ಸುಳ್ಯ:ಭಾರತದಲ್ಲಿ ಜನರು ತಮ್ಮ ತಮ್ಮ ಆಚರಣೆಯಲ್ಲಿ , ಪದ್ಧತಿ ಮತ್ತು ಪರಂಪರೆಯಲ್ಲಿ ಜಾತ್ಯಾತೀತ ಎಂಬ ಅಂಶವನ್ನು ಮೈಗೂಡಿಸಿಕೊಂಡು ಸಹಬಾಳ್ವೆಯಿಂದ ಜೀವಿಸುವ ಮನೋಪ್ರವೃತ್ತಿ ಯನ್ನು ಹೊಂದಿದವರು. ಅದಕ್ಕೆ ಯಾವತ್ತೂ ದಕ್ಕೆ ಬಾರದ ರೀತಿಯಲ್ಲಿ ಮುಂದುವರಿಯುತ್ತಾ ಬಾಳಬೇಕು ಎಂದು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಪ್ರಾಂಶುಪಾಲೆ ಹರಿಣಿ ಪುತ್ತೂರಾಯ ಅವರು ನುಡಿದರು.
ಅವರು ಕಾಲೇಜಿನಲ್ಲಿ ಆಯೋಜಿಸಲಾದ ಸದ್ಭಾವನಾ ದಿನಾಚರಣೆಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಕೇವಲ ಕಾಟಾಚಾರಕ್ಕಾಗಿ ಈ ದಿನಾಚರಣೆಯನ್ನು ಆಚರಿಸದೆ, ನಾವು ಮಾಡುವ ಪ್ರತಿಯೊಂದು ಕೆಲಸದಲ್ಲಿ ಯಾವುದೇ ಜಾತಿ, ಧರ್ಮ, ಮತ ಎಂಬ ಬೇಧಭಾವ ಇಲ್ಲದೆ ಒಟ್ಟಾಗಿ ಕೆಲಸ ಮಾಡುವ ಮಾನಸಿಕತೆಯನ್ನು ಬೆಳೆಸಿಕೊಳ್ಳಬೇಕು ಎಂದರು.ನಮ್ಮ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು, ದೇಶದ ಸಂವಿಧಾನ ಮತ್ತು ಕಾನೂನುಗಳನ್ನು ಗೌರವಿಸುತ್ತಾ , ಸೌಹಾರ್ದತೆಯಿಂದ ಬಾಳಿದಾಗ ಸದೃಢ ಭಾರತ ನಮ್ಮದಾಗುತ್ತದೆ ಎಂದರು. ನಂತರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಪ್ರಾಂಶುಪಾಲರು ಬೋಧಿಸಿದರು.
ಕಾಲೇಜಿನ ಉಪನ್ಯಾಸಕ ವೃಂದವರು ಭಾಗವಹಿಸಿದ್ದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…