ಎಲಿಮಲೆ : ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಷ್ಣು ಭಟ್ ಬಿ ಆಯ್ಕೆಯಾಗಿದ್ದಾರೆ. 6 – 4 ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ವಿಷ್ಣು ಭಟ್ ಮರುಆಯ್ಕೆಯಾಗಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆ ಬಳಿಕ ನಡೆದ ಬೆಳವಣಿಗೆಯಲ್ಲಿ ತಾಲೂಕಿನಿಂದ ಮತದಾನ ಮಾಡಿದ ಎಲ್ಲಾ 17 ಮಂದಿ ರಾಜೀನಾಮೆ ನೀಡುವಂತೆ ಬಿಜೆಪಿ ಹಾಗೂ ಸಂಘಪರಿವಾರ ಸೂಚನೆ ನೀಡಿತ್ತು. ಇದಕ್ಕೂ ಮೊದಲು ಕಾನತ್ತೂರುವರೆಗೂ ಈ ಪ್ರಕರಣ ಹೋಗಿತ್ತು. ಅದಾದ ನಂತರ ರಾಜೀನಾಮೆ ಪ್ರಕ್ರಿಯೆ ನಡೆದರೂ ಕೆಲವು ಕಡೆ ರಾಜೀನಾಮೆ ಪ್ರಕ್ರಿಯೆ ನಡೆದಿರಲಿಲ್ಲ. ನೆಲ್ಲೂರು ಕೆಮ್ರಾಜೆಯಲ್ಲಿ ಪಕ್ಷದ ಹಾಗೂ ಸಂಘಪರಿವಾರದ ಸೂಚನೆ ಮೇರೆಗೆ ಅಧ್ಯಕ್ಷರಾಗಿದ್ದ ವಿಷ್ಣು ಭಟ್ ರಾಜೀನಾಮೆ ನೀಡಿದ್ದರು. ಹೀಗಾಗಿ ತೆರವಾಗಿದ್ದ ಈ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು.
ಶುಕ್ರವಾರ ನಡೆದ ಚುನಾವಣೆಯಲ್ಲಿ ಸಹಕಾರಿ ಸಂಘದ ನಿರ್ದೇಶಕರುಗಳಾದ ವಿಷ್ಣು ಭಟ್ ಹಾಗೂ ಸವಿನ್ ಕೊಡಪ್ಪಾಲ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದರು. ಹೀಗಾಗಿ ಚುನಾವಣೆ ನಡೆಯಿತು. ವಿಷ್ಣು ಭಟ್ ಅವರ ಪರ 6 ಮತಗಳು ಹಾಗೂ ಸವಿನ್ ಕೊಡಪ್ಪಾಲ ಪರ 4 ಮತಗಳು ಬಂದವು. ಹೀಗಾಗಿ ವಿಷ್ಣು ಭಟ್ ಅವರು ಸಂಘದ ಅಧ್ಯಕ್ಷರಾಗಿ ಆಯ್ಕೆಯಾದರು.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…