್ಣು ಭಟ್ ಗೆಲುವು

Share

ಎಲಿಮಲೆ : ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಷ್ಣು ಭಟ್ ಬಿ ಆಯ್ಕೆಯಾಗಿದ್ದಾರೆ. 6 – 4 ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ವಿಷ್ಣು ಭಟ್ ಮರುಆಯ್ಕೆಯಾಗಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆ ಬಳಿಕ ನಡೆದ ಬೆಳವಣಿಗೆಯಲ್ಲಿ ತಾಲೂಕಿನಿಂದ ಮತದಾನ ಮಾಡಿದ  ಎಲ್ಲಾ 17 ಮಂದಿ ರಾಜೀನಾಮೆ ನೀಡುವಂತೆ ಬಿಜೆಪಿ ಹಾಗೂ ಸಂಘಪರಿವಾರ ಸೂಚನೆ ನೀಡಿತ್ತು. ಇದಕ್ಕೂ ಮೊದಲು ಕಾನತ್ತೂರುವರೆಗೂ ಈ ಪ್ರಕರಣ ಹೋಗಿತ್ತು. ಅದಾದ ನಂತರ ರಾಜೀನಾಮೆ ಪ್ರಕ್ರಿಯೆ ನಡೆದರೂ ಕೆಲವು ಕಡೆ ರಾಜೀನಾಮೆ ಪ್ರಕ್ರಿಯೆ  ನಡೆದಿರಲಿಲ್ಲ. ನೆಲ್ಲೂರು ಕೆಮ್ರಾಜೆಯಲ್ಲಿ ಪಕ್ಷದ ಹಾಗೂ ಸಂಘಪರಿವಾರದ ಸೂಚನೆ ಮೇರೆಗೆ ಅಧ್ಯಕ್ಷರಾಗಿದ್ದ ವಿಷ್ಣು ಭಟ್ ರಾಜೀನಾಮೆ ನೀಡಿದ್ದರು.  ಹೀಗಾಗಿ ತೆರವಾಗಿದ್ದ ಈ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು.

ಶುಕ್ರವಾರ ನಡೆದ ಚುನಾವಣೆಯಲ್ಲಿ ಸಹಕಾರಿ ಸಂಘದ  ನಿರ್ದೇಶಕರುಗಳಾದ ವಿಷ್ಣು ಭಟ್  ಹಾಗೂ ಸವಿನ್ ಕೊಡಪ್ಪಾಲ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದರು. ಹೀಗಾಗಿ ಚುನಾವಣೆ ನಡೆಯಿತು. ವಿಷ್ಣು ಭಟ್ ಅವರ ಪರ 6 ಮತಗಳು ಹಾಗೂ ಸವಿನ್ ಕೊಡಪ್ಪಾಲ ಪರ 4 ಮತಗಳು ಬಂದವು. ಹೀಗಾಗಿ ವಿಷ್ಣು ಭಟ್ ಅವರು ಸಂಘದ ಅಧ್ಯಕ್ಷರಾಗಿ ಆಯ್ಕೆಯಾದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ

ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…

50 minutes ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

1 hour ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

7 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

18 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

22 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

23 hours ago