ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಾಗಾರ

June 11, 2019
1:17 PM

ಸುಳ್ಯ: ಬೋಧನೆ ಮತ್ತು ಕಲಿಕೆ ಜೊತೆ ಜೊತಯಲ್ಲಿ ಸಾಗಬೇಕು. ಬೋಧನಾ ಕೌಶಲವನ್ನು ಮಕ್ಕಳ ಬೌದ್ಧಿಕ ಮಟ್ಟವನ್ನು ಅರಿತು ಬೋಧಿಸುವ ಕಲೆಯನ್ನು ಸಿದ್ಧಿಸಿಕೊಳ್ಳಬೇಕು. ಆಗ ಕಲಿಕಾ ಪ್ರಕ್ರಿಯೆ ಸುಗಮವಾಗಿ ಸಾಗುತ್ತದೆ ಎಂದು  ವಿವೇಕಾನಂದ ಕಾಲೇಜಿನ  ವಿಶ್ರಾಂತ ಪ್ರಾಂಶುಪಾಲರು   ಡಾ। ಮಾಧವ ಭಟ್ ಅವರು ಹೇಳಿದರು.

Advertisement
Advertisement

ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ  ಆಯೋಜಿಸಲಾದ ಪುನಶ್ಚೇತನ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.  ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ   ಜಗದೀಶ್ ಅಡ್ತಲೆ  , ನೆಹರು ಮೆಮೋರಿಯಲ್ ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಪ್ರೊ। ಬಾಲಚಂದ್ರ ಗೌಡ  ಎಂ ಅವರು ಶುಭ ಹಾರೈಸಿದರು .

ಸಮಾರಂಭದ ವೇದಿಕೆಯಲ್ಲಿ  ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ। ಗಿರಿಧರ ಗೌಡ , ಕೆವಿಜಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಉದಯ ಕೃಷ್ಣ  ಬಿ ,ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಹರಿಣಿ ಪುತ್ತೂರಾಯ ಉಪಸ್ಥಿತರಿದ್ದರು.

ಆರಂಭದಲ್ಲಿ ಉಪನ್ಯಾಸಕಿ  ರಾಜೇಶ್ವರಿ ಪ್ರಾರ್ಥಿಸಿದರು. ವಿದ್ಯಾರ್ಥಿ ಕ್ಷೇಮಾಧಿಕಾರಿ ಲಕ್ಷ್ಮಣ್ ಏನೆಕಲ್ ಸ್ವಾಗತಿಸಿ ವಂದಿಸಿದರು.

ಬಳಿಕ ವಿವಿಧ ಕ್ರಿಯಾತ್ಮಕ ಚಟುವಟಿಕೆಗಳನ್ನು ನಡೆಸುವ ಮೂಲಕ ತರಬೇತಿಯನ್ನು ಸಂಪನ್ಮೂಲ ವ್ಯಕಿಗಳಾದ ಡಾ। ಮಾಧವ ಭಟ್ ಅವರು ನಡೆಸಿಕೊಟ್ಟರು.  ಈ ತರಭೇತಿಯಲ್ಲಿ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು, ಕೆವಿಜಿ ಕಾನೂನು ಮಹಾವಿದ್ಯಾಲಯದ  ಉಪನ್ಯಾಸಕರು ಭಾಗವಹಿಸಿದ್ದರು.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಹಿಳಾ ಗ್ರಾಮಸಭೆ | ರಾಷ್ಟೀಯ ಕೃಷಿ ವಿಕಾಸ ಯೋಜನೆ ಬಗ್ಗೆ ಮಾಹಿತಿ ನೀಡಿದ ವಿಜ್ಞಾನಿ
May 25, 2025
5:57 AM
by: The Rural Mirror ಸುದ್ದಿಜಾಲ
ಮರ್ಕಂಜ ಪ್ರಶಾಂತ್ ಕೆ ಅವರಿಗೆ ಕರ್ನಾಟಕ ಲಲಿತಕಲಾ ಅಕಾಡೆಮಿ 52 ನೇ ವಾರ್ಷಿಕ ಬಹುಮಾನ
May 25, 2025
5:48 AM
by: The Rural Mirror ಸುದ್ದಿಜಾಲ
ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಯುವಕ
May 3, 2025
6:28 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group