ಸುಳ್ಯ:ಭಾರತದಲ್ಲಿ ಜನರು ತಮ್ಮ ತಮ್ಮ ಆಚರಣೆಯಲ್ಲಿ , ಪದ್ಧತಿ ಮತ್ತು ಪರಂಪರೆಯಲ್ಲಿ ಜಾತ್ಯಾತೀತ ಎಂಬ ಅಂಶವನ್ನು ಮೈಗೂಡಿಸಿಕೊಂಡು ಸಹಬಾಳ್ವೆಯಿಂದ ಜೀವಿಸುವ ಮನೋಪ್ರವೃತ್ತಿ ಯನ್ನು ಹೊಂದಿದವರು. ಅದಕ್ಕೆ ಯಾವತ್ತೂ ದಕ್ಕೆ ಬಾರದ ರೀತಿಯಲ್ಲಿ ಮುಂದುವರಿಯುತ್ತಾ ಬಾಳಬೇಕು ಎಂದು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಅವರು ನುಡಿದರು.
ಅವರು ಕಾಲೇಜಿನಲ್ಲಿ ಆಯೋಜಿಸಲಾದ ಸದ್ಭಾವನಾ ದಿನಾಚರಣೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಕೇವಲ ಕಾಟಾಚಾರಕ್ಕಾಗಿ ಈ ದಿನಾಚರಣೆಯನ್ನು ಆಚರಿಸದೆ, ನಾವು ಮಾಡುವ ಪ್ರತಿಯೊಂದು ಕೆಲಸದಲ್ಲಿ ಯಾವುದೇ ಜಾತಿ, ಧರ್ಮ, ಮತ ಎಂಬ ಬೇಧಭಾವ ಇಲ್ಲದೆ ಒಟ್ಟಾಗಿ ಕೆಲಸ ಮಾಡುವ ಮಾನಸಿಕತೆಯನ್ನು ಬೆಳೆಸಿಕೊಳ್ಳಬೇಕು ಎಂದರು.ನಮ್ಮ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು, ದೇಶದ ಸಂವಿಧಾನ ಮತ್ತು ಕಾನೂನುಗಳನ್ನು ಗೌರವಿಸುತ್ತಾ , ಸೌಹಾರ್ದತೆಯಿಂದ ಬಾಳಿದಾಗ ಸದೃಢ ಭಾರತ ನಮ್ಮದಾಗುತ್ತದೆ ಎಂದರು. ನಂತರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಪ್ರಾಂಶುಪಾಲರು ಬೋಧಿಸಿದರು.
ಕಾಲೇಜಿನ ಉಪನ್ಯಾಸಕ ವೃಂದವರು ಭಾಗವಹಿಸಿದ್ದರು.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…