ಎಲಿಮಲೆ : ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಿಷ್ಣು ಭಟ್ ಬಿ ಆಯ್ಕೆಯಾಗಿದ್ದಾರೆ. 6 – 4 ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದಲ್ಲಿ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ವಿಷ್ಣು ಭಟ್ ಮರುಆಯ್ಕೆಯಾಗಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆ ಬಳಿಕ ನಡೆದ ಬೆಳವಣಿಗೆಯಲ್ಲಿ ತಾಲೂಕಿನಿಂದ ಮತದಾನ ಮಾಡಿದ ಎಲ್ಲಾ 17 ಮಂದಿ ರಾಜೀನಾಮೆ ನೀಡುವಂತೆ ಬಿಜೆಪಿ ಹಾಗೂ ಸಂಘಪರಿವಾರ ಸೂಚನೆ ನೀಡಿತ್ತು. ಇದಕ್ಕೂ ಮೊದಲು ಕಾನತ್ತೂರುವರೆಗೂ ಈ ಪ್ರಕರಣ ಹೋಗಿತ್ತು. ಅದಾದ ನಂತರ ರಾಜೀನಾಮೆ ಪ್ರಕ್ರಿಯೆ ನಡೆದರೂ ಕೆಲವು ಕಡೆ ರಾಜೀನಾಮೆ ಪ್ರಕ್ರಿಯೆ ನಡೆದಿರಲಿಲ್ಲ. ನೆಲ್ಲೂರು ಕೆಮ್ರಾಜೆಯಲ್ಲಿ ಪಕ್ಷದ ಹಾಗೂ ಸಂಘಪರಿವಾರದ ಸೂಚನೆ ಮೇರೆಗೆ ಅಧ್ಯಕ್ಷರಾಗಿದ್ದ ವಿಷ್ಣು ಭಟ್ ರಾಜೀನಾಮೆ ನೀಡಿದ್ದರು. ಹೀಗಾಗಿ ತೆರವಾಗಿದ್ದ ಈ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು.
ಶುಕ್ರವಾರ ನಡೆದ ಚುನಾವಣೆಯಲ್ಲಿ ಸಹಕಾರಿ ಸಂಘದ ನಿರ್ದೇಶಕರುಗಳಾದ ವಿಷ್ಣು ಭಟ್ ಹಾಗೂ ಸವಿನ್ ಕೊಡಪ್ಪಾಲ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದರು. ಹೀಗಾಗಿ ಚುನಾವಣೆ ನಡೆಯಿತು. ವಿಷ್ಣು ಭಟ್ ಅವರ ಪರ 6 ಮತಗಳು ಹಾಗೂ ಸವಿನ್ ಕೊಡಪ್ಪಾಲ ಪರ 4 ಮತಗಳು ಬಂದವು. ಹೀಗಾಗಿ ವಿಷ್ಣು ಭಟ್ ಅವರು ಸಂಘದ ಅಧ್ಯಕ್ಷರಾಗಿ ಆಯ್ಕೆಯಾದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…